ಕನ್ನಡಕ್ಕೆ ಮೊದಲ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತಂದುಕೊಟ್ಟಿರುವ ಲೇಖಕಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ನಾಡ ಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿರುವುದು ಅವರ ಜಾತ್ಯತೀತ ಹಾಗೂ ವೈಚಾರಿಕ ಪ್ರಜ್ಞೆಗೆ ಸಾಕ್ಷಿಯಾಗಿದೆ.
‘ ಮಾನವ ಜಾತಿ ತಾನೊಂದೇ ವಲಂ’ ಎಂಬ ಮಹಾ ಕವಿ ಪಂಪನ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೃದಯ ವೈಶಾಲ್ಯತೆ ಮೆಚ್ಚುವಂಥದ್ದು. ಇದನ್ನು ಕನ್ನಡಿಗರು ಮನ ತುಂಬಿ ಸ್ವಾಗತಿಸಬೇಕು.
– ಎಂ. ಲಿಂಗರಾಜು, ಹೊಸ ಹುಂಡಿ, ಮೈಸೂರು





