Andolana originals

ಆಸ್ತಿ ಕೊಚ್ಚಿ ಹೋದರೂ ಪತಿ ಜೀವ ಉಳಿದ ನೆಮ್ಮದಿ

ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿ ರುವ ಕೇರಳದ ವಯನಾಡಿನ ಮೇಪ್ಪಾಡಿ ಸುತ್ತಮುತ್ತ ಸುರಿದ ಭಾರೀ ಮಳೆಯಿಂದ ಉಂಟಾದ ಭೂ ಕುಸಿತದಿಂದ ಚೂರಲ್ ಮಲೈಯಲ್ಲಿ ನಿರ್ಮಿಸಿದ್ದ ಮನೆ ಕೊಚ್ಚಿ ಹೋಯಿತು. ಭವಿಷ್ಯದಲ್ಲಿ ಏನು ಮಾಡಬೇಕೆಂಬ ದಿಕ್ಕು ತೊಚುತ್ತಿಲ್ಲ. . . ಎಂದು ಪ್ರವಿದಾ ಎಂಬವರು ಆತಂಕ ವ್ಯಕ್ತಪಡಿಸಿದರು.

ಮೇಪ್ಪಾಡಿಯಲ್ಲಿರುವ ತಂದೆ ಮನೆಗೆ ಬಾಣಂತನಕ್ಕೆ ಹೋಗಿದ್ದೆ. ಭೂ ಕುಸಿತ ಸಂಭವಿಸಿದ್ದರಿಂದ ಮೇಪ್ಪಾಡಿಯ ನಿವಾಸಿ ಗಳನ್ನು ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಿದ್ದಾರೆ. ಆದರೆ, ನಾನು ನಮ್ಮತಾಯಿ ಲಕ್ಷ ಮ್ಮ, ತಂದೆ ಕೃಷ್ಣ ಅವರ ಜೊತೆ ಚಾಮರಾಜನಗರದಲ್ಲಿರುವ ನಮ್ಮ ಸಂಬಂಧಿಕರ ಮನೆಗೆ ಬಂದು ಉಳಿದು ಕೊಂಡಿದ್ದೇನೆ ಎಂದು ಹೇಳಿಕೊಂಡರು.

ಸೋಮವಾರ ತಡರಾತ್ರಿ ಭೂ ಕುಸಿತ ಸಂಭವಿಸಿದಾಗ ನನ್ನ ಪತಿ ವಿನೋದ್ ತಮ್ಮ ತಾಯಿಯೊಡನೆ ಇದ್ದರು. ನಮ್ಮ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ಹಸು ಅರಚಿಕೊಂಡಾಗ ವಿನೋದ್ ಹೋಗಿ ನೋಡಿದ್ದಾರೆ. ಕೊಟ್ಟಿಗೆಯಲ್ಲಿ ನೀರು ತುಂಬಿಕೊಂ ಡಿತ್ತು. ಎಚ್ಚೆತ್ತುಕೊಂಡ ವಿನೋದ್ ತಮ್ಮ ತಾಯಿ ಜೊತೆ ಎತ್ತರದ ಜಾಗಕ್ಕೆ ಹೋಗಿ ನಿಂತಿದ್ದರು.

ಸೋಮವಾರ ಬೆಳಿಗಿನ ಜಾವ ೨. ೧೫ರಿಂದ ಮಂಗಳವಾರ ಸಂಜೆ ೫. ೧೫ ಗಂಟೆ ತನಕ ನಿಂತೇ ಕಾಲ ಕಳೆದಿದ್ದಾರೆ. ನಂತರ ರಕ್ಷಣಾ ತಂಡದ ಹೆಲಿಕಾಪ್ಟರ್ ಮೂಲಕ ಅವರನ್ನು ಮೇಪ್ಪಾಡಿಯ ನಿರಾಶ್ರಿತರ ಶಿಬಿರಕ್ಕೆ ಕರೆದೊಯ್ಯಲಾಗಿದೆ. ಈ ಬಗ್ಗೆ ವಿನೋದ್ ನನಗೆ -ನ್ ಕರೆ ಮಾಡಿ ತಿಳಿಸಿದ್ದಾರೆ ಎಂದು ಪ್ರವಿದಾ ‘ಆಂದೋಲನ’ಕ್ಕೆ ಹೇಳಿದರು.

ಪತಿ ವಿನೋದ್ ಕಾಲಿಗೆ ಗಾಯವಾಗಿದ್ದು, ನಿರಾಶ್ರಿತರ ಶಿಬಿರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅವರ ಬರುವಿಕೆಗಾಗಿ ಕಾಯುತ್ತಿದ್ದೇನೆ ಎಂದು ಕಣ್ಣೀರಿಟ್ಟರು.

ಪತಿ ವಿನೋದ್ ಚೂರಲ್‌ಮಲೈನಲ್ಲಿ ನಡೆಸುತ್ತಿದ್ದ ಹೋಂ ಸ್ಟೇ ಮೇಲೆ ಮರ ಬಿದ್ದು ಹಾನಿಯಾಗಿದೆ. ನಾವು ವಾಸವಿದ್ದ ಮನೆ, ಹಸು, ಬೈಕ್, ಚಿನ್ನಾಭರಣ, ಬಟ್ಟೆಗಳು, ಟಿವಿ, ಫ್ರಿಜ್ ಎಲ್ಲವೂ ನೀರಿನಲ್ಲಿ ಕೊಚ್ಚಿಹೋಗಿವೆ. ನಾವು ಎಲ್ಲವನ್ನೂ ಕಳೆದುಕೊಂಡು ಬರಿಗೈಲಿದ್ದೇವೆ. ಮುಂದೇನು ಮಾಡಬೇಕು ಎಂಬುದೇ ಚಿಂತೆಯಾಗಿದೆ ಎಂದು ಪ್ರವಿದಾ ನೋವು ತೋಡಿಕೊಂಡರು.

ನನ್ನ ಪತಿ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದವರು. ೪ ವರ್ಷಗಳ ಹಿಂದೆ ನಮ್ಮ ಮದುವೆಯಾಯಿತು. ನಾವು ಚೂರಲ್‌ಮಲೈನಲ್ಲಿಯೇ ಬದುಕು ಕಟ್ಟಿಕೊಂಡಿ ದ್ದೆವು. ಕೋಡಹಳ್ಳಿಯಲ್ಲಿ ಸ್ವಂತ ಮನೆಯೂ ಇಲ್ಲ ಎಂದು ತಿಳಿಸಿದರು.

ಮುಂದೆ ಏನು ಮಾಡಬೇಕೆಂಬುದೇ ಚಿಂತೆ :

ಪತಿ ಬೇಗ ವಾಪಸ್‌ ಬರಲಿ

ಪ್ರವಿದಾ ಪತಿ ವಿನೋದ್, ನಮ್ಮ ಅತ್ತೆಯವರನ್ನು ಆದಷ್ಟು ಬೇಗ ನಮ್ಮ ಬಳಿಗೆ ಕಳುಹಿಸಬೇಕು. ವಯನಾಡಿನಲ್ಲಿ ಮಳೆ ಕಡಿಮೆಯಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಚೂರಲ್‌ಮಲೈಗೆ ಮರಳುತ್ತೇವೆ. ಕೇರಳ ಸರ್ಕಾರ ನಮಗೊಂದು ಮನೆ ನಿರ್ಮಿಸಿಕೊಡಬೇಕು. ಅಲ್ಲದೆ, ಪರಿಹಾರ ನೀಡಿ ನಾವು ಮತ್ತೊಮ್ಮೆ ತಳಮಟ್ಟದಿಂದ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡಬೇಕು. ?

ಪ್ರವಿದಾ, ಸಂತ್ರಸ್ತ ವಿನೋದ್ ಅವರ ಪತ್ನಿ

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

2 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

16 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

17 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

18 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

18 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

19 hours ago