Andolana originals

ವಾಮಮಾರ್ಗದಿಂದ ಅಧಿಕಾರ: ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿ

ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.

ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮುಖಂಡರಾದ ಚಿಕ್ಕರಂಗನಾಯಕ, ಎಸ್‌.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

19 mins ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

1 hour ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

2 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 hours ago