Andolana originals

ಸುರಂಗ ಕಾಲುವೆ ಮೇಲೆ ಸಿಡಿಮದ್ದು ಬಳಸಿ ಕಾಮಗಾರಿ; ರೈತರ ಆತಂಕ

ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ

ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು ೨ ಕಿ.ಮೀ. ದೂರದವರೆಗೆ ಸುರಂಗವನ್ನು ಕೊರೆದು ಹೇಮಾವತಿ ಕಾಲುವೆಯನ್ನು ನಿರ್ಮಾಣ ಮಾಡಲಾಗಿದೆ.

ಈ ಕಾಲುವೆಯ ಮೂಲಕ ಸಾವಿರಾರು ಹೆಕ್ಟೇರ್ ಭೂಮಿಗೆ ನೀರು ಹರಿಸಲಾಗುತ್ತದೆ. ಆದರೆ, ಸುರಂಗದ ಮೇಲ್ಭಾಗದಲ್ಲಿ ಏತ ನೀರಾವರಿ ಯೋಜನೆಗೆ ಪೈಪ್‌ಲೈನ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರರು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಕಾಮಗಾರಿ ನಡೆಸುತ್ತಿದ್ದು, ಸುರಂಗ ಮಾರ್ಗದ ಕಾಲುವೆಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಈ ಭಾಗದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಶೀಳನೆರೆ ಹೋಬಳಿಗೆ ಹೇಮಾವತಿ ನದಿ ನೀರನ್ನು ಏತ ನೀರಾವರಿ ಮೂಲಕ ಪೂರೈಕೆ ಮಾಡಲು ಸುಮಾರು ೧೬೫ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಆದರೆ, ಈ ಕಾಮಗಾರಿ ನಡೆಸುತ್ತಿರುವ ಮಾರ್ಗದಲ್ಲಿ ಚಟ್ಟಂಗೆರೆ ಸುರಂಗ ಮಾರ್ಗದ ಕಾಲುವೆ ಇರುವ ಕಾರಣ ಹೇಮಾವತಿನೀರಾವರಿ ಇಲಾಖೆಯ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಸುರಂಗ ಸಂರಕ್ಷಣಾ ಪರಿಣತ ಇಂಜಿನಿಯರ್ ಅನ್ನು ಸ್ಥಳದಲ್ಲಿ ನಿಯೋಜನೆ ಮಾಡಿಕೊಂಡು ಕಾಮಗಾರಿ ನಡೆಸಬೇಕಿತ್ತು.

ಆದರೆ, ಏತ ನೀರಾವರಿ ಗುತ್ತಿಗೆದಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಸುರಂಗಮಾರ್ಗದಲ್ಲಿ ಬೃಹತ್ ಹಿಟಾಚಿ ಬಳಸಿ, ಬಂಡೆಗಳನ್ನು ಕೊರೆದು, ಬ್ಲಾಸ್ಟ್ ಮಾಡುವ ಮೂಲಕ ಕಲ್ಲುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಸುರಂಗ ಮಾರ್ಗದ ಕಾಲುವೆಗೆ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ಹಾಗಾಗಿ ಕೂಡಲೇ ಅಗತ್ಯ ಸುರಂಗ ತಜ್ಞ ಇಂಜಿನಿಯರನ್ನು ಸ್ಥಳದಲ್ಲಿ ನಿಯೋಜಿಸಿಕೊಂಡು ತಜ್ಞರ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸಬೇಕು. ಈ ಮೂಲಕ ಹೇಮಾವತಿ ಕಾಲುವೆಯನ್ನು ಸಂರಕ್ಷಣೆ ಮಾಡಬೇಕು. ಇಲ್ಲದಿದ್ದರೆ ಸುರಂಗ ಮಾರ್ಗದ ಕಾಲುವೆಗೆ ಅಪಾಯ ಎದುರಾದರೆ ಇದಕ್ಕೆ ಯಾರು ಹೊಣೆಗಾರರಾಗುತ್ತಾರೆ ಎಂದು ರೈತರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಕೂಡಲೇ ಹೇಮಾವತಿ ಜಲಾಶಯ ಯೋಜನೆಯ ಪಾಂಡವಪುರ(ಚಿನಕುರಳಿ)ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳದೆ, ಸುರಂಗ ಮಾರ್ಗದಲ್ಲಿ ಬಂಡೆಗಳನ್ನು ಸಿಡಿಮದ್ದು ಬಳಸಿ ಹಾಗೂ ಬೃಹತ್ ಹಿಟಾಚಿ ಬಳಿಸಿ ಬಂಡೆಗಳನ್ನು ಕೊರೆಯುತ್ತಿರುವ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಚಟ್ಟಂಗೆರೆ ಸುರಂಗ ಮಾರ್ಗವು ಸಂರಕ್ಷಿತ ಪ್ರದೇಶವಾಗಿದೆ. ಹಾಗಾಗಿ ತಾಲ್ಲೂಕು ಆಡಳಿತವು ಕೂಡಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿನಡೆಸುವಂತೆ ಆದೇಶ ನೀಡಬೇಕು ಎಂದು ಚಟ್ಟಂಗೆರೆ ಸುತ್ತಮುತ್ತಲ ಗ್ರಾಮದ ರೈತರು ತಾಲ್ಲೂಕು ತಹಸಿಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

” ಚಟ್ಟಂಗೆರೆ ಸುರಂಗ ಮಾರ್ಗದ ಮುಖ್ಯ ನಾಲೆಯು ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ಹಾಗೂ ಮಂಡ್ಯ ತಾಲ್ಲೂಕುಗಳ ಸುಮಾರು ೩೦ ಸಾವಿರ ಎಕರೆ ಭೂ ಪ್ರದೇಶಕ್ಕೆ ನೀರು ಹರಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಸುರಂಗ ಮಾರ್ಗದ ನಾಲೆಗೆ ಅಪಾಯ ಸಂಭವಿಸುವಂತಹ ಸ್ಥಿತಿಯಲ್ಲಿ ಪೈಪ್‌ಲೈನ್ಅ ಳವಡಿಸುವ ಕಾಮಗಾರಿಯನ್ನು ಗುತ್ತಿಗೆದಾರರು ಮಾಡುತ್ತಿದ್ದಾರೆ. ಇದರಿಂದ ನಮ್ಮ ಚಟ್ಟಂಗೆರೆ ಸುರಂಗದ ಮುಖ್ಯ ನಾಲೆಯು ಕಂಪನಗೊಳ್ಳುತ್ತಿದ್ದು ಯಾವುದೇ ಕ್ಷಣದಲ್ಲೂ ನಾಲೆ ಕುಸಿಯುವ ಅಪಾಯ ಇದೆ. ಹಾಗಾಗಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿ, ಸುರಂಗ ತಜ್ಞರ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸಿ ಸುರಂಗ ಮಾರ್ಗದ ಮುಖ್ಯ ನಾಲೆಗೆ ಆಗುವ ಅಪಾಯವನ್ನು ತಪ್ಪಿಸಬೇಕು.”

-ಚಟ್ಟಂಗೆರೆ ನಾಗೇಶ್, ವಕೀಲರು, ಕೆ.ಆರ್.ಪೇಟೆ.

” ಕಂಫ್ರೆಷರ್‌ನಿಂದ ಕುಳಿ ಹಾಕಿ ಕಲ್ಲು ಬಂಡೆಗಳನ್ನು ಪುಡಿ ಮಾಡುತ್ತಿರುವುದರಿಂದ ಕೆಳ ಭಾಗದಲ್ಲಿರುವ ಚಟ್ಟಂಗೆರೆ ಸುರಂಗ ನಾಲೆಯು ಕಂಪನಕ್ಕೆ ಒಳಗಾಗಿ ಮುಖ್ಯ ನಾಲೆಗೆ ಅಪಾಯ ಎದುರಾಗುವ ಕಾರಣ ಈ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆದೇಶ ನೀಡಲಾಗಿದೆ. ಸುರಂಗ ತಜ್ಞರ ತಾಂತ್ರಿಕ ವರದಿ ಪಡೆದು ಕಾಮಗಾರಿಯನ್ನು ಆರಂಭಿಸಲು ಸೂಚನೆ ನೀಡಲಾಗಿದೆ.”

-ಶ್ರೀನಾಥ್, ಕಾರ್ಯಪಾಲಕ ಇಂಜಿನಿಯರ್, ಹೇಮಾವತಿ ಎಡದಂಡ ನಾಲೆ ವಿಭಾಗ ಪಾಂಡವಪುರ

 

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago