Andolana originals

ಆಸ್ತಿ ಕೊಚ್ಚಿ ಹೋದರೂ ಪತಿ ಜೀವ ಉಳಿದ ನೆಮ್ಮದಿ

ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿ ರುವ ಕೇರಳದ ವಯನಾಡಿನ ಮೇಪ್ಪಾಡಿ ಸುತ್ತಮುತ್ತ ಸುರಿದ ಭಾರೀ ಮಳೆಯಿಂದ ಉಂಟಾದ ಭೂ ಕುಸಿತದಿಂದ ಚೂರಲ್ ಮಲೈಯಲ್ಲಿ ನಿರ್ಮಿಸಿದ್ದ ಮನೆ ಕೊಚ್ಚಿ ಹೋಯಿತು. ಭವಿಷ್ಯದಲ್ಲಿ ಏನು ಮಾಡಬೇಕೆಂಬ ದಿಕ್ಕು ತೊಚುತ್ತಿಲ್ಲ. . . ಎಂದು ಪ್ರವಿದಾ ಎಂಬವರು ಆತಂಕ ವ್ಯಕ್ತಪಡಿಸಿದರು.

ಮೇಪ್ಪಾಡಿಯಲ್ಲಿರುವ ತಂದೆ ಮನೆಗೆ ಬಾಣಂತನಕ್ಕೆ ಹೋಗಿದ್ದೆ. ಭೂ ಕುಸಿತ ಸಂಭವಿಸಿದ್ದರಿಂದ ಮೇಪ್ಪಾಡಿಯ ನಿವಾಸಿ ಗಳನ್ನು ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಿದ್ದಾರೆ. ಆದರೆ, ನಾನು ನಮ್ಮತಾಯಿ ಲಕ್ಷ ಮ್ಮ, ತಂದೆ ಕೃಷ್ಣ ಅವರ ಜೊತೆ ಚಾಮರಾಜನಗರದಲ್ಲಿರುವ ನಮ್ಮ ಸಂಬಂಧಿಕರ ಮನೆಗೆ ಬಂದು ಉಳಿದು ಕೊಂಡಿದ್ದೇನೆ ಎಂದು ಹೇಳಿಕೊಂಡರು.

ಸೋಮವಾರ ತಡರಾತ್ರಿ ಭೂ ಕುಸಿತ ಸಂಭವಿಸಿದಾಗ ನನ್ನ ಪತಿ ವಿನೋದ್ ತಮ್ಮ ತಾಯಿಯೊಡನೆ ಇದ್ದರು. ನಮ್ಮ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ಹಸು ಅರಚಿಕೊಂಡಾಗ ವಿನೋದ್ ಹೋಗಿ ನೋಡಿದ್ದಾರೆ. ಕೊಟ್ಟಿಗೆಯಲ್ಲಿ ನೀರು ತುಂಬಿಕೊಂ ಡಿತ್ತು. ಎಚ್ಚೆತ್ತುಕೊಂಡ ವಿನೋದ್ ತಮ್ಮ ತಾಯಿ ಜೊತೆ ಎತ್ತರದ ಜಾಗಕ್ಕೆ ಹೋಗಿ ನಿಂತಿದ್ದರು.

ಸೋಮವಾರ ಬೆಳಿಗಿನ ಜಾವ ೨. ೧೫ರಿಂದ ಮಂಗಳವಾರ ಸಂಜೆ ೫. ೧೫ ಗಂಟೆ ತನಕ ನಿಂತೇ ಕಾಲ ಕಳೆದಿದ್ದಾರೆ. ನಂತರ ರಕ್ಷಣಾ ತಂಡದ ಹೆಲಿಕಾಪ್ಟರ್ ಮೂಲಕ ಅವರನ್ನು ಮೇಪ್ಪಾಡಿಯ ನಿರಾಶ್ರಿತರ ಶಿಬಿರಕ್ಕೆ ಕರೆದೊಯ್ಯಲಾಗಿದೆ. ಈ ಬಗ್ಗೆ ವಿನೋದ್ ನನಗೆ -ನ್ ಕರೆ ಮಾಡಿ ತಿಳಿಸಿದ್ದಾರೆ ಎಂದು ಪ್ರವಿದಾ ‘ಆಂದೋಲನ’ಕ್ಕೆ ಹೇಳಿದರು.

ಪತಿ ವಿನೋದ್ ಕಾಲಿಗೆ ಗಾಯವಾಗಿದ್ದು, ನಿರಾಶ್ರಿತರ ಶಿಬಿರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅವರ ಬರುವಿಕೆಗಾಗಿ ಕಾಯುತ್ತಿದ್ದೇನೆ ಎಂದು ಕಣ್ಣೀರಿಟ್ಟರು.

ಪತಿ ವಿನೋದ್ ಚೂರಲ್‌ಮಲೈನಲ್ಲಿ ನಡೆಸುತ್ತಿದ್ದ ಹೋಂ ಸ್ಟೇ ಮೇಲೆ ಮರ ಬಿದ್ದು ಹಾನಿಯಾಗಿದೆ. ನಾವು ವಾಸವಿದ್ದ ಮನೆ, ಹಸು, ಬೈಕ್, ಚಿನ್ನಾಭರಣ, ಬಟ್ಟೆಗಳು, ಟಿವಿ, ಫ್ರಿಜ್ ಎಲ್ಲವೂ ನೀರಿನಲ್ಲಿ ಕೊಚ್ಚಿಹೋಗಿವೆ. ನಾವು ಎಲ್ಲವನ್ನೂ ಕಳೆದುಕೊಂಡು ಬರಿಗೈಲಿದ್ದೇವೆ. ಮುಂದೇನು ಮಾಡಬೇಕು ಎಂಬುದೇ ಚಿಂತೆಯಾಗಿದೆ ಎಂದು ಪ್ರವಿದಾ ನೋವು ತೋಡಿಕೊಂಡರು.

ನನ್ನ ಪತಿ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದವರು. ೪ ವರ್ಷಗಳ ಹಿಂದೆ ನಮ್ಮ ಮದುವೆಯಾಯಿತು. ನಾವು ಚೂರಲ್‌ಮಲೈನಲ್ಲಿಯೇ ಬದುಕು ಕಟ್ಟಿಕೊಂಡಿ ದ್ದೆವು. ಕೋಡಹಳ್ಳಿಯಲ್ಲಿ ಸ್ವಂತ ಮನೆಯೂ ಇಲ್ಲ ಎಂದು ತಿಳಿಸಿದರು.

ಮುಂದೆ ಏನು ಮಾಡಬೇಕೆಂಬುದೇ ಚಿಂತೆ :

ಪತಿ ಬೇಗ ವಾಪಸ್‌ ಬರಲಿ

ಪ್ರವಿದಾ ಪತಿ ವಿನೋದ್, ನಮ್ಮ ಅತ್ತೆಯವರನ್ನು ಆದಷ್ಟು ಬೇಗ ನಮ್ಮ ಬಳಿಗೆ ಕಳುಹಿಸಬೇಕು. ವಯನಾಡಿನಲ್ಲಿ ಮಳೆ ಕಡಿಮೆಯಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಚೂರಲ್‌ಮಲೈಗೆ ಮರಳುತ್ತೇವೆ. ಕೇರಳ ಸರ್ಕಾರ ನಮಗೊಂದು ಮನೆ ನಿರ್ಮಿಸಿಕೊಡಬೇಕು. ಅಲ್ಲದೆ, ಪರಿಹಾರ ನೀಡಿ ನಾವು ಮತ್ತೊಮ್ಮೆ ತಳಮಟ್ಟದಿಂದ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡಬೇಕು. ?

ಪ್ರವಿದಾ, ಸಂತ್ರಸ್ತ ವಿನೋದ್ ಅವರ ಪತ್ನಿ

 

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

3 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

3 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

3 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

3 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

3 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

3 hours ago