ಎ.ಎಚ್.ಗೋವಿಂದ
ರಿಯಾಯಿತಿ ದರದಲ್ಲಿ ಸಿಗುತ್ತಿದ್ದ ಕೆಲವು ಔಷಧಗಳ ಕೊರತೆ; ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿರುವ ಜನೌಷಧ ಕೇಂದ್ರದಲ್ಲಿ ಬಿಪಿ, ಶುಗರ್, ಕಿಡ್ನಿಗೆ ಸಂಬಂಧಿಸಿದಂತಹ ಔಷಧಗಳು ಸಮರ್ಪಕವಾಗಿ ದಾಸ್ತಾನು ಇಲ್ಲದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ.
ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ ಐಎಲ್) ವತಿಯಿಂದ ನಡೆಯುತ್ತಿರುವ ಈ ಜನೌಷಧ ಕೇಂದ್ರದಲ್ಲಿಸಕ್ಕರೆ ಕಾಯಿಲೆ, ಮೂತ್ರಪಿಂಡ ಕಾಯಿಲೆ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಗಳು ಸಿಗುತ್ತಿದ್ದವು. ಖಾಸಗಿಮೆಡಿಕಲ್ ಸ್ಟೋರ್ ಗಳಿಗಿಂತ ಶೇ.೫೦ ಕ್ಕೂ ಕಡಿಮೆ ದರದಲ್ಲಿ ಔಷಧಗಳು ಸಿಗುತ್ತಿದ್ದವು. ಎಂಎಸ್ಐಎಲ್ ಬೇಡಿಕೆಯಿರುವ ಔಷಧಗಳನ್ನು ಖರೀದಿಸಿ ಪಟ್ಟಣದ ಜನೌಷಧ ಕೇಂದ್ರಕ್ಕೆ ಸರಬರಾಜು ಮಾಡುತ್ತಿತ್ತು. ಇದರಿಂದ ಬಡ ವರ್ಗದ ರೋಗಿಗಳಿಗೆ ಅನುಕೂಲವಾಗಿತ್ತು. ಆದರೆ, ಈಗ ಸರ್ಕಾರದ ಆದೇಶದಂತೆ ನಿಲ್ಲಿಸಿದ್ದು ರೋಗಿಗಳು ದುಪ್ಪಟ್ಟು ಹಣ ನೀಡಿ ಖರೀದಿಸಬೇಕಿದೆ.
ಈಗ ಜನೌಷಧ ಅಂಗಡಿಯಲ್ಲಿ ಔಷಧಗಳು ಸಿಗದ ಕಾರಣ ರೋಗಿಗಳು ಖಾಸಗಿ ಮೆಡಿಕಲ್ ಸ್ಟೋರ್ಗಳಲ್ಲಿ ಹೆಚ್ಚು ಬೆಲೆನೀಡಿ ಸಕ್ಕರೆ, ರಕ್ತದೊತ್ತಡ, ಮೂತ್ರ ಪಿಂಡ ಹಾಗೂ ಇತರೆ ಕಾಯಿಲೆಗಳ ಸಂಬಂಧದ ಔಷಧಗಳನ್ನು ದುಪ್ಪಟ್ಟು ಹಣ ನೀಡಿ ಖರೀದಿಸುವ ಪರಿಸ್ಥಿತಿ ಉಂಟಾಗಿದೆ.
ಸಕ್ಕರೆ, ರಕ್ತದೊತ್ತಡದಂತಹ ಕಾಯಿಲೆಗಳ ಸಂಬಂಧಿತ ಮಾತ್ರೆಗಳಿಗೆ ಮೆಡಿಕಲ್ ಸ್ಟೋರ್ಗಳಲ್ಲಿ ಒಂದೊಂದು ಬಗೆಯ ಬೆಲೆಯಿದೆ. ಬಡವರ್ಗದ ರೋಗಿಗಳು ಖರೀದಿಸಲು ಕಷ್ಟ ಪಡಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಆರೋಗ್ಯ ಇಲಾಖೆಯವರು ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ರೋಗಿಗಳು ಮನವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ತೆರವು ಮಾಡಬೇಕೆಂಬುದು ರಾಜ್ಯ ಸರ್ಕಾರದ ಆದೇಶವಾಗಿದೆ. ಈ ಹಿನ್ನೆಲೆಯಲ್ಲಿ ಎಂಎಸ್ ಐಎಲ್ನಿಂದ ನಮಗೆ ಔಷಧಗಳ ಪೂರೈಕೆ ನಿಂತಿದೆ ಎಂದು ಕೇಂದ್ರದ ಮೇಲ್ವಿಚಾರಕರು ತಿಳಿಸಿದ್ದಾರೆ. ಪಟ್ಟಣದಲ್ಲಿ ಇದೊಂದೆ ಜನೌಷಧ ಕೇಂದ್ರ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳೀಯ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಈ ಜನೌಷಧ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಉಳಿಸಿಕೊಳ್ಳಬೇಕೆಂದು ರೋಗಿಗಳು ಒತ್ತಾಯಿಸಿದ್ದಾರೆ.
” ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರವೇ ಆದೇಶ ಹೊರಡಿಸಿದೆ. ಆದರೆ, ಕೇಂದ್ರವನ್ನು ಹೊರಗಡೆ ನಡೆಸಲು ಅವಕಾಶವಿದೆ. ಹಿಂದೆ ಹೊರಗಿನವರು ಕೂಡ ಆಸ್ಪತ್ರೆಯ ಆವರಣದಲ್ಲಿದ್ದ ಜನೌಷಧ ಕೇಂದ್ರದಲ್ಲಿ ಔಷಧಗಳನ್ನು ಖರೀದಿಸುತ್ತಿದ್ದರು. ಈಗ ಅವರಿಗೆ ತೊಂದರೆಯಾಗಿದೆ. ಸಕ್ಕರೆ, ರಕ್ತದೊತ್ತಡ ಹಾಗೂ ಇತರೆ ಕಾಯಿಲೆಗಳಿಗೆ ತುತ್ತಾಗಿರುವವರು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಂಡರೆ ಸಂಬಂಧಪಟ್ಟ ಔಷಧಗಳು ಉಚಿತವಾಗಿ ದೊರಕುತ್ತಿವೆ. ಈ ಪ್ರಯೋಜನವನ್ನು ರೋಗಿಗಳು ಪಡೆದುಕೊಳ್ಳಬೇಕು.”
ಡಾ.ಚಿದಂಬರ, ಜಿಲ್ಲಾ ಆರೋಗ್ಯಾಧಿಕಾರಿ
ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ…
ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು,…
ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ…
ಪಂಜುಗಂಗೊಳ್ಳಿ ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು…
ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು…