ಓದುಗರ ಪತ್ರ
ದಕ್ಷಿಣ ಭಾರತದ ಜನಪ್ರಿಯ ಅಭಿನೇತ್ರಿ ಹಾಗೂ ಚತುರ್ಭಾಷಾ ತಾರೆ ಪದ್ಮಭೂಷಣ ಡಾ.ಬಿ. ಸರೋಜಾದೇವಿ ಅವರ ಅಗಲಿಕೆ ಸಿನಿಮಾ ರಂಗಕ್ಕೆ ಮಾತ್ರವಲ್ಲ ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ.
ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೇತೃತ್ವದಲ್ಲಿ ಕೊಡಮಾಡುವ ‘ಶ್ರೇಷ್ಠ ಅತ್ಯುತ್ತಮ ನಟಿ’ ವಾರ್ಷಿಕ ಪ್ರಶಸ್ತಿಗೆ ಡಾ.ಬಿ. ಸರೋಜಾದೇವಿ ಶ್ರೇಷ್ಠ ಅತ್ಯುತ್ತಮ ನಟಿ ಪ್ರಶಸ್ತಿ ಎಂದು ನಾಮಕಾರಣ ಮಾಡಿ ನೀಡುವುದು ಹೆಚ್ಚು ಸೂಕ್ತವಾದೀತು. ಹಾಗೆಯೇ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸುವ ಕನಸನ್ನು ಹೊತ್ತಿರುವ ಯುವತಿಯರು ಸೂಕ್ತ ಮಾಹಿತಿ, ತರಬೇತಿ, ಮಾರ್ಗದರ್ಶನದ ಕೊರತೆಯಿಂದ ಪ್ರತಿಭೆಯಿದ್ದರೂ ಅವಕಾಶ ವಂಚಿತರಾಗುತ್ತಿದ್ದಾರೆ. ರಾಜ್ಯ ಸರ್ಕಾರ ‘ಡಾ.ಬಿ.ಸರೋಜಾದೇವಿ ಅಭಿನಯ ತರಬೇತಿ ಕೇಂದ್ರ’ವನ್ನು ಸ್ಥಾಪಿಸಿ ಕಲೆಯಲ್ಲಿ ಆಸಕ್ತಿ ಇರುವ ಯುವತಿಯರಿಗೆ ತರಬೇತಿ ನೀಡಲಿ. ಈ ಮೂಲಕ ಬಿ. ಸರೋಜಾದೇವಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಬಹುದು. ಈ ಕುರಿತು ಸರ್ಕಾರ ಗಂಭೀರವಾದ ಚಿಂತನೆ ನಡೆಸಲಿ.
– ಟಿ. ಸತೀಶ್ ಜವರೇಗೌಡ, ಮಂಡ್ಯ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…