Andolana originals

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ ವಾಹನಕ್ಕೆ ಮತ್ತು ಗಂಗಾ ಆರತಿಗೆ ಚಾಲನೆ ಕೊಡುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಉದ್ಘಾಟಿಸಿದರು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ಅಟ್ಟುಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದ್ದು ಮೊದಲ ದಿನವೇ ನೂರಾರು ಸಂಖ್ಯೆಯಲ್ಲಿ ಯುವ ಜನರು ಭಾಗವಹಿಸಿ ಸಂಭ್ರಮಿಸಿದರು.

ಜಲ ಸಾಹಸ ಕ್ರೀಡೆಗಳಲ್ಲಿ ಬಳಸುವ ಪ್ರಮುಖ ವಾಹನಗಳು ಮತ್ತು ಉಪಕರಣಗಳಾದ ಜೆಟ್ ಸ್ಕೀ ಬನಾನಾ ಬೋಟ್, ಕಯಾಕಿಂಗ್ ಮತ್ತು ರಾಫ್ಟ್‌ಗಳ ಮೂಲಕ ಜಲಾಶಯದ ನೀರಿನಲ್ಲಿ ವೇಗವಾಗಿ ಅಡ್ಡಾಡುವ ದೃಶ್ಯ ಮೈನವಿರೇಳಿಸುವಂತಿತ್ತು.

ಜಲವಾಹನಗಳು ಜಲಾಶಯದ ನೀರಿನಲ್ಲಿ ವೇಗವಾಗಿ ಚಲಿಸುವ ವೇಳೆ ಜಾಲಿ ಮೂಡಿನಲ್ಲಿ ನೀರಿಗೆ ಬಿದ್ದು ನಂತರ ಈಜಿಕೊಂಡು ದಡ ಸೇರುವ ತರುಣರ ಸಂಭ್ರಮ ಮೇರೆ ಮೀರಿತ್ತು. ಸುರಕ್ಷತೆ ದೃಷ್ಟಿಯಿಂದ ಎಲ್ಲರಿಗೂ ಲೈಫ್ ಜಾಕೆಟ್ ತೊಡಿಸಲಾಗಿತ್ತು. ಈಜು ಪರಿಣಿತರನ್ನು ಕೂಡ ನಿಯೋಜನೆ ಮಾಡಲಾಗಿತ್ತು. ವಿವಿಧ ೧೮ ಜಲವಾಹನಗಳು ನೀರಿಗೆ ಇಳಿದಿದ್ದವು. ಕಾರ್ಬೊರೇಟ್ ಸಮಸ್ಯೆಯಿಂದ, ಮೊದಲ ದಿನ ಮೋಟಾರ್ ಬೋಟ್ ಕಾರ್ಯ ನಿರ್ವಹಿಸಲಿಲ್ಲ, ಶುಕ್ರವಾರ ಇದೂ ನೀರಿಗೆ ಇಳಿಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದರು. ಮೈಸೂರಿನ ಮಹಾಜನ ಕಾಲೇಜು, ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳ ತಂಡವಲ್ಲದೇ ಚಾಮರಾಜ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು , ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್‌ಎಸ್ ಕಾಲೇಜು, ಕೃಷಿ ಕಾಲೇಜು ಹೀಗೆ ನಾನಾ ಕಾಲೇಜುಗಳಿಂದ ೩೦೦ಕ್ಕೂ ಹೆಚ್ಚು ಯುವಕ, ಯುವತಿಯರು ಜಲಸಾಹಸ ಕ್ರೀಡೋತ್ಸವದಲ್ಲಿ ಮೊದಲ ದಿನ ಭಾಗವಹಿಸಿದ್ದಾಗಿ ಯುವ ಜನಸೇವೆ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ್ ಮಾಹಿತಿ ನೀಡಿದರು.

ಉಚಿತ ಪ್ರವೇಶದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ಕಾಣಿಸಿಕೊಂಡರು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವೈದ್ಯಕೀಯ ತಂಡ , ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿತ್ತು. ಶಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಮಾಡಿದ್ದಲ್ಲದೇ ಮಧ್ಯಾಹ್ನ ಉಪಾಹಾರ ಕೂಡ ನೀಡಲಾಯಿತು.

ಜಿಪಂ ಸಿಇಒ ಮೋನಾ ರೋತ್ ಅವರು ಕುಟುಂಬ ಸಮೇತ ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಶ್ರೀರೂಪ , ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮೊದಲಾದವರು ಉದ್ಘಾಟನೆ ವೇಳೆ ಹಾಜರಿದ್ದರು. ಶುಕ್ರವಾರ ಜಲ ಸಾಹಸ ಕ್ರೀಡೋತ್ಸವದಲ್ಲಿ ಇನ್ನೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

11 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

14 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

15 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

15 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

15 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

15 hours ago