Andolana originals

ವಾಮಮಾರ್ಗದಿಂದ ಅಧಿಕಾರ: ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿ

ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.

ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮುಖಂಡರಾದ ಚಿಕ್ಕರಂಗನಾಯಕ, ಎಸ್‌.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago