Andolana originals

ವಾಮಮಾರ್ಗದಿಂದ ಅಧಿಕಾರ: ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿ

ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.

ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮುಖಂಡರಾದ ಚಿಕ್ಕರಂಗನಾಯಕ, ಎಸ್‌.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago