Andolana originals

ಅರಮನೆಗೆ ಪ್ರವೇಶ ನಿಷೇಧ, ಪ್ರವಾಸಿಗರಿಗೆ ನಿರಾಸೆ

ಬಂದ ದಾರಿಗೆ ಸುಂಕ ಇಲ್ಲದಂತೆ ಹಿಂತಿರುಗಿದ ಜನತೆ 

ಮೃಗಾಲಯದತ್ತ ಮುಖ ಮಾಡಿದ  ಸಾರ್ವಜನಿಕರು

ವಾಪಸ್ ಕಳುಹಿಸಲು ಹೈರಾಣಾದ ನಗರ ಪೊಲೀಸರು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಮಂಗಳವಾರ ಭೇಟಿ ನೀಡಲಿದ್ದು, ಸೋಮವಾರದಿಂದಲೇ ಸಾರ್ವಜನಿಕರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಕಾರಣ ಪ್ರವಾಸಿಗರು ನಿರಾಸೆಯಿಂದ ಹಿಂತಿರುಗಿದರು.

ಅರಮನೆಯ ಕರಿಕಲ್ಲು ತೊಟ್ಟಿ ದ್ವಾರ, ಪ್ರವೇಶದ್ವಾರ ಒಂದು, ಪ್ರವೇಶ ದ್ವಾರ ಎರಡು, ಜಯ ಮಾರ್ತಾಂಡ ದ್ವಾರ, ಬಲರಾಮ ದ್ವಾರಗಳಲ್ಲಿ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಬ್ಯಾನರ್ ಹಾಕಿ ಗೇಟನ್ನು ಹಾಕಲಾಗಿತ್ತು. ಅರಮನೆ ಮಂಡಳಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರಿಗೆ ಮಧ್ಯಾಹ್ನದ ಬಳಿಕ ರಜೆ ನೀಡಿ ಕಳುಹಿಸಲಾಯಿತು.

ನಗರಪಾಲಿಕೆ ಎದುರಿನ ಪ್ರವೇಶ ದ್ವಾರದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಂದಿನಂತೆ ಕಾಡಾ ಕಚೇರಿ, ದೊಡ್ಡಕೆರೆ ಮೈದಾನ ಮೊದಲಾದ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ಅರಮನೆ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧದ ಬ್ಯಾನರ್ ನೋಡುವಂತಾಯಿತು. ಸುಮಾರು ೧೧ ಗಂಟೆಗೆ ನೂರಾರು ಜನರು ಬರಲು ಶುರು ಮಾಡಿದ್ದರಿಂದ ಪೊಲೀಸರು ವಾಪಸ್ ಕಳುಹಿಸುವ ಹೊತ್ತಿಗೆ ಹೈರಾಣಾದರು. ಕೋಟೆ ಮಾರಮ್ಮನ ದೇವಸ್ಥಾನ ಸೇರಿದಂತೆ ಇತರೆ ಕಡೆಗಳಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿರಲಿಲ್ಲ. ಅರಮನೆ ನೋಡಲು ಬಂದಿದ್ದವರು ರಾಷ್ಟ್ರಪತಿ ಭೇಟಿಯಿಂದಾಗಿ ನಿರ್ಬಂಧ ಹೇರಲಾಗಿದೆ ಎನ್ನುವ ವಿಚಾರ ಕೇಳಿ ಬೇಸರದಿಂದ ಹೊರನಡೆದರು. ಇದರಿಂದಾಗಿ ಮೃಗಾಲಯಕ್ಕೆ ಭೇಟಿ ನೀಡುವವರ ಸಂಖ್ಯೆಯಲ್ಲಿ ತುಸು ಹೆಚ್ಚಳವಾಗಿತ್ತು.

ವಾಹನ ನಿಲುಗಡೆಗೆ ಸವಾರರ ಪರದಾಟ:  ವಾಹನಗಳ ನಿಲುಗಡೆಗೆ ಅವಕಾಶ ಇಲ್ಲದ ಕಾರಣ ಅನೇಕರು ಬೇರೆ ಕಡೆಗಳಲ್ಲಿ ನಿಲ್ಲಿಸಲು ಪರದಾಡಿದರು. ಮಂಗಳವಾರ ಮಧ್ಯಾಹ್ನದ ತನಕ ಅರಮನೆ ಸುತ್ತಮುತ್ತಲ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲು ಅವಕಾಶ ನೀಡಿಲ್ಲ. ಹೀಗಾಗಿ, ಪುರಭವನ, ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲಿ ಕಾದು ಕಾದು ವಾಹನ ನಿಲ್ಲಿಸುತ್ತಿದ್ದು ಕಂಡುಬಂದಿತು.”

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago