Andolana originals

ಜನೌಷಧ ಕೇಂದ್ರದಲ್ಲಿ ಅಗತ್ಯ ಔಷಧ ಅಲಭ್ಯ

ಎ.ಎಚ್.ಗೋವಿಂದ

ರಿಯಾಯಿತಿ ದರದಲ್ಲಿ ಸಿಗುತ್ತಿದ್ದ ಕೆಲವು ಔಷಧಗಳ ಕೊರತೆ; ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ 

ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿರುವ ಜನೌಷಧ ಕೇಂದ್ರದಲ್ಲಿ ಬಿಪಿ, ಶುಗರ್, ಕಿಡ್ನಿಗೆ ಸಂಬಂಧಿಸಿದಂತಹ ಔಷಧಗಳು ಸಮರ್ಪಕವಾಗಿ ದಾಸ್ತಾನು ಇಲ್ಲದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ.

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್ ಐಎಲ್) ವತಿಯಿಂದ ನಡೆಯುತ್ತಿರುವ ಈ ಜನೌಷಧ ಕೇಂದ್ರದಲ್ಲಿಸಕ್ಕರೆ ಕಾಯಿಲೆ, ಮೂತ್ರಪಿಂಡ ಕಾಯಿಲೆ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಗಳು ಸಿಗುತ್ತಿದ್ದವು. ಖಾಸಗಿಮೆಡಿಕಲ್ ಸ್ಟೋರ್ ಗಳಿಗಿಂತ ಶೇ.೫೦ ಕ್ಕೂ ಕಡಿಮೆ ದರದಲ್ಲಿ ಔಷಧಗಳು ಸಿಗುತ್ತಿದ್ದವು. ಎಂಎಸ್‌ಐಎಲ್ ಬೇಡಿಕೆಯಿರುವ ಔಷಧಗಳನ್ನು ಖರೀದಿಸಿ ಪಟ್ಟಣದ ಜನೌಷಧ ಕೇಂದ್ರಕ್ಕೆ ಸರಬರಾಜು ಮಾಡುತ್ತಿತ್ತು. ಇದರಿಂದ ಬಡ ವರ್ಗದ ರೋಗಿಗಳಿಗೆ ಅನುಕೂಲವಾಗಿತ್ತು. ಆದರೆ, ಈಗ ಸರ್ಕಾರದ ಆದೇಶದಂತೆ ನಿಲ್ಲಿಸಿದ್ದು ರೋಗಿಗಳು ದುಪ್ಪಟ್ಟು ಹಣ ನೀಡಿ ಖರೀದಿಸಬೇಕಿದೆ.

ಈಗ ಜನೌಷಧ ಅಂಗಡಿಯಲ್ಲಿ ಔಷಧಗಳು ಸಿಗದ ಕಾರಣ ರೋಗಿಗಳು ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ಹೆಚ್ಚು ಬೆಲೆನೀಡಿ ಸಕ್ಕರೆ, ರಕ್ತದೊತ್ತಡ, ಮೂತ್ರ ಪಿಂಡ ಹಾಗೂ ಇತರೆ ಕಾಯಿಲೆಗಳ ಸಂಬಂಧದ ಔಷಧಗಳನ್ನು ದುಪ್ಪಟ್ಟು ಹಣ ನೀಡಿ ಖರೀದಿಸುವ ಪರಿಸ್ಥಿತಿ ಉಂಟಾಗಿದೆ.

ಸಕ್ಕರೆ, ರಕ್ತದೊತ್ತಡದಂತಹ ಕಾಯಿಲೆಗಳ ಸಂಬಂಧಿತ ಮಾತ್ರೆಗಳಿಗೆ ಮೆಡಿಕಲ್ ಸ್ಟೋರ್‌ಗಳಲ್ಲಿ ಒಂದೊಂದು ಬಗೆಯ ಬೆಲೆಯಿದೆ. ಬಡವರ್ಗದ ರೋಗಿಗಳು ಖರೀದಿಸಲು ಕಷ್ಟ ಪಡಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಆರೋಗ್ಯ ಇಲಾಖೆಯವರು ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ರೋಗಿಗಳು ಮನವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ತೆರವು ಮಾಡಬೇಕೆಂಬುದು ರಾಜ್ಯ ಸರ್ಕಾರದ ಆದೇಶವಾಗಿದೆ. ಈ ಹಿನ್ನೆಲೆಯಲ್ಲಿ ಎಂಎಸ್ ಐಎಲ್‌ನಿಂದ ನಮಗೆ ಔಷಧಗಳ ಪೂರೈಕೆ ನಿಂತಿದೆ ಎಂದು ಕೇಂದ್ರದ ಮೇಲ್ವಿಚಾರಕರು ತಿಳಿಸಿದ್ದಾರೆ. ಪಟ್ಟಣದಲ್ಲಿ ಇದೊಂದೆ ಜನೌಷಧ ಕೇಂದ್ರ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳೀಯ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಈ ಜನೌಷಧ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಉಳಿಸಿಕೊಳ್ಳಬೇಕೆಂದು ರೋಗಿಗಳು ಒತ್ತಾಯಿಸಿದ್ದಾರೆ.

” ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರವೇ ಆದೇಶ ಹೊರಡಿಸಿದೆ. ಆದರೆ, ಕೇಂದ್ರವನ್ನು ಹೊರಗಡೆ ನಡೆಸಲು ಅವಕಾಶವಿದೆ. ಹಿಂದೆ ಹೊರಗಿನವರು ಕೂಡ ಆಸ್ಪತ್ರೆಯ ಆವರಣದಲ್ಲಿದ್ದ ಜನೌಷಧ ಕೇಂದ್ರದಲ್ಲಿ ಔಷಧಗಳನ್ನು ಖರೀದಿಸುತ್ತಿದ್ದರು. ಈಗ ಅವರಿಗೆ ತೊಂದರೆಯಾಗಿದೆ. ಸಕ್ಕರೆ, ರಕ್ತದೊತ್ತಡ ಹಾಗೂ ಇತರೆ ಕಾಯಿಲೆಗಳಿಗೆ ತುತ್ತಾಗಿರುವವರು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಂಡರೆ ಸಂಬಂಧಪಟ್ಟ ಔಷಧಗಳು ಉಚಿತವಾಗಿ ದೊರಕುತ್ತಿವೆ. ಈ ಪ್ರಯೋಜನವನ್ನು ರೋಗಿಗಳು ಪಡೆದುಕೊಳ್ಳಬೇಕು.”

ಡಾ.ಚಿದಂಬರ, ಜಿಲ್ಲಾ ಆರೋಗ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

4 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

6 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

9 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

12 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

12 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

12 hours ago