Andolana originals

3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸೌಲಭ್ಯ ಮರೀಚಿಕೆ

ಮಹಾದೇಶ್ ಎಂ. ಗೌಡ
ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ವ್ಯಾಸಂಗ ಮಾಡುತ್ತಿರುವ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಇಲ್ಲದೆ, ೨,೭೦೦ ವಿದ್ಯಾರ್ಥಿಗಳು ತಮ್ಮ ಆಧಾರ್ ತಿದ್ದುಪಡಿ ಆಗದೆ ಇರುವುದರಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ಹನೂರು ಶೈಕ್ಷಣಿಕ ವಲಯದಲ್ಲಿ ವಿದ್ಯಾ ಭ್ಯಾಸ ಮಾಡುತ್ತಿರುವ ೩ ಸಾವಿರ ವಿದ್ಯಾರ್ಥಿ ಗಳು ಈಗಾಗಲೇ ಆಧಾರ್ ನೋಂದಣಿ ಮಾಡಿಸಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳ ಆಧಾರ್ ಕಾರ್ಡ್‌ನಲ್ಲಿ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಅಕ್ಷರಗಳು ತಿದ್ದುಪಡಿಯಾಗಬೇಕಿದೆ.

ಕೆಲವು ವಿದ್ಯಾರ್ಥಿಗಳ ಆಧಾರ್ ಕಾರ್ಡ್‌ನಲ್ಲಿ ವಿಳಾಸ, ಪೋಷಕರ ಹೆಸರು ತಪ್ಪು ಇರುವುದರಿಂದ ತಿದ್ದುಪಡಿ ನಡೆಯುತ್ತಿದೆ. ತಿದ್ದುಪಡಿ ಸಂದರ್ಭದಲ್ಲಿಯೂ ಸಮರ್ಪಕ ದಾಖಲಾತಿ ಇಲ್ಲದೆ ಇರುವುದರಿಂದ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂಬುದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದೆ.

ಆಧಾರ್ ಕಿಟ್ ಮೂಲಕ ತಿದ್ದುಪಡಿ: ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಹಸಿಲ್ದಾರ್ ಕಚೇರಿ ಹಾಗೂ ಬಿಎಸ್‌ಎನ್‌ಎಲ್ ಕಚೇರಿ ಯಲ್ಲಿ ಮಾತ್ರ ಆಧಾರ್ ತಿದ್ದುಪಡಿ ಸಮಸ್ಯೆಗಳನ್ನು ಬಗೆಹರಿಸಲು ಆಧಾರ್ ಕೇಂದ್ರ ತೆರೆಯಲಾಗಿದೆ. ಪ್ರತಿದಿನಕ್ಕೆ ೩೦ ಜನರ ತಿದ್ದುಪಡಿಯನ್ನಷ್ಟೇ ಮಾಡಬಹುದು. ಕೆಲವು ಸಂದರ್ಭಗಳಲ್ಲಿ ಸರ್ವರ್ ಸಮಸ್ಯೆಯಿಂದ ವಾರಗಟ್ಟಲೆ ತಿದ್ದುಪಡಿ ಸ್ಥಗಿತಗೊಂಡಿದೆ.

ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ಪ್ರತಿ ಶಾಲೆಗಳಿಗೆ ಆಧಾರ್ ಕಿಟ್ ಕಳುಹಿಸಿಕೊಡುವ ಮೂಲಕ ತಿದ್ದುಪಡಿಗೆ ಕ್ರಮ ಕೈಗೊಳ್ಳಲಾಗಿದೆ.

ಜನನ ಪ್ರಮಾಣಪತ್ರವಿಲ್ಲದೆ ಆಧಾರ್ ನೋಂದಣಿ ಕಷ್ಟ: ಇತ್ತೀಚೆಗೆ ಮಕ್ಕಳ ಆಧಾರ್ ಮಾಡಿಸಲು ಜನನ ಪ್ರಮಾಣಪತ್ರ ಸಲ್ಲಿಸುವು ದನ್ನು ಕಡ್ಡಾಯ ಮಾಡಲಾಗಿದೆ. ಈ ಹಿಂದೆ ಶಾಲಾ ದಾಖಲಾತಿಯನ್ನು ಪರಿಗಣಿಸಿ ಆಧಾರ್ ನೋಂದಣಿ ಮಾಡಲಾಗುತ್ತಿತ್ತು. ಆದರೆ ಇದೀಗ ಜನನ ಪ್ರಮಾಣಪತ್ರ ಸಲ್ಲಿಕೆಯನ್ನು ಕಡ್ಡಾಯ ಮಾಡಿರುವುದರಿಂದ ಪೋಷಕರಿಗೆ ಇದು ತಲೆನೋವಾಗಿ ಪರಿಗಣಿಸಿದೆ. ಹನೂರು ಶೈಕ್ಷಣಿಕ ವಲಯದಲ್ಲಿ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನನ ಪ್ರಮಾಣಪತ್ರವೇ ಇಲ್ಲದೆ ಇರುವುದರಿಂದ ಆಧಾರ್ ನೋಂದಣಿ ಸಮಸ್ಯೆಯಾಗಿದೆ.

ಸಮರ್ಪಕ ದಾಖಲಾತಿ ಕೊರತೆ: ಈಗಾ ಗಲೇ ಆಧಾರ್ ನೋಂದಣಿ ಮಾಡಿಸಿಕೊಂಡಿರು ವವರ ಆಧಾರ್‌ನಲ್ಲಿ ಲೋಪ-ದೋಷಗಳಿದ್ದರೆ ತಿದ್ದುಪಡಿ ಮಾಡಲು ಸಮರ್ಪಕ ದಾಖಲಾತಿಗಳನ್ನು ಒದಗಿಸಿಕೊಡಬೇಕಿದೆ. ಸಮರ್ಪಕ ದಾಖಲಾತಿಗಳನ್ನು ಒದಗಿಸಿಕೊಟ್ಟರೆ ಮಾತ್ರ ಆಧಾರ ತಿದ್ದುಪಡಿಯಾಗುತ್ತದೆ. ಹನೂರು ಶೈಕ್ಷಣಿಕ ವಲಯ ವ್ಯಾಪ್ತಿಯ ಮಾರ್ಟಳ್ಳಿ, ರಾಮಾಪುರ, ಮ. ಬೆಟ್ಟ, ಹೂಗ್ಯಂ, ಬಂಡಳ್ಳಿ, ಕೌದಳ್ಳಿ, ಕುರಹಟ್ಟಿ ಹೊಸೂರು ಗ್ರಾಮಗಳ ಶಾಲೆಗಳಲ್ಲಿ ಇದುವರೆಗೂ ಸುಮಾರು ೨,೭೦೦ ಆಧಾರ್ ತಿದ್ದುಪಡಿ ಮಾಡಲಾಗಿದೆ.

ಸಮರ್ಪಕ ದಾಖಲಾತಿ ಒದಗಿಸಿಕೊಡದ ಹಿನ್ನೆಲೆಯಲ್ಲಿ ಕೇವಲ ೪೦೦ ಆಧಾರ್ ನೋಂದಣಿ ಮಾತ್ರ ಯಶಸ್ವಿಯಾಗಿದೆ. ಇನ್ನು ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಶಾಲೆಗಳಲ್ಲಿಯೂ ತಿದ್ದುಪಡಿ ಆಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago