ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.
ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.
ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.
ಮುಖಂಡರಾದ ಚಿಕ್ಕರಂಗನಾಯಕ, ಎಸ್.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…
ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…