Andolana originals

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ ವಾಹನಕ್ಕೆ ಮತ್ತು ಗಂಗಾ ಆರತಿಗೆ ಚಾಲನೆ ಕೊಡುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಉದ್ಘಾಟಿಸಿದರು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ಅಟ್ಟುಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದ್ದು ಮೊದಲ ದಿನವೇ ನೂರಾರು ಸಂಖ್ಯೆಯಲ್ಲಿ ಯುವ ಜನರು ಭಾಗವಹಿಸಿ ಸಂಭ್ರಮಿಸಿದರು.

ಜಲ ಸಾಹಸ ಕ್ರೀಡೆಗಳಲ್ಲಿ ಬಳಸುವ ಪ್ರಮುಖ ವಾಹನಗಳು ಮತ್ತು ಉಪಕರಣಗಳಾದ ಜೆಟ್ ಸ್ಕೀ ಬನಾನಾ ಬೋಟ್, ಕಯಾಕಿಂಗ್ ಮತ್ತು ರಾಫ್ಟ್‌ಗಳ ಮೂಲಕ ಜಲಾಶಯದ ನೀರಿನಲ್ಲಿ ವೇಗವಾಗಿ ಅಡ್ಡಾಡುವ ದೃಶ್ಯ ಮೈನವಿರೇಳಿಸುವಂತಿತ್ತು.

ಜಲವಾಹನಗಳು ಜಲಾಶಯದ ನೀರಿನಲ್ಲಿ ವೇಗವಾಗಿ ಚಲಿಸುವ ವೇಳೆ ಜಾಲಿ ಮೂಡಿನಲ್ಲಿ ನೀರಿಗೆ ಬಿದ್ದು ನಂತರ ಈಜಿಕೊಂಡು ದಡ ಸೇರುವ ತರುಣರ ಸಂಭ್ರಮ ಮೇರೆ ಮೀರಿತ್ತು. ಸುರಕ್ಷತೆ ದೃಷ್ಟಿಯಿಂದ ಎಲ್ಲರಿಗೂ ಲೈಫ್ ಜಾಕೆಟ್ ತೊಡಿಸಲಾಗಿತ್ತು. ಈಜು ಪರಿಣಿತರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ವಿವಿಧ ೧೮ ಜಲವಾಹನಗಳು ನೀರಿಗೆ ಇಳಿದಿದ್ದವು. ಕಾರ್ಬೊರೇಟ್ ಸಮಸ್ಯೆಯಿಂದ, ಮೊದಲ ದಿನ ಮೋಟಾರ್ ಬೋಟ್ ಕಾರ್ಯ ನಿರ್ವಹಿಸಲಿಲ್ಲ, ಶುಕ್ರವಾರ ಇದೂ ನೀರಿಗೆ ಇಳಿಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದರು. ಮೈಸೂರಿನ ಮಹಾಜನ ಕಾಲೇಜು, ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳ ತಂಡವಲ್ಲದೇ ಚಾಮರಾಜ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು , ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್‌ಎಸ್ ಕಾಲೇಜು, ಕೃಷಿ ಕಾಲೇಜು ಹೀಗೆ ನಾನಾ ಕಾಲೇಜುಗಳಿಂದ ೩೦೦ಕ್ಕೂ ಹೆಚ್ಚು ಯುವಕ, ಯುವತಿಯರು ಜಲಸಾಹಸ ಕ್ರೀಡೋತ್ಸವದಲ್ಲಿ ಮೊದಲ ದಿನ ಭಾಗವಹಿಸಿದ್ದಾಗಿ ಯುವ ಜನಸೇವೆ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ್ ಮಾಹಿತಿ ನೀಡಿದರು.

ಉಚಿತ ಪ್ರವೇಶದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ಕಾಣಿಸಿಕೊಂಡರು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವೈದ್ಯಕೀಯ ತಂಡ , ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿತ್ತು. ಶಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಮಾಡಿದ್ದಲ್ಲದೇ ಮಧ್ಯಾಹ್ನ ಉಪಾಹಾರ ಕೂಡ ನೀಡಲಾಯಿತು.

ಜಿಪಂ ಸಿಇಒ ಮೋನಾ ರೋತ್ ಅವರು ಕುಟುಂಬ ಸಮೇತ ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಶ್ರೀರೂಪ , ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮೊದಲಾದವರು ಉದ್ಘಾಟನೆ ವೇಳೆ ಹಾಜರಿದ್ದರು. ಶುಕ್ರವಾರ ಜಲ ಸಾಹಸ ಕ್ರೀಡೋತ್ಸವದಲ್ಲಿ ಇನ್ನೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

1 hour ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

1 hour ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

1 hour ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

1 hour ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

1 hour ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

2 hours ago