Andolana originals

ಇಂಜಿನಿಯರಿಂಗ್ ಕಾಲೇಜು ಫಲಿತಾಂಶ ಪ್ರಕಟ

‘ಆಂದೋಲನ’ ವರದಿಗೆ ಎಚ್ಚೆತ್ತುಕೊಂಡ ವಿವಿ ಆಡಳಿತ ಮಂಡಳಿ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೨, ೪ ಹಾಗೂ ೬ನೇ ಸೆಮಿಸ್ಟರ್ಗಳ ಫಲಿತಾಂಶ ಬುಧವಾರ ಬಿಡುಗಡೆಯಾಗಿದೆ.

‘ಆಂದೋಲನ’ ದಿನ ಪತ್ರಿಕೆ ನ.೧೨ರಂದು ‘ಪರೀಕ್ಷೆ ಮುಗಿದು ನಾಲ್ಕು ತಿಂಗಳು; ಫಲಿತಾಂಶ ಗೋಜಲು’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಪ್ರಕಟಗೊಂಡ ಕೂಡಲೇ ಎಚ್ಚೆತ್ತುಕೊಂಡು ವಿವಿಯ ಆಡಳಿತ ಮಂಡಳಿ ರೆಗ್ಯುಲರ್ ಮತ್ತು ಬಾಕಿ ವಿಷಯಗಳ ಫಲಿತಾಂಶ ಬಿಡುಗಡೆ ಮಾಡಿದೆ.

ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಗೋವಿಂದೇ ಗೌಡ ಅವರು ಫಲಿತಾಂಶ ಪ್ರಕಟಣೆಯ ಸುತ್ತೋಲೆ ಹೊರಡಿಸಿದ್ದು, ಕಾಲೇಜಿನ ಸೂಚನಾ ಫಲಕದಲ್ಲಿ ಫಲಿತಾಂಶ ಪಟ್ಟಿ ಪ್ರಕಟಿಸಿದ್ದಾರೆ.

ಮುಗಿಯದ ಡೇಟಾ ಎಂಟ್ರಿ ಸಮಸ್ಯೆ: ನಾಲ್ಕು ತಿಂಗಳ ಬಳಿಕ ಫಲಿತಾಂಶ ಬಿಡುಗಡೆಗೊಂಡಿರುವುದು ಸಂತಸವೇ. ಆದರೆ, ಆನ್ ಲೈನ್‌ನಲ್ಲಿ ಫಲಿತಾಂಶ ಬಿಡುಗಡೆಯಾಗದಿರುವುದು ಡೇಟಾ ಎಂಟ್ರಿ ಸಮಸ್ಯೆಗೆ ಹಿಡಿದ ಕನ್ನಡಿಯಾಗಿದೆ.

ಫಲಿತಾಂಶ ಆನ್ ಲೈನ್‌ನಲ್ಲಿ ಬಿಡುಗಡೆಗೊಂಡಿದ್ದರೆ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಈಗ ಮತ್ತೆ ಅಂಕಪಟ್ಟಿಗಾಗಿ ಕಾಯಬೇಕಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೀಘ್ರದಲ್ಲಿ ಆನ್‌ಲೈನ್‌ನಲ್ಲಿ ಫಲಿತಾಂಶ ಬಿಡುಗಡೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

” ತಾಂತ್ರಿಕ ಸಮಸ್ಯೆಯಿಂದ ಫಲಿತಾಂಶವನ್ನು ಆನ್ ಲೈನ್‌ನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು. ಅಂಕಪಟ್ಟಿ ಅತ್ಯಂತ ಅವಶ್ಯವಾಗಿರುವ ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಿದರೆ ತಾತ್ಕಾಲಿಕ ಅಂಕಪಟ್ಟಿ ನೀಡಲಾಗುವುದು.”

-ಎಂ.ಎಸ್.ಗೋವಿಂದೇಗೌಡ, ಪ್ರಾಂಶುಪಾಲ, ಮೈಸೂರು ವಿವಿ ಸ್ಕೂಲ್ ಆಫ್‌ ಇಂಜಿನಿಯರಿಂಗ್

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

10 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

10 hours ago