Andolana originals

ವಾಮಮಾರ್ಗದಿಂದ ಅಧಿಕಾರ: ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿ

ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.

ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮುಖಂಡರಾದ ಚಿಕ್ಕರಂಗನಾಯಕ, ಎಸ್‌.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago