Andolana originals

ದಸರಾ ಮುಗಿದರೂ ತಗ್ಗದ ಪ್ರವಾಸಿಗರ ಪ್ರವಾಹ

ಕೆ.ಬಿ.ರಮೇಶನಾಯಕ

ಸಾಲು ಸಾಲು ವಾಹನಗಳ ಭರಾಟೆ; ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದರೂ ಅರಮನೆ, ಮತ್ತಿತರ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡು ನಗರಕ್ಕೆ ಲಗ್ಗೆ ಇಟ್ಟಿದೆ.

ಸೆ.೨೨ರಂದು ನವರಾತ್ರಿ ಶುರುವಾದ ದಿನದಿಂದ ದಸರಾ ಜಂಬೂಸವಾರಿ ದಿನದವರೆಗೆ ಲಕ್ಷಾಂತರ ಪ್ರವಾಸಿಗರು ನಗರಕ್ಕೆ ಭೇಟಿ ನೀಡಿ ಸಂಭ್ರಮಿಸಿದ್ದಾರೆ. ದೇಶ-ವಿದೇಶಗಳ ಬಹಳಷ್ಟು ಜನರು ದಸರಾ ಜಂಬೂಸವಾರಿಯನ್ನು ವೀಕ್ಷಣೆ ಮಾಡಿದ್ದರೂ ನಗರ ವಾಸ್ತವ್ಯವನ್ನು ಮುಂದುವರಿಸಿದ್ದಾರೆ.

ಒಂದು ವಾರದಿಂದ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸಿ ಎಂಜಾಯ್ ಮಾಡಿದ್ದ ಪ್ರವಾಸಿಗರು, ಶನಿವಾರ ಅನೇಕ ಸ್ಥಳಗಳನ್ನು ವೀಕ್ಷಿಸಲು ಮುಂದಾಗಿದ್ದುದು ಕಂಡುಬಂದಿತು. ಕಾಡಾ ಕಚೇರಿ, ದೊಡ್ಡಕೆರೆ ಮೈದಾನ, ಕೋಟೆ ಮಾರಮ್ಮನ ದೇವಸ್ಥಾನ, ಪಾರ್ಕಿಂಗ್ ಪ್ಲಾಜಾ ಬಳಿ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದ ಜನರು ನೇರವಾಗಿ ಅರಮನೆಗೆ ತೆರಳುತ್ತಿದ್ದರು. ಅರಮನೆಯನ್ನು ಕಣ್ತುಂಬಿಕೊಳ್ಳುತ್ತಿದ್ದ ಜನರು ಅದರ ಮುಂದೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಅರಮನೆ ವಸ್ತು ಸಂಗ್ರಹಾಲಯವನ್ನು ನೋಡಲು ಪ್ರವೇಶ ಟಿಕೆಟ್ ಪಡೆದು ಒಳ ನುಗ್ಗುತ್ತಿದ್ದ ಜನರು ಪ್ರತಿಯೊಂದು ವಸ್ತುಗಳನ್ನೂ ಕುತೂಹಲದಿಂದ ವೀಕ್ಷಿಸಿದರು.

ಇದನ್ನೂ ಓದಿ:-ಬೀದಿನಾಯಿಗಳು, ಕೋತಿಗಳ ಹಾವಳಿಯಿಂದ ಕಂಗೆಟ್ಟ ಜನತೆ

ಮೃಗಾಲಯದಲ್ಲಿ ನೂಕು ನುಗ್ಗಲು: ಅರಮನೆಗಿಂತ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ಟಿಕೆಟ್ ಪಡೆಯಲು ಸಾವಿರಾರು ಜನರು ತೆರಳುತ್ತಿದ್ದರಿಂದ ನೂಕುನುಗ್ಗಲು ಕಾಣಿಸಿತು. ಇಟ್ಟಿಗೆಗೂಡು, ಎಂ.ಜಿ.ರಸ್ತೆ, ವಸ್ತು ಪ್ರದರ್ಶನ ಪಾರ್ಕಿಂಗ್, ಲಲಿತಮಹಲ್ ರಸ್ತೆ ಮೊದಲಾದ ಕಡೆ ವಾಹನಗಳನ್ನು ನಿಲ್ಲಿಸಿ ಬರುತ್ತಿದ್ದ ಜನರು ನೇರವಾಗಿ ತಂಡೋಪತಂಡವಾಗಿ ಟಿಕೆಟ್ ಪಡೆದು ಮೃಗಾಲಯಕ್ಕೆ ತೆರಳುತ್ತಿದ್ದರು. ಬೆಳಿಗ್ಗೆಯಿಂದ ಸಂಜೆಯತನಕ ಬಿಡುವಿಲ್ಲದಂತೆ ವೀಕ್ಷಣೆ ಮಾಡಿದ್ದು, ಮೃಗಾಲಯದಲ್ಲಿ ಇರುವ ಹುಲಿ, ಸಿಂಹ, ಚಿರತೆ, ಹೆಬ್ಬಾವು, ಮೊಸಳೆ, ಆನೆ, ಒಂಟೆ ಮೊದಲಾದ ಪ್ರಾಣಿಗಳನ್ನು ನೋಡಿ ಖುಷಿಪಟ್ಟರು.

ಬೆಟ್ಟವೂ ಫುಲ್ ರಷ್: ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ಫುಲ್ ರಷ್ ಇತ್ತು. ಜಂಬೂಸವಾರಿ ವೀಕ್ಷಿಸಿ ಸಂಬಂಧಿಕರ ಮನೆ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ವಾಸ್ತವ್ಯ ಹೂಡಿದ್ದ ಹೊರ ರಾಜ್ಯದವರು ಮುಂಜಾನೆ ಎದ್ದು ಬಸ್, ಟೆಂಪೋ, ಮ್ಯಾಕ್ಸಿ ಕ್ಯಾಬ್ ಮೊದಲಾದ ವಾಹನಗಳಲ್ಲಿ ಭೇಟಿ ನೀಡಿದ್ದರು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು. ವಸ್ತು ಪ್ರದರ್ಶನಕ್ಕೆ ಲಗ್ಗೆ: ಅರಮನೆ, ಮೃಗಾಲಯ, ಕಾರಂಜಿಕೆರೆ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ಸಂಜೆ ನಂತರ ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಬೆಳಿಗ್ಗೆಯಿಂದ ಸಂಜೆ ಸಾಧಾರಣವಾಗಿ ಪ್ರವೇಶ ಮಾಡಿದರೂ, ಐದು ಗಂಟೆಯ ಮೇಲೆ ದುಪ್ಪಟ್ಟು ಪ್ರವಾಸಿಗರು ವೀಕ್ಷಿಸಿದರು. ಪ್ರದರ್ಶನದ ಒಳಗೆ ಇರುವ ಚಾಟ್ಸ್ ಸೆಂಟರ್‌ಗಳಲ್ಲಿ ಬಗೆಬಗೆಯ ತಿನಿಸುಗಳನ್ನು ತಿಂದರೆ, ಜಿಲ್ಲಾವಾರು ತೆರೆದಿರುವ ಮಳಿಗೆಗಳನ್ನು ನೋಡಿಕೊಂಡು ಇಷ್ಟವಾದ ತಿಂಡಿಗಳನ್ನು ಸವಿದರು. ಮತ್ತೊಂದೆಡೆ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಸಂಭ್ರಮ ಮುಗಿಲುಮುಟ್ಟಿತ್ತು.

ಟ್ರಾಫಿಕ್ ಜಾಮ್: ಅರಮನೆಯ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಸಂಚಾರವಿದ್ದರಿಂದ ಆಗಿಂದಾಗ್ಗೆ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಒಂದೇ ಸಮನೆ ಬರುತ್ತಿದ್ದುದರಿಂದ ಜಾಮ್ ಆಗುತ್ತಿತ್ತು. ಕೆಲವು ಕಡೆ ಬಹು ಹೊತ್ತಿನ ತನಕ ಕಾದು ವಾಹನಗಳು ಮುಂದೆ ಸಾಗಬೇಕಾಯಿತು.

ಬೃಂದಾವನಕ್ಕೂ ಪ್ರವಾಸಿಗರ ಭೇಟಿ: ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್‌ಎಸ್‌ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು. ದಾಸಪ್ಪ ಸರ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಬಹುತೇಕ ವಾಹನಗಳು ಕೆಆರ್‌ಎಸ್‌ಗೆ ತಲುಪಿ ಬಣ್ಣಬಣ್ಣದ ದೀಪಾಲಂಕಾರ, ನವಿಲಿನಂತೆ ಗರಿಬಿಚ್ಚಿ ಕುಣಿಯುವ ನೀರಿನ ಕಾರಂಜಿ ಸೇರಿದಂತೆ ಇನ್ನಿತರ ಅಲಂಕೃತ ಉದ್ಯಾನವನ ನೋಡಿ ಖುಷಿಯಿಂದಲೇ ಹಿಂದಿರುಗಿದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

12 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

12 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

12 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

14 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

14 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

14 hours ago