Andolana originals

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ ವಾಹನಕ್ಕೆ ಮತ್ತು ಗಂಗಾ ಆರತಿಗೆ ಚಾಲನೆ ಕೊಡುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಉದ್ಘಾಟಿಸಿದರು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ಅಟ್ಟುಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದ್ದು ಮೊದಲ ದಿನವೇ ನೂರಾರು ಸಂಖ್ಯೆಯಲ್ಲಿ ಯುವ ಜನರು ಭಾಗವಹಿಸಿ ಸಂಭ್ರಮಿಸಿದರು.

ಜಲ ಸಾಹಸ ಕ್ರೀಡೆಗಳಲ್ಲಿ ಬಳಸುವ ಪ್ರಮುಖ ವಾಹನಗಳು ಮತ್ತು ಉಪಕರಣಗಳಾದ ಜೆಟ್ ಸ್ಕೀ ಬನಾನಾ ಬೋಟ್, ಕಯಾಕಿಂಗ್ ಮತ್ತು ರಾಫ್ಟ್‌ಗಳ ಮೂಲಕ ಜಲಾಶಯದ ನೀರಿನಲ್ಲಿ ವೇಗವಾಗಿ ಅಡ್ಡಾಡುವ ದೃಶ್ಯ ಮೈನವಿರೇಳಿಸುವಂತಿತ್ತು.

ಜಲವಾಹನಗಳು ಜಲಾಶಯದ ನೀರಿನಲ್ಲಿ ವೇಗವಾಗಿ ಚಲಿಸುವ ವೇಳೆ ಜಾಲಿ ಮೂಡಿನಲ್ಲಿ ನೀರಿಗೆ ಬಿದ್ದು ನಂತರ ಈಜಿಕೊಂಡು ದಡ ಸೇರುವ ತರುಣರ ಸಂಭ್ರಮ ಮೇರೆ ಮೀರಿತ್ತು. ಸುರಕ್ಷತೆ ದೃಷ್ಟಿಯಿಂದ ಎಲ್ಲರಿಗೂ ಲೈಫ್ ಜಾಕೆಟ್ ತೊಡಿಸಲಾಗಿತ್ತು. ಈಜು ಪರಿಣಿತರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ವಿವಿಧ ೧೮ ಜಲವಾಹನಗಳು ನೀರಿಗೆ ಇಳಿದಿದ್ದವು. ಕಾರ್ಬೊರೇಟ್ ಸಮಸ್ಯೆಯಿಂದ, ಮೊದಲ ದಿನ ಮೋಟಾರ್ ಬೋಟ್ ಕಾರ್ಯ ನಿರ್ವಹಿಸಲಿಲ್ಲ, ಶುಕ್ರವಾರ ಇದೂ ನೀರಿಗೆ ಇಳಿಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದರು. ಮೈಸೂರಿನ ಮಹಾಜನ ಕಾಲೇಜು, ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳ ತಂಡವಲ್ಲದೇ ಚಾಮರಾಜ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು , ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್‌ಎಸ್ ಕಾಲೇಜು, ಕೃಷಿ ಕಾಲೇಜು ಹೀಗೆ ನಾನಾ ಕಾಲೇಜುಗಳಿಂದ ೩೦೦ಕ್ಕೂ ಹೆಚ್ಚು ಯುವಕ, ಯುವತಿಯರು ಜಲಸಾಹಸ ಕ್ರೀಡೋತ್ಸವದಲ್ಲಿ ಮೊದಲ ದಿನ ಭಾಗವಹಿಸಿದ್ದಾಗಿ ಯುವ ಜನಸೇವೆ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ್ ಮಾಹಿತಿ ನೀಡಿದರು.

ಉಚಿತ ಪ್ರವೇಶದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ಕಾಣಿಸಿಕೊಂಡರು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವೈದ್ಯಕೀಯ ತಂಡ , ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿತ್ತು. ಶಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಮಾಡಿದ್ದಲ್ಲದೇ ಮಧ್ಯಾಹ್ನ ಉಪಾಹಾರ ಕೂಡ ನೀಡಲಾಯಿತು.

ಜಿಪಂ ಸಿಇಒ ಮೋನಾ ರೋತ್ ಅವರು ಕುಟುಂಬ ಸಮೇತ ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಶ್ರೀರೂಪ , ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮೊದಲಾದವರು ಉದ್ಘಾಟನೆ ವೇಳೆ ಹಾಜರಿದ್ದರು. ಶುಕ್ರವಾರ ಜಲ ಸಾಹಸ ಕ್ರೀಡೋತ್ಸವದಲ್ಲಿ ಇನ್ನೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

3 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago