Andolana originals

ನಕಲಿ ನಂದಿನಿ ತುಪ್ಪ ತಯಾರಿಕಾ ಜಾಲ: ತನಿಖೆ ಚುರುಕು

ಎಚ್.ಎಸ್.ದಿನೇಶ್‌ಕುಮಾರ್

ಮೈಸೂರಿನಲ್ಲಿ ಪತ್ತೆಯಾಗಿದ್ದ ಘಟಕಕ್ಕೂ ನಂಟು

ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿರುವ ಕಿಂಗ್‌ಪಿನ್ ದಂಪತಿಗಳೇ ಇದರ ರೂವಾರಿಗಳು

೪ ವರ್ಷಗಳ ಹಿಂದೆ ಹೊಸಹುಂಡಿ ಗ್ರಾಮದ ಬಳಿ ತಲೆ ಎತ್ತಿದ್ದ ನಂದಿನಿ ನಕಲಿ ಘಟಕ 

ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷಗಳ ಹಿಂದೆ ಇಂತಹುದೇ ಪ್ರಕರಣ ನಗರದಲ್ಲಿ ಪತ್ತೆಯಾಗಿತ್ತು. ಅದೇ ಜಾಲ ಇದೀಗ ಬೆಂಗಳೂರಿನಲ್ಲಿ ನಕಲಿ ತುಪ್ಪ ತಯಾರಿಕೆ ಮಾಡುತ್ತಿತ್ತು ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ. ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ತಮಿಳುನಾಡು ಮೂಲದ ಆರೋಪಿಗಳಾದ ಶಿವಕುಮಾರ್ ಹಾಗೂ ರಮ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಅವರು ಮೈಸೂರಿನಲ್ಲಿ ನಡೆಸಲಾಗುತ್ತಿದ್ದ ನಕಲಿ ತುಪ್ಪ ತಯಾರಿಕಾ ಘಟಕ ಕೂಡ ನಮ್ಮ ನೇತೃತ್ವದಲ್ಲಿಯೇ ನಡೆಯುತ್ತಿತ್ತು, ಇಲ್ಲಿಗೆ ನಮ್ಮ ತಂಡದವರನ್ನೇ ನೇಮಿಸಿ ತುಪ್ಪ ತಯಾರಿಕೆ ಮಾಡಲಾಗುತ್ತಿತ್ತು ಎಂದು ಹೇಳಿದ್ದಾರೆ ಎನ್ನಲಾಗಿದೆ.

೨೦೨೧ರ ಡಿಸೆಂಬರ್ ೧೬ ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಹೊಸಹುಂಡಿ ಗ್ರಾಮದ ಬಳಿ ನಂದಿನಿ ತುಪ್ಪದೊಂದಿಗೆ ಡಾಲ್ಡಾ ಬೆರೆಸಿ ನಕಲಿತುಪ್ಪ ತಯಾರಿಸುತ್ತಿದ್ದ ಘಟಕದ ಮೇಲೆ ಮಾನವ ಹಕ್ಕುಗಳ ರಕ್ಷಣಾ ವೇದಿಕೆ, ಮೈಮುಲ್ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದರು

ಅಂದು ಲಕ್ಷಾಂತರ ರೂ. ಮೌಲ್ಯದ ನಕಲಿ ತುಪ್ಪವನ್ನು ವಶಕ್ಕೆ ಪಡೆಯಲಾಗಿತ್ತು. ಆ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರುನಡೆಸುತ್ತಿದ್ದು, ಅದಿನ್ನೂ ವಿಚಾರಣಾ ಹಂತದಲ್ಲಿಯೇ ಇದೆ. ಇದೀಗಬೆಂಗಳೂರಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ದಾಳಿ ನಡೆದಿರುವುದು ರಾಜ್ಯಾದ್ಯಂತ ಸುದ್ದಿಯಾಗಿದೆ.

ಹೊಸಹುಂಡಿ ಗ್ರಾಮದ ಸುಧಾಕರ್ ಎಂಬವರಿಗೆ ಸೇರಿದ ಜಮೀನನ್ನು ಬಾಡಿಗೆಗೆ ಪಡೆದಿದ್ದ ತಮಿಳುನಾಡು ಮೂಲದ ಮುರುಗೇಶ್ ನಕಲಿ ತುಪ್ಪ ತಯಾರಿಕಾ ಘಟಕವನ್ನು ನಡೆಸುತ್ತಿದ್ದನು. ಅವನೊಂದಿಗೆ ಅಶ್ವಿನಿ, ರಾಯಚೂರು ಮೂಲದ ರಾಘವೇಂದ್ರ, ಬೆಂಗಳೂರಿನ ಎಲ್.ಕುಮಾರ್, ಸಂತೋಷ್ ಎಂಬವರು ಅಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿ ಏನು ನಡೆಯುತ್ತಿದೆ ಎಂಬುದು ಸ್ಥಳೀಯರಿಗೂ ತಿಳಿದಿರಲಿಲ್ಲ.

ಗೋದಾಮನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದ ಅಧಿಕಾರಿಗಳು ನಕಲಿ ತುಪ್ಪ ತಯಾರಿಕೆಗೆ ಬಳಸುತ್ತಿದ್ದ ಯಂತ್ರಗಳು, ಕವರ್‌ಗಳು, ನಂದಿನಿ ಪೋಸ್ಟ್‌ರ್‌ಗಳು ಹೀಗೆ ಅಲ್ಲಿದ್ದ ಹಲವಾರು ವಸ್ತುಗಳನ್ನು ಜಪ್ತಿ ಮಾಡಿ ಗೋದಾಮಿಗೆ ಬೀಗ ಜಡಿದಿದ್ದರು. ಗೋದಾಮಿನಲ್ಲಿ ಅಸಲಿ ನಂದಿನಿ ತುಪ್ಪದ ಜೊತೆಗೆ ಸಾವಿರಾರು ಕೆಜಿ ಡಾಲ್ಡಾವನ್ನು ದಾಸ್ತಾನಿಡಲಾಗಿತ್ತು. ಡಾಲ್ಡ ಹಾಗೂ ತುಪ್ಪವನ್ನು ಕಾಯಿಸಲು ಯಂತ್ರಗಳು, ನಂದಿನಿ ಹೆಸರನ್ನೇ ಹೋಲುವ ಕವರ್‌ಗಳ ತಯಾರಿಕೆಯ ಯಂತ್ರ ಸ್ಥಳದಲ್ಲಿ ಪತ್ತೆಯಾಗಿದ್ದವು. ಖದೀಮರು ನಕಲಿ ತುಪ್ಪವನ್ನು ಸ್ಥಳೀಯವಾಗಿ ಮಾರಾಟ ಮಾಡುತ್ತಿದ್ದರು. ನಂದಿನಿ ಏಜೆನ್ಸಿ ಪಡೆದಿದ್ದೇನೆ ಎಂದು ಸುಳ್ಳು ಹೇಳುವ ಮೂಲಕ ಕಡಿಮೆ ದರದಲ್ಲಿ ಹಾಗೂ ಸಾಲದ ರೂಪದಲ್ಲಿ ನಕಲಿ ತುಪ್ಪವನ್ನು ಪೂರೈಕೆ ಮಾಡುತ್ತಿದ್ದರು.

ಇಂತಹ ಅಕ್ರಮಗಳನ್ನು ತಡೆಯಲು ಮೈಮುಲ್‌ನ ವಿಜಿಲೆನ್ಸ್ ತಂಡವನ್ನು ಚುರುಕುಗೊಳಿಸುತ್ತೇವೆ. ಪ್ರತಿ ವಾರಕ್ಕೊಮ್ಮೆ ಎಲ್ಲಾ ಮಿಲ್ಕ್ ಪಾರ್ಲರ್‌ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಲಾಗುವುದು. ಗುಣಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಪ್ರತಿ ವಾರ ಉತ್ಪನ್ನಗಳನ್ನು ಲ್ಯಾಬ್‌ಗೆ ತಂದು ಪರಿಶೀಲಿಸುತ್ತೇವೆ ಎಂದು ಅಂದು ಅಧಿಕಾರಿಗಳು ತಿಳಿಸಿದ್ದರು.

ಮೈಮರೆತ ಅಧಿಕಾರಿಗಳು:  ಆದರೆ, ನಂತರದ ದಿನಗಳಲ್ಲಿ ಇಡೀ ಪ್ರಕರಣವನ್ನು ಅಧಿಕಾರಿಗಳು ಮರೆತುಬಿಟ್ಟರು. ವಿಜಿಲೆನ್ಸ್ ತಂಡ ಎಚ್ಚೆತ್ತುಕೊಳ್ಳದ ಕಾರಣ ಇಂತಹುದೇಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ನಂದಿನಿ ತುಪ್ಪಕ್ಕೆ ದೇಶ, ವಿದೇಶಗಳಲ್ಲಿಭಾರೀ ಬೇಡಿಕೆ ಇರುವ ಇಂತಹ ಸಂದರ್ಭದಲ್ಲಿ ಅಸಲಿ, ನಕಲಿ ತುಪ್ಪದ ಮೇಲಾಟದಲ್ಲಿ ಗ್ರಾಹಕರಿಗೆ ಎಲ್ಲಿ ನಕಲಿ ತುಪ್ಪವನ್ನು ಬಳಸುತ್ತಿದ್ದೇವೆಯೋ ಎಂದು ಗೊಂದಲ ಮೂಡುವಂತಾಗಿದೆ. ರೈತರು, ಗ್ರಾಹಕರು ಮೈಮುಲ್‌ಗೆ ಎರಡು ಕಣ್ಣುಗಳಿದ್ದಂತೆ. ಇಬ್ಬರ ವಿಶ್ವಾಸವನ್ನು ಹಾಲು ಒಕ್ಕೂಟಗಳು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ಇದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು.

ನಕಲಿ ತುಪ್ಪ ಪರೀಕ್ಷೆ ಹೇಗೆ?: 

೧. ನಿಮ್ಮ ಅಂಗೈಯಲ್ಲಿ ಒಂದು ಚಮಚ ತುಪ್ಪವನ್ನು ತೆಗೆದುಕೊಂಡು ನಿಧಾನವಾಗಿ ಉಜ್ಜಿಕೊಳ್ಳಿ. ಅದು ದೇಹದ ಉಷ್ಣತೆಗೆ ಪ್ರತಿಕ್ರಿಯಿಸಿ ಕರಗಿದರೆ ಶುದ್ಧ ತುಪ್ಪ. ಅದು ಕರಗದೆ ಘನ ಪದಾರ್ಥವಾಗಿದ್ದರೆ ಕಲಬೆರಕೆಯಾಗಿರುವ ಸಾಧ್ಯತೆ ಹೆಚ್ಚು

೨. ಒಂದು ಪಾರದರ್ಶಕ ಗಾಜಿನ ಬಾಟಲಿಯಲ್ಲಿ, ಸ್ವಲ್ಪ ತುಪ್ಪ ಮತ್ತು ಸ್ವಲ್ಪ ಸಕ್ಕರೆ ಸೇರಿಸಿ ಚೆನ್ನಾಗಿ ಅಲ್ಲಾಡಿಸಿ. ಕೆಲವು ನಿಮಿಷಗಳ ನಂತರ ಬಾಟಲಿಯ ಕೆಳಭಾಗದಲ್ಲಿ ಕೆಂಪು ಗೆರೆಗಳು ಕಾಣಿಸಿಕೊಂಡರೆ, ಅದು ಕಲಬೆರಕೆ ತುಪ್ಪ ಎಂದರ್ಥ.

೩. ಸ್ವಲ್ಪ ತುಪ್ಪಕ್ಕೆ ನಾಲ್ಕು ಹನಿ ಅಯೋಡಿನ್ ಸೇರಿಸಿ. ತುಪ್ಪ ನೀಲಿ ಬಣ್ಣಕ್ಕೆ ತಿರುಗಿದರೆ ಅದನ್ನು ಪಿಷ್ಟದೊಂದಿಗೆ ಬೆರೆಸಿದ ನಕಲಿ ತುಪ್ಪ ಎಂದು ಗುರುತಿಸಬೇಕು.

೪. ನಿಮ್ಮ ಕೈಗೆ ಸ್ವಲ್ಪ ತುಪ್ಪ ಹಚ್ಚಿ ಉಜ್ಜಿಕೊಳ್ಳಿ. ಅದು ಮೃದು ಮತ್ತು ನೈಸರ್ಗಿಕ ಪರಿಮಳವನ್ನು ಹೊಂದಿದ್ದರೆ ಅದು ಶುದ್ಧ ತುಪ್ಪ. ಪರಿಮಳ ಬೇಗನೆ ಮಾಯವಾದರೆ ಅದು ಕಲಬೆರಕೆ ಪದಾರ್ಥಗಳ ಮಿಶ್ರಣವಾಗಿರಬಹುದು.

೫. ತುಪ್ಪವನ್ನು ಸ್ವಲ್ಪ ಬಿಸಿ ಮಾಡಿ ಫ್ರಿಡ್ಜ್ನಲ್ಲಿಡಿ. ಒಂದೇ ಪದರವಾದರೇ ಅದು ಶುದ್ಧ ತುಪ್ಪ. ಎರಡು ಪ್ರತ್ಯೇಕ ಪದರಗಳಲ್ಲಿದ್ದರೆ ಅದು ಕಲಬೆರಕೆ ಎಣ್ಣೆಗಳಿಂದ ಕೂಡಿದ ತುಪ್ಪ.

೬. ತುಪ್ಪವನ್ನು ಬಿಸಿ ಮಾಡಿದಾಗ, ಅದು ಎಣ್ಣೆಯಂತೆ ಹರಿಯುವಂತೆ ಕಾಣಬೇಕು. ಕರಗಿದ ತುಪ್ಪವು ತಿಳಿ ಹಳದಿ ಅಥವಾ ಬಿಳಿ ಬಣ್ಣದಲ್ಲಿದ್ದರೆ, ಅದು ಕೂಡ ಕಲಬೆರಕೆಯ ಸಂಕೇತವಾಗಿದೆ.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago