Andolana originals

ಸುರಂಗ ಕಾಲುವೆ ಮೇಲೆ ಸಿಡಿಮದ್ದು ಬಳಸಿ ಕಾಮಗಾರಿ; ರೈತರ ಆತಂಕ

ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ

ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು ೨ ಕಿ.ಮೀ. ದೂರದವರೆಗೆ ಸುರಂಗವನ್ನು ಕೊರೆದು ಹೇಮಾವತಿ ಕಾಲುವೆಯನ್ನು ನಿರ್ಮಾಣ ಮಾಡಲಾಗಿದೆ.

ಈ ಕಾಲುವೆಯ ಮೂಲಕ ಸಾವಿರಾರು ಹೆಕ್ಟೇರ್ ಭೂಮಿಗೆ ನೀರು ಹರಿಸಲಾಗುತ್ತದೆ. ಆದರೆ, ಸುರಂಗದ ಮೇಲ್ಭಾಗದಲ್ಲಿ ಏತ ನೀರಾವರಿ ಯೋಜನೆಗೆ ಪೈಪ್‌ಲೈನ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರರು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಕಾಮಗಾರಿ ನಡೆಸುತ್ತಿದ್ದು, ಸುರಂಗ ಮಾರ್ಗದ ಕಾಲುವೆಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಈ ಭಾಗದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಶೀಳನೆರೆ ಹೋಬಳಿಗೆ ಹೇಮಾವತಿ ನದಿ ನೀರನ್ನು ಏತ ನೀರಾವರಿ ಮೂಲಕ ಪೂರೈಕೆ ಮಾಡಲು ಸುಮಾರು ೧೬೫ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಆದರೆ, ಈ ಕಾಮಗಾರಿ ನಡೆಸುತ್ತಿರುವ ಮಾರ್ಗದಲ್ಲಿ ಚಟ್ಟಂಗೆರೆ ಸುರಂಗ ಮಾರ್ಗದ ಕಾಲುವೆ ಇರುವ ಕಾರಣ ಹೇಮಾವತಿನೀರಾವರಿ ಇಲಾಖೆಯ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಸುರಂಗ ಸಂರಕ್ಷಣಾ ಪರಿಣತ ಇಂಜಿನಿಯರ್ ಅನ್ನು ಸ್ಥಳದಲ್ಲಿ ನಿಯೋಜನೆ ಮಾಡಿಕೊಂಡು ಕಾಮಗಾರಿ ನಡೆಸಬೇಕಿತ್ತು.

ಆದರೆ, ಏತ ನೀರಾವರಿ ಗುತ್ತಿಗೆದಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಸುರಂಗಮಾರ್ಗದಲ್ಲಿ ಬೃಹತ್ ಹಿಟಾಚಿ ಬಳಸಿ, ಬಂಡೆಗಳನ್ನು ಕೊರೆದು, ಬ್ಲಾಸ್ಟ್ ಮಾಡುವ ಮೂಲಕ ಕಲ್ಲುಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಸುರಂಗ ಮಾರ್ಗದ ಕಾಲುವೆಗೆ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ಹಾಗಾಗಿ ಕೂಡಲೇ ಅಗತ್ಯ ಸುರಂಗ ತಜ್ಞ ಇಂಜಿನಿಯರನ್ನು ಸ್ಥಳದಲ್ಲಿ ನಿಯೋಜಿಸಿಕೊಂಡು ತಜ್ಞರ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸಬೇಕು. ಈ ಮೂಲಕ ಹೇಮಾವತಿ ಕಾಲುವೆಯನ್ನು ಸಂರಕ್ಷಣೆ ಮಾಡಬೇಕು. ಇಲ್ಲದಿದ್ದರೆ ಸುರಂಗ ಮಾರ್ಗದ ಕಾಲುವೆಗೆ ಅಪಾಯ ಎದುರಾದರೆ ಇದಕ್ಕೆ ಯಾರು ಹೊಣೆಗಾರರಾಗುತ್ತಾರೆ ಎಂದು ರೈತರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಕೂಡಲೇ ಹೇಮಾವತಿ ಜಲಾಶಯ ಯೋಜನೆಯ ಪಾಂಡವಪುರ(ಚಿನಕುರಳಿ)ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳದೆ, ಸುರಂಗ ಮಾರ್ಗದಲ್ಲಿ ಬಂಡೆಗಳನ್ನು ಸಿಡಿಮದ್ದು ಬಳಸಿ ಹಾಗೂ ಬೃಹತ್ ಹಿಟಾಚಿ ಬಳಿಸಿ ಬಂಡೆಗಳನ್ನು ಕೊರೆಯುತ್ತಿರುವ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಚಟ್ಟಂಗೆರೆ ಸುರಂಗ ಮಾರ್ಗವು ಸಂರಕ್ಷಿತ ಪ್ರದೇಶವಾಗಿದೆ. ಹಾಗಾಗಿ ತಾಲ್ಲೂಕು ಆಡಳಿತವು ಕೂಡಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿನಡೆಸುವಂತೆ ಆದೇಶ ನೀಡಬೇಕು ಎಂದು ಚಟ್ಟಂಗೆರೆ ಸುತ್ತಮುತ್ತಲ ಗ್ರಾಮದ ರೈತರು ತಾಲ್ಲೂಕು ತಹಸಿಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

” ಚಟ್ಟಂಗೆರೆ ಸುರಂಗ ಮಾರ್ಗದ ಮುಖ್ಯ ನಾಲೆಯು ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ಹಾಗೂ ಮಂಡ್ಯ ತಾಲ್ಲೂಕುಗಳ ಸುಮಾರು ೩೦ ಸಾವಿರ ಎಕರೆ ಭೂ ಪ್ರದೇಶಕ್ಕೆ ನೀರು ಹರಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಸುರಂಗ ಮಾರ್ಗದ ನಾಲೆಗೆ ಅಪಾಯ ಸಂಭವಿಸುವಂತಹ ಸ್ಥಿತಿಯಲ್ಲಿ ಪೈಪ್‌ಲೈನ್ಅ ಳವಡಿಸುವ ಕಾಮಗಾರಿಯನ್ನು ಗುತ್ತಿಗೆದಾರರು ಮಾಡುತ್ತಿದ್ದಾರೆ. ಇದರಿಂದ ನಮ್ಮ ಚಟ್ಟಂಗೆರೆ ಸುರಂಗದ ಮುಖ್ಯ ನಾಲೆಯು ಕಂಪನಗೊಳ್ಳುತ್ತಿದ್ದು ಯಾವುದೇ ಕ್ಷಣದಲ್ಲೂ ನಾಲೆ ಕುಸಿಯುವ ಅಪಾಯ ಇದೆ. ಹಾಗಾಗಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿ, ಸುರಂಗ ತಜ್ಞರ ಉಪಸ್ಥಿತಿಯಲ್ಲಿ ಕಾಮಗಾರಿ ನಡೆಸಿ ಸುರಂಗ ಮಾರ್ಗದ ಮುಖ್ಯ ನಾಲೆಗೆ ಆಗುವ ಅಪಾಯವನ್ನು ತಪ್ಪಿಸಬೇಕು.”

-ಚಟ್ಟಂಗೆರೆ ನಾಗೇಶ್, ವಕೀಲರು, ಕೆ.ಆರ್.ಪೇಟೆ.

” ಕಂಫ್ರೆಷರ್‌ನಿಂದ ಕುಳಿ ಹಾಕಿ ಕಲ್ಲು ಬಂಡೆಗಳನ್ನು ಪುಡಿ ಮಾಡುತ್ತಿರುವುದರಿಂದ ಕೆಳ ಭಾಗದಲ್ಲಿರುವ ಚಟ್ಟಂಗೆರೆ ಸುರಂಗ ನಾಲೆಯು ಕಂಪನಕ್ಕೆ ಒಳಗಾಗಿ ಮುಖ್ಯ ನಾಲೆಗೆ ಅಪಾಯ ಎದುರಾಗುವ ಕಾರಣ ಈ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆದೇಶ ನೀಡಲಾಗಿದೆ. ಸುರಂಗ ತಜ್ಞರ ತಾಂತ್ರಿಕ ವರದಿ ಪಡೆದು ಕಾಮಗಾರಿಯನ್ನು ಆರಂಭಿಸಲು ಸೂಚನೆ ನೀಡಲಾಗಿದೆ.”

-ಶ್ರೀನಾಥ್, ಕಾರ್ಯಪಾಲಕ ಇಂಜಿನಿಯರ್, ಹೇಮಾವತಿ ಎಡದಂಡ ನಾಲೆ ವಿಭಾಗ ಪಾಂಡವಪುರ

 

 

 

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

6 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

7 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

9 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

12 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

13 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

19 hours ago