Andolana originals

ಅರಮನೆಗೆ ಪ್ರವೇಶ ನಿಷೇಧ, ಪ್ರವಾಸಿಗರಿಗೆ ನಿರಾಸೆ

ಬಂದ ದಾರಿಗೆ ಸುಂಕ ಇಲ್ಲದಂತೆ ಹಿಂತಿರುಗಿದ ಜನತೆ 

ಮೃಗಾಲಯದತ್ತ ಮುಖ ಮಾಡಿದ  ಸಾರ್ವಜನಿಕರು

ವಾಪಸ್ ಕಳುಹಿಸಲು ಹೈರಾಣಾದ ನಗರ ಪೊಲೀಸರು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಮಂಗಳವಾರ ಭೇಟಿ ನೀಡಲಿದ್ದು, ಸೋಮವಾರದಿಂದಲೇ ಸಾರ್ವಜನಿಕರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಕಾರಣ ಪ್ರವಾಸಿಗರು ನಿರಾಸೆಯಿಂದ ಹಿಂತಿರುಗಿದರು.

ಅರಮನೆಯ ಕರಿಕಲ್ಲು ತೊಟ್ಟಿ ದ್ವಾರ, ಪ್ರವೇಶದ್ವಾರ ಒಂದು, ಪ್ರವೇಶ ದ್ವಾರ ಎರಡು, ಜಯ ಮಾರ್ತಾಂಡ ದ್ವಾರ, ಬಲರಾಮ ದ್ವಾರಗಳಲ್ಲಿ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಬ್ಯಾನರ್ ಹಾಕಿ ಗೇಟನ್ನು ಹಾಕಲಾಗಿತ್ತು. ಅರಮನೆ ಮಂಡಳಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರಿಗೆ ಮಧ್ಯಾಹ್ನದ ಬಳಿಕ ರಜೆ ನೀಡಿ ಕಳುಹಿಸಲಾಯಿತು.

ನಗರಪಾಲಿಕೆ ಎದುರಿನ ಪ್ರವೇಶ ದ್ವಾರದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಂದಿನಂತೆ ಕಾಡಾ ಕಚೇರಿ, ದೊಡ್ಡಕೆರೆ ಮೈದಾನ ಮೊದಲಾದ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ಅರಮನೆ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧದ ಬ್ಯಾನರ್ ನೋಡುವಂತಾಯಿತು. ಸುಮಾರು ೧೧ ಗಂಟೆಗೆ ನೂರಾರು ಜನರು ಬರಲು ಶುರು ಮಾಡಿದ್ದರಿಂದ ಪೊಲೀಸರು ವಾಪಸ್ ಕಳುಹಿಸುವ ಹೊತ್ತಿಗೆ ಹೈರಾಣಾದರು. ಕೋಟೆ ಮಾರಮ್ಮನ ದೇವಸ್ಥಾನ ಸೇರಿದಂತೆ ಇತರೆ ಕಡೆಗಳಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿರಲಿಲ್ಲ. ಅರಮನೆ ನೋಡಲು ಬಂದಿದ್ದವರು ರಾಷ್ಟ್ರಪತಿ ಭೇಟಿಯಿಂದಾಗಿ ನಿರ್ಬಂಧ ಹೇರಲಾಗಿದೆ ಎನ್ನುವ ವಿಚಾರ ಕೇಳಿ ಬೇಸರದಿಂದ ಹೊರನಡೆದರು. ಇದರಿಂದಾಗಿ ಮೃಗಾಲಯಕ್ಕೆ ಭೇಟಿ ನೀಡುವವರ ಸಂಖ್ಯೆಯಲ್ಲಿ ತುಸು ಹೆಚ್ಚಳವಾಗಿತ್ತು.

ವಾಹನ ನಿಲುಗಡೆಗೆ ಸವಾರರ ಪರದಾಟ:  ವಾಹನಗಳ ನಿಲುಗಡೆಗೆ ಅವಕಾಶ ಇಲ್ಲದ ಕಾರಣ ಅನೇಕರು ಬೇರೆ ಕಡೆಗಳಲ್ಲಿ ನಿಲ್ಲಿಸಲು ಪರದಾಡಿದರು. ಮಂಗಳವಾರ ಮಧ್ಯಾಹ್ನದ ತನಕ ಅರಮನೆ ಸುತ್ತಮುತ್ತಲ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲು ಅವಕಾಶ ನೀಡಿಲ್ಲ. ಹೀಗಾಗಿ, ಪುರಭವನ, ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲಿ ಕಾದು ಕಾದು ವಾಹನ ನಿಲ್ಲಿಸುತ್ತಿದ್ದು ಕಂಡುಬಂದಿತು.”

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

4 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

4 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

4 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

6 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

6 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

6 hours ago