ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ ವಾಹನಕ್ಕೆ ಮತ್ತು ಗಂಗಾ ಆರತಿಗೆ ಚಾಲನೆ ಕೊಡುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಉದ್ಘಾಟಿಸಿದರು.
ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ಅಟ್ಟುಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದ್ದು ಮೊದಲ ದಿನವೇ ನೂರಾರು ಸಂಖ್ಯೆಯಲ್ಲಿ ಯುವ ಜನರು ಭಾಗವಹಿಸಿ ಸಂಭ್ರಮಿಸಿದರು.
ಜಲ ಸಾಹಸ ಕ್ರೀಡೆಗಳಲ್ಲಿ ಬಳಸುವ ಪ್ರಮುಖ ವಾಹನಗಳು ಮತ್ತು ಉಪಕರಣಗಳಾದ ಜೆಟ್ ಸ್ಕೀ ಬನಾನಾ ಬೋಟ್, ಕಯಾಕಿಂಗ್ ಮತ್ತು ರಾಫ್ಟ್ಗಳ ಮೂಲಕ ಜಲಾಶಯದ ನೀರಿನಲ್ಲಿ ವೇಗವಾಗಿ ಅಡ್ಡಾಡುವ ದೃಶ್ಯ ಮೈನವಿರೇಳಿಸುವಂತಿತ್ತು.
ಜಲವಾಹನಗಳು ಜಲಾಶಯದ ನೀರಿನಲ್ಲಿ ವೇಗವಾಗಿ ಚಲಿಸುವ ವೇಳೆ ಜಾಲಿ ಮೂಡಿನಲ್ಲಿ ನೀರಿಗೆ ಬಿದ್ದು ನಂತರ ಈಜಿಕೊಂಡು ದಡ ಸೇರುವ ತರುಣರ ಸಂಭ್ರಮ ಮೇರೆ ಮೀರಿತ್ತು. ಸುರಕ್ಷತೆ ದೃಷ್ಟಿಯಿಂದ ಎಲ್ಲರಿಗೂ ಲೈಫ್ ಜಾಕೆಟ್ ತೊಡಿಸಲಾಗಿತ್ತು. ಈಜು ಪರಿಣಿತರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ವಿವಿಧ ೧೮ ಜಲವಾಹನಗಳು ನೀರಿಗೆ ಇಳಿದಿದ್ದವು. ಕಾರ್ಬೊರೇಟ್ ಸಮಸ್ಯೆಯಿಂದ, ಮೊದಲ ದಿನ ಮೋಟಾರ್ ಬೋಟ್ ಕಾರ್ಯ ನಿರ್ವಹಿಸಲಿಲ್ಲ, ಶುಕ್ರವಾರ ಇದೂ ನೀರಿಗೆ ಇಳಿಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದರು. ಮೈಸೂರಿನ ಮಹಾಜನ ಕಾಲೇಜು, ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳ ತಂಡವಲ್ಲದೇ ಚಾಮರಾಜ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು , ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್ಎಸ್ ಕಾಲೇಜು, ಕೃಷಿ ಕಾಲೇಜು ಹೀಗೆ ನಾನಾ ಕಾಲೇಜುಗಳಿಂದ ೩೦೦ಕ್ಕೂ ಹೆಚ್ಚು ಯುವಕ, ಯುವತಿಯರು ಜಲಸಾಹಸ ಕ್ರೀಡೋತ್ಸವದಲ್ಲಿ ಮೊದಲ ದಿನ ಭಾಗವಹಿಸಿದ್ದಾಗಿ ಯುವ ಜನಸೇವೆ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ್ ಮಾಹಿತಿ ನೀಡಿದರು.
ಉಚಿತ ಪ್ರವೇಶದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ಕಾಣಿಸಿಕೊಂಡರು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವೈದ್ಯಕೀಯ ತಂಡ , ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿತ್ತು. ಶಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಮಾಡಿದ್ದಲ್ಲದೇ ಮಧ್ಯಾಹ್ನ ಉಪಾಹಾರ ಕೂಡ ನೀಡಲಾಯಿತು.
ಜಿಪಂ ಸಿಇಒ ಮೋನಾ ರೋತ್ ಅವರು ಕುಟುಂಬ ಸಮೇತ ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಶ್ರೀರೂಪ , ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮೊದಲಾದವರು ಉದ್ಘಾಟನೆ ವೇಳೆ ಹಾಜರಿದ್ದರು. ಶುಕ್ರವಾರ ಜಲ ಸಾಹಸ ಕ್ರೀಡೋತ್ಸವದಲ್ಲಿ ಇನ್ನೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…