ಓದುಗರ ಪತ್ರ
ದಕ್ಷಿಣ ಭಾರತದ ಜನಪ್ರಿಯ ಅಭಿನೇತ್ರಿ ಹಾಗೂ ಚತುರ್ಭಾಷಾ ತಾರೆ ಪದ್ಮಭೂಷಣ ಡಾ.ಬಿ. ಸರೋಜಾದೇವಿ ಅವರ ಅಗಲಿಕೆ ಸಿನಿಮಾ ರಂಗಕ್ಕೆ ಮಾತ್ರವಲ್ಲ ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ.
ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೇತೃತ್ವದಲ್ಲಿ ಕೊಡಮಾಡುವ ‘ಶ್ರೇಷ್ಠ ಅತ್ಯುತ್ತಮ ನಟಿ’ ವಾರ್ಷಿಕ ಪ್ರಶಸ್ತಿಗೆ ಡಾ.ಬಿ. ಸರೋಜಾದೇವಿ ಶ್ರೇಷ್ಠ ಅತ್ಯುತ್ತಮ ನಟಿ ಪ್ರಶಸ್ತಿ ಎಂದು ನಾಮಕಾರಣ ಮಾಡಿ ನೀಡುವುದು ಹೆಚ್ಚು ಸೂಕ್ತವಾದೀತು. ಹಾಗೆಯೇ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸುವ ಕನಸನ್ನು ಹೊತ್ತಿರುವ ಯುವತಿಯರು ಸೂಕ್ತ ಮಾಹಿತಿ, ತರಬೇತಿ, ಮಾರ್ಗದರ್ಶನದ ಕೊರತೆಯಿಂದ ಪ್ರತಿಭೆಯಿದ್ದರೂ ಅವಕಾಶ ವಂಚಿತರಾಗುತ್ತಿದ್ದಾರೆ. ರಾಜ್ಯ ಸರ್ಕಾರ ‘ಡಾ.ಬಿ.ಸರೋಜಾದೇವಿ ಅಭಿನಯ ತರಬೇತಿ ಕೇಂದ್ರ’ವನ್ನು ಸ್ಥಾಪಿಸಿ ಕಲೆಯಲ್ಲಿ ಆಸಕ್ತಿ ಇರುವ ಯುವತಿಯರಿಗೆ ತರಬೇತಿ ನೀಡಲಿ. ಈ ಮೂಲಕ ಬಿ. ಸರೋಜಾದೇವಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಬಹುದು. ಈ ಕುರಿತು ಸರ್ಕಾರ ಗಂಭೀರವಾದ ಚಿಂತನೆ ನಡೆಸಲಿ.
– ಟಿ. ಸತೀಶ್ ಜವರೇಗೌಡ, ಮಂಡ್ಯ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…