Andolana originals

3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸೌಲಭ್ಯ ಮರೀಚಿಕೆ

ಮಹಾದೇಶ್ ಎಂ. ಗೌಡ
ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ವ್ಯಾಸಂಗ ಮಾಡುತ್ತಿರುವ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಇಲ್ಲದೆ, ೨,೭೦೦ ವಿದ್ಯಾರ್ಥಿಗಳು ತಮ್ಮ ಆಧಾರ್ ತಿದ್ದುಪಡಿ ಆಗದೆ ಇರುವುದರಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ಹನೂರು ಶೈಕ್ಷಣಿಕ ವಲಯದಲ್ಲಿ ವಿದ್ಯಾ ಭ್ಯಾಸ ಮಾಡುತ್ತಿರುವ ೩ ಸಾವಿರ ವಿದ್ಯಾರ್ಥಿ ಗಳು ಈಗಾಗಲೇ ಆಧಾರ್ ನೋಂದಣಿ ಮಾಡಿಸಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳ ಆಧಾರ್ ಕಾರ್ಡ್‌ನಲ್ಲಿ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಅಕ್ಷರಗಳು ತಿದ್ದುಪಡಿಯಾಗಬೇಕಿದೆ.

ಕೆಲವು ವಿದ್ಯಾರ್ಥಿಗಳ ಆಧಾರ್ ಕಾರ್ಡ್‌ನಲ್ಲಿ ವಿಳಾಸ, ಪೋಷಕರ ಹೆಸರು ತಪ್ಪು ಇರುವುದರಿಂದ ತಿದ್ದುಪಡಿ ನಡೆಯುತ್ತಿದೆ. ತಿದ್ದುಪಡಿ ಸಂದರ್ಭದಲ್ಲಿಯೂ ಸಮರ್ಪಕ ದಾಖಲಾತಿ ಇಲ್ಲದೆ ಇರುವುದರಿಂದ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂಬುದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದೆ.

ಆಧಾರ್ ಕಿಟ್ ಮೂಲಕ ತಿದ್ದುಪಡಿ: ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಹಸಿಲ್ದಾರ್ ಕಚೇರಿ ಹಾಗೂ ಬಿಎಸ್‌ಎನ್‌ಎಲ್ ಕಚೇರಿ ಯಲ್ಲಿ ಮಾತ್ರ ಆಧಾರ್ ತಿದ್ದುಪಡಿ ಸಮಸ್ಯೆಗಳನ್ನು ಬಗೆಹರಿಸಲು ಆಧಾರ್ ಕೇಂದ್ರ ತೆರೆಯಲಾಗಿದೆ. ಪ್ರತಿದಿನಕ್ಕೆ ೩೦ ಜನರ ತಿದ್ದುಪಡಿಯನ್ನಷ್ಟೇ ಮಾಡಬಹುದು. ಕೆಲವು ಸಂದರ್ಭಗಳಲ್ಲಿ ಸರ್ವರ್ ಸಮಸ್ಯೆಯಿಂದ ವಾರಗಟ್ಟಲೆ ತಿದ್ದುಪಡಿ ಸ್ಥಗಿತಗೊಂಡಿದೆ.

ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ಪ್ರತಿ ಶಾಲೆಗಳಿಗೆ ಆಧಾರ್ ಕಿಟ್ ಕಳುಹಿಸಿಕೊಡುವ ಮೂಲಕ ತಿದ್ದುಪಡಿಗೆ ಕ್ರಮ ಕೈಗೊಳ್ಳಲಾಗಿದೆ.

ಜನನ ಪ್ರಮಾಣಪತ್ರವಿಲ್ಲದೆ ಆಧಾರ್ ನೋಂದಣಿ ಕಷ್ಟ: ಇತ್ತೀಚೆಗೆ ಮಕ್ಕಳ ಆಧಾರ್ ಮಾಡಿಸಲು ಜನನ ಪ್ರಮಾಣಪತ್ರ ಸಲ್ಲಿಸುವು ದನ್ನು ಕಡ್ಡಾಯ ಮಾಡಲಾಗಿದೆ. ಈ ಹಿಂದೆ ಶಾಲಾ ದಾಖಲಾತಿಯನ್ನು ಪರಿಗಣಿಸಿ ಆಧಾರ್ ನೋಂದಣಿ ಮಾಡಲಾಗುತ್ತಿತ್ತು. ಆದರೆ ಇದೀಗ ಜನನ ಪ್ರಮಾಣಪತ್ರ ಸಲ್ಲಿಕೆಯನ್ನು ಕಡ್ಡಾಯ ಮಾಡಿರುವುದರಿಂದ ಪೋಷಕರಿಗೆ ಇದು ತಲೆನೋವಾಗಿ ಪರಿಗಣಿಸಿದೆ. ಹನೂರು ಶೈಕ್ಷಣಿಕ ವಲಯದಲ್ಲಿ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನನ ಪ್ರಮಾಣಪತ್ರವೇ ಇಲ್ಲದೆ ಇರುವುದರಿಂದ ಆಧಾರ್ ನೋಂದಣಿ ಸಮಸ್ಯೆಯಾಗಿದೆ.

ಸಮರ್ಪಕ ದಾಖಲಾತಿ ಕೊರತೆ: ಈಗಾ ಗಲೇ ಆಧಾರ್ ನೋಂದಣಿ ಮಾಡಿಸಿಕೊಂಡಿರು ವವರ ಆಧಾರ್‌ನಲ್ಲಿ ಲೋಪ-ದೋಷಗಳಿದ್ದರೆ ತಿದ್ದುಪಡಿ ಮಾಡಲು ಸಮರ್ಪಕ ದಾಖಲಾತಿಗಳನ್ನು ಒದಗಿಸಿಕೊಡಬೇಕಿದೆ. ಸಮರ್ಪಕ ದಾಖಲಾತಿಗಳನ್ನು ಒದಗಿಸಿಕೊಟ್ಟರೆ ಮಾತ್ರ ಆಧಾರ ತಿದ್ದುಪಡಿಯಾಗುತ್ತದೆ. ಹನೂರು ಶೈಕ್ಷಣಿಕ ವಲಯ ವ್ಯಾಪ್ತಿಯ ಮಾರ್ಟಳ್ಳಿ, ರಾಮಾಪುರ, ಮ. ಬೆಟ್ಟ, ಹೂಗ್ಯಂ, ಬಂಡಳ್ಳಿ, ಕೌದಳ್ಳಿ, ಕುರಹಟ್ಟಿ ಹೊಸೂರು ಗ್ರಾಮಗಳ ಶಾಲೆಗಳಲ್ಲಿ ಇದುವರೆಗೂ ಸುಮಾರು ೨,೭೦೦ ಆಧಾರ್ ತಿದ್ದುಪಡಿ ಮಾಡಲಾಗಿದೆ.

ಸಮರ್ಪಕ ದಾಖಲಾತಿ ಒದಗಿಸಿಕೊಡದ ಹಿನ್ನೆಲೆಯಲ್ಲಿ ಕೇವಲ ೪೦೦ ಆಧಾರ್ ನೋಂದಣಿ ಮಾತ್ರ ಯಶಸ್ವಿಯಾಗಿದೆ. ಇನ್ನು ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಶಾಲೆಗಳಲ್ಲಿಯೂ ತಿದ್ದುಪಡಿ ಆಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago