Andolana originals

ಬೆಳೆಗಳ ಕುರಿತು ಮಾಹಿತಿ ಪಡೆದ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ.ಪಿ.ಜಗದೀಶ್ ಅವರ ಜಮೀನಿಗೆ ಭೇಟಿ 

ಕೆ.ಆರ್.ನಗರ: ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರದ ಬಗ್ಗೆ ಅವಗಣನೆಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಮೈಸೂರಿನ ಜಿ.ಎಸ್.ಎಸ್.ಎಸ್. ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಪಡೆಯಲು ಪಟ್ಟಣದ ಹೊರವಲಯದ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಪಿ.ಜಗದೀಶ್ ಅವರ ಜಮೀನಿಗೆ ಭೇಟಿ ನೀಡಿ ಅಧ್ಯಯನ ನಡೆಸಿದರು.

ಮೈಸೂರಿನ ಜಿ.ಎಸ್.ಎಸ್.ಎಸ್. ಇಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ಎಲೆಕ್ಟ್ರಾನಿಕ್- ಕಮ್ಯೂನಿ ಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೋನಿಕಾ, ಮೋನಿಶಾ, ಎಸ್. ಕೆ.ಕೀರ್ತನಾ, ಎನ್.ಪೂಜಾ, ಆರ್. ಕೀರ್ತನಾ, ನಂದಿನಿ, ಖುಷಿ, ಎಂ. ಕೋಮಲ ಅವರನ್ನು ಒಳಗೊಂಡ ತಂಡ ಆಗಮಿಸಿ ಜಮೀನಿನಲ್ಲಿ ಬೆಳೆದಿರುವ ಸಮಗ್ರ ಬೆಳೆಗಳ ಬಗ್ಗೆ ಜಗದೀಶ್ ಅವರಿಂದ ಮಾಹಿತಿ ಪಡೆದುಕೊಂಡಿತು.

ತೋಟಗಾರಿಕೆ ಬೆಳೆಗಳ ಸಸ್ಯಾಭಿವೃದ್ಧಿ ವಿಧಾನ, ಸಸಿ ಮಡಿ ಮಾಡುವ ವಿಧಾನ, ಮಣ್ಣಿನ ಫಲವತ್ತತೆ ಬಗ್ಗೆ, ಹೈಡೋಪೋನಿಕ್ಸ್, ಎರೆಹುಳು ಗೊಬ್ಬರ ಹಾಗೂ ಸುಧಾರಿತ ಕಾಂಪೋಸ್ಟ್ ತಯಾರಿಕಾ ವಿಧಾನಗಳ ಬಗ್ಗೆ ಕೆ.ಪಿ.ಜಗದೀಶ್ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ತೋಟಗಾರಿಕೆ ಬೆಳೆಗಳಾದ ಅಡಕೆ, ತೆಂಗು, ಮೆಣಸು, ಏಲಕ್ಕಿ, ಕಾಫಿ, ಚಕ್ಕೋತ, ಬಾಳೆ, ರಾಮಫಲ, ಸೀತಾಫಲ, ಲಕ್ಷಣ ಫಲ, ಹನುಮ ಫಲ, ಬಟರ್‌ ಫ್ರೂಟ್, ವಾಟರ್ ಆಪಲ್, ಆಸ್ಟ್ರೇಲಿಯಾ ಅಂಜೂರ, ಖರ್ಜೂರ, ಸೇಬು, ದಾಳಿಂಬೆ, ವರ್ಷಪೂರ್ತಿ ಬಿಡುವ ಮಾವಿನ ಹಣ್ಣು, ಇಂಗು, ಮೋಸಂಬಿ, ಕಿತ್ತಳೆ, ಡ್ರಾಗನ್, ಮೈಸೂರು ವೀಳ್ಯದೆಲೆ, ದ್ರಾಕ್ಷಿ, ಆಲ್ ಸೈಸಿ, ನಿಂಬೆ, ಹೇರಳೆಕಾಯಿ, ಪಚ್ಚ ಬಾಳೆಗಳನ್ನು ಹೇಗೆ ಬೆಳೆಯಲಾಗುತ್ತದೆ ಎಂಬುದರ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು. ಜಮೀನಿನ ಬದುವಿನಲ್ಲಿ ವಿವಿಧ ಮಾದರಿಯ ಹೂಗಿಡಗಳು, ಪಪ್ಪಾಯಿ ಸೇರಿದಂತೆ ಹಣ್ಣಿನ ಗಿಡಗಳನ್ನು ಬೆಳೆಸಿದ್ದು, ಅವುಗಳ ಕುರಿತೂ ಮಾಹಿತಿ ಪಡೆದರು. ಕೃಷಿ ಬೆಳೆಗಳಾದ ಭತ್ತ ಮತ್ತು ರಾಗಿ, ಜೋಳದ ಬೆಳೆಗಳ ಬಗ್ಗೆ ಕೂಡ ಅರಿತರು.

ಬಳಿಕ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೋನಿಕಾ ಪತ್ರಿಕೆಯೊಂದಿಗೆ ಮಾತನಾಡಿ, ಪ್ರಸ್ತುತ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳನ್ನು ಹೇಗೆ ಬೆಳೆಯುತ್ತಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲವಾಗಿದೆ. ಈ ಬಗ್ಗೆ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳನ್ನು ಹೇಗೆ ಬೆಳೆಯುತ್ತಾರೆ ಎಂಬುದರ ಬಗ್ಗೆ ಅರಿವು ಮೂಡಿಸಲು ಮತ್ತು ಎಲೆಕ್ಟ್ರಾನಿಕ್-ಕಮ್ಯೂನಿಕೇಷನ್ ವಿಭಾಗದಲ್ಲಿ ಕೃಷಿ ಮತ್ತು ತೋಟಗಾರಿಕೆ ಬಗ್ಗೆ ೧೦೦ ಅಂಕಗಳ ಪ್ರಶ್ನೆ ಇದ್ದು ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಪ್ರಗತಿಪರ ರೈತರಾದ ಕೆ.ಪಿ.ಜಗದೀಶ್ ಅವರ ಜಮೀನಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಮಾಹಿತಿ ಪಡೆದೆವು ಎಂದು ತಿಳಿಸಿದರು.

” ಮಂಡ್ಯ, ಮತ್ತಿತರ ಜಿಲ್ಲೆಗಳಲ್ಲಿ ರೈತರು ಏಕ ಬೆಳೆ ಬೆಳೆಯುವುದರಿಂದ ನಿಗದಿತ ಬೆಂಬಲ ಬೆಲೆ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ರೈತರು ಈಗಲಾದರೂ ಎಚ್ಚತ್ತು ಸಮಗ್ರ ಬೆಳೆ ಬೆಳೆಯುವುದರಿಂದ ಒಂದಲ್ಲ ಒಂದು ಬೆಳೆಯಿಂದ ಬೆಲೆ ದೊರೆಯುತ್ತದೆ. ಈ ಬಗ್ಗೆ ರೈತರಲ್ಲಿ ಸರ್ಕಾರ ಅರಿವು ಮೂಡಿಸಬೇಕಿದೆ.”

-ಕೆ.ಪಿ.ಜಗದೀಶ್, ಪ್ರಗತಿಪರ ರೈತ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರು, ಕೆಂಪನಕೊಪ್ಪಲು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

9 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

10 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

11 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

11 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

12 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

12 hours ago