Andolana originals

‘ಬಿ.ರಂ.ಬೆಟ್ಟದಲ್ಲಿ ಸೋಲಿಗರಿಗೆ ತುಟ್ಟಿಯಾದ ಆರೋಗ್ಯ ಸೇವೆ’

ಬಿಳಿಗಿರಿರಂಗನ ಬೆಟ್ಟದಲ್ಲಿ ಸೋಲಿಗರ ಆಸ್ಪತ್ರೆ ನೆಲಸಮ; ಅರಣ್ಯ ಇಲಾಖೆಯ ಕ್ರಮಕ್ಕೆ ಸೋಲಿಗ ಮುಖಂಡರ ಆಕ್ರೋಶ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ನೀಲಗಿರಿ ಆದಿವಾಸಿ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ನಡೆಯುತ್ತಿದ್ದ ಸೋಲಿಗರ ಆಸ್ಪತ್ರೆಯನ್ನು ಅರಣ್ಯ ಇಲಾಖೆಯವರು ತೆರವು ಮಾಡಿದ್ದರಿಂದ ಸೋಲಿಗರಿಗೆ ಸುಲಭವಾಗಿ ಸಿಗುತ್ತಿದ್ದ ಆರೋಗ್ಯ ಸೇವೆ ಮುಂದಿನ ದಿನಗಳಲ್ಲಿ ತುಟ್ಟಿಯಾಗಲಿದೆ.

ಬೆಟ್ಟದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯ ಕೈಗೊಂಡಿದ್ದ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಧಿಕಾರಿಗಳು ಬಿಆರ್‌ಟಿ ವಲಯಾರಣ್ಯಕ್ಕೆ ಸೇರಿದ ಈ ಆಸ್ಪತ್ರೆ ಕಟ್ಟಡವನ್ನು ನೆಲಸಮಗೊಳಿಸಿದರು. ಇದರಿಂದ ಸೋಲಿಗರಿಗೆ ಸುಲಭವಾಗಿ ಸಿಗುತ್ತಿದ್ದ ಚಿಕಿತ್ಸೆ ಹಾಗೂ ಔಷಧೋಪಚಾರ ಸೇವೆ ಕೈತಪ್ಪಿದೆ.

ಬೆಟ್ಟದಲ್ಲಿ ಸೋಲಿಗರ ಆಸ್ಪತ್ರೆ ಜೊತೆಗೆ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರಕ್ಕೆ ಆಸ್ಪತ್ರೆ ಹಾಗೂ ಸರ್ಕಾರಿ ಆರೋಗ್ಯ ಉಪ ಕೇಂದ್ರವಿದೆ. ೩ ಆರೋಗ್ಯ ಕೇಂದ್ರಗಳಿಂದ ಚಿಕಿತ್ಸೆ ಸಿಗುತ್ತಿತ್ತು. ಈಗ ಸೋಲಿಗರ ಆಸ್ಪತ್ರೆಗೆ ಕೆಡವಿರುವುದರಿಂದ ಮುಂದಿನ ದಿನಗಳಲ್ಲಿ ೨ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಚಿಕಿತ್ಸೆ ದೊರಕಲಿದೆ.

೧೯೭೫-೭೬ನೇ ಸಾಲಿನಲ್ಲಿ ತಮಿಳುನಾಡಿನ ಕೊತ್ತಗಿರಿಯಲ್ಲಿ ಸ್ಥಾಪಿತವಾಗಿರುವ ನೀಲಗಿರಿ ವೆಲ್‌ಫೇರ್ ಅಸೋಸಿ ಯೆಷನ್ ಸಂಸ್ಥೆಯು ಬಿಳಿಗಿರಿರಂಗನಬೆಟ್ಟದ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಆದಿವಾಸಿ ಸೋಲಿಗರಿಗೆ ಆಸ್ಪತ್ರೆ ತೆರೆದು ಸೇವೆ ನೀಡುತ್ತಿತ್ತು. ೧೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇದಾಗಿತ್ತು. ಒಬ್ಬ ವೈದ್ಯರು, ಒಬ್ಬ ನರ್ಸ್ ಮೂವರು ಸಹಾಯಕರಿದ್ದು ಚಿಕಿತ್ಸೆ ನೀಡುತ್ತಿದ್ದರು.

ಬೆಟ್ಟದ ವ್ಯಾಪ್ತಿಯ ಸೀಗೆಬೆಟ್ಟ, ಕಲ್ಯಾಣಿ, ಮಂಜಿಗುಂಡಿ, ಯರಕನಗದ್ದೆ, ಬಂಗ್ಲೆ, ಪುರಾಣಿ ಮತ್ತು ಬಂಗಲೆ ಪೋಡುಗಳ ಆದಿವಾಸಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಇದಲ್ಲದೆ ದೂರದ ಕೆರೆದಿಂಬ, ನಲ್ಲಿಕತ್ರಿ, ಮೊಣಕೈ, ಗೊಂಬೆಗಲ್ಲು ಪೋಡುಗಳ ಸೋಲಿಗರು ನಿರಂತರವಾಗಿ ಈ ಆಸತ್ರೆ ಸೇವೆಯನ್ನು ಪಡೆದು ಅನೇಕ ಕಾಯಿಲೆಗಳಿಂದ ಗುಣಮುಖರಾಗಿದ್ದಾರೆ.

ವಿಜಿಕೆಕೆ ಆಸ್ಪತ್ರೆಯಲ್ಲಿ ಒಬ್ಬ ವೈದ್ಯರು, ನರ್ಸ್ ಮತ್ತು ಆರೋಗ್ಯ ಉಪ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಇದ್ದಾರೆ. ಮುಂದಿನ ದಿನಗಳಲ್ಲಿ ಈ ಕೇಂದ್ರಗಳಿಂದಲೇ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಇಲ್ಲದಿದ್ದರೆ ಗುಂಬಳ್ಳಿಯ ಕರುಣಾ ಟ್ರಸ್ಟ್‌ನ ಆಸ್ಪತ್ರೆಗೆ ಬರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಕಳೆದ ೫೦ ವರ್ಷಗಳಿಂದಲೂ ಆರೋಗ್ಯ ಸೇವೆ ನೀಡುತ್ತಾ ಬಂದಿದ್ದ ಸೋಲಿಗರ ಆಸ್ಪತ್ರೆಯನ್ನು ಅಧಿಕೃತ ದಾಖಲೆಗಳಿಲ್ಲಎಂಬ ಕಾರಣ ನೀಡಿ ಅರಣ್ಯಾಧಿಕಾರಿಗಳು ತೆರವು ಮಾಡಿದ್ದು  ಸರಿಯಲ್ಲ ಎಂದು ಸೋಲಿಗ ಮುಖಂಡರಾದ ಸಣ್ಣರಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಲಗಿರಿ ಆದಿವಾಸಿ ವೆಲ್‌ಫೇರ್ ಅಸೋಸಿಯೇಷನ್ ಸಂಸ್ಥೆಯನ್ನು ಅಮೆರಿಕದ ನಿಲಂ ಆರ್ಮ್ ಸ್ಟ್ರಾಂಗ್ ಎಂಬ ಮಹಿಳೆ ಪ್ರಾರಂಭಿಸಿದ್ದರು. ನಂತರ ಅವರು ನೀಲಗಿರಿಯ ಆದಿವಾಸಿಗಳಾದ ತೋಡ, ಕುರುಬ ಕಟುನಾಯಕ ಮುಂತಾದ ಆದಿವಾಸಿಗಳನ್ನು ಸೇರಿಸಿ ಅವರಿಗೆ ಈ ಸಂಸ್ಥೆಯನ್ನು ವಹಿಸಿದ್ದರು. ಈ ಆದಿವಾಸಿಗಳೇ ಸಂಸ್ಥೆ ನಡೆಸುತ್ತಿದ್ದಾರೆ. ಇದರ ಕಾರ್ಯ ದರ್ಶಿಯಾಗಿರುವ ಆಳವ್ ಎಂಬವರು ತಮಿಳುನಾಡು ಮತ್ತು ಬಿಳಿಗಿರಿರಂಗನ ಬೆಟ್ಟದ ಆದಿವಾಸಿಗಳಿಗೆ ಆರೋಗ್ಯ ಸೇವೆ ನೀಡುತ್ತಿದ್ದರು.

ಆಸ್ಪತ್ರೆ ಕಟ್ಟಡ ಬಿಟ್ಟು ಭೂಮಿ ಪಡೆಯಬಹುದಿತ್ತು: 

ಯಳಂದೂರು: ಬೆಟ್ಟದಲ್ಲಿ ಸೋಲಿಗರ ಆಸ್ಪತ್ರೆ ತೆರೆಯಲು ಹಿಂದೆ ೪ ಎಕರೆ ೨೦ ಗುಂಟೆ ಅರಣ್ಯ ಭೂಮಿಯನ್ನು ಕೊತ್ತಗಿರಿಯ ನೀಲಗಿರಿ ವೆಲ್‌ಫೇರ್ ಅಸೋಸಿಯೆಷನ್ ಸಂಸ್ಥೆಗೆ ನೀಡಲಾಗಿತ್ತು. ಇತ್ತೀಚೆಗೆ ಅರಣ್ಯ ಇಲಾಖೆ ಜಂಟಿ ಸರ್ವೆ ಮಾಡದೆ ಒತ್ತುವರಿ ಮಾಡಿದ್ದಾರೆ ಎಂದು ನೋಟಿಸ್ ನೀಡಿದ್ದರು. ಆಸ್ಪತ್ರೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಿಲ್ಲ ಎಂದು ಜೆಸಿಬಿ ಮೂಲಕ ಸೋಲಿಗರ ಆಸ್ಪತ್ರೆ ಕಟ್ಟಡವನ್ನು ಕೆಡವಲಾಗಿದೆ. ಆಸತ್ರೆ ಕಟ್ಟಡ ಬಿಟ್ಟು ಭೂಮಿಯನ್ನು ವಶಕ್ಕೆ ಪಡೆಯಬಹುದಿತ್ತು. ಆದರೆ, ಅರಣ್ಯಾಧಿಕಾರಿಗಳು ಬೆಟ್ಟದ ವ್ಯಾಪ್ತಿಯ ೧೨,೦೦೦ ಸೋಲಿಗರಿಗೆ ಆಸ್ಪತ್ರೆ ಸೇವೆ ಸಿಗದಂತೆ ಮಾಡಿದ್ದಾರೆ ಎಂದು ಸ್ಥಳೀಯ ಸೋಲಿಗ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

” ವಿಜಿಕೆಕೆ ಆಸ್ಪತ್ರೆಗೂ ಮೊದಲೇ ನೀಲಗಿರಿ ಆಸ್ಪತ್ರೆ ಪ್ರಾರಂಭವಾಗಿತ್ತು. ಸೋಲಿಗರು ಹೆಚ್ಚಾಗಿ ಆಸ್ಪತ್ರೆಗೆ ಹೋಗುತ್ತಿದ್ದರು. ಆರೋಗ್ಯ ಸೇವೆ ನೀಡುತ್ತಿದ್ದ ಆಸ್ಪತ್ರೆಯನ್ನು ಅರಣ್ಯ ಇಲಾಖೆ ಯವರು ಕೆಡವಿದ್ದು ಅಮಾನವೀಯವಾದುದು.”

 -ಕೇತಮ್ಮ, ಆದಿವಾಸಿ ಮುಖಂಡರು, ಜಿಪಂ ಮಾಜಿ ಉಪಾಧ್ಯಕ್ಷರು.

“ಆಸ್ಪತ್ರೆ ಕೆಡವಿದ ಬಗ್ಗೆ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರ ಗಮನಕ್ಕೆ ತರಲಾಗಿದೆ. ಸದ್ಯವೇ ಜಿಲ್ಲಾಧಿಕಾರಿ ಶಿಲ್ಪಾನಾಗ್, ಚಾ.ನಗರ ವೃತ್ತದ ಸಿಸಿಎಫ್ ಅವರ ಗಮನಕ್ಕೆ ತರಲಾಗುವುದು. ಆಸ್ಪತ್ರೆಯನ್ನು ಮರು ನಿರ್ಮಾಣ ಮಾಡಬೇಕೆಂದು ಒತ್ತಾಯಿಸಲಾಗುವುದು.”

 -ಡಾ.ಸಿ.ಮಾದೇಗೌಡ, ಜಿಲ್ಲಾ ಆದಿವಾಸಿ ಬುಡಕಟ್ಟು ಅಭಿವೃದ್ಧಿ ಸಂಘದ ಕಾರ್ಯದರ್ಶಿ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago