Andolana originals

ಕುಟುಂಬದವರಿಂದ ಕುಟುಂಬದ ಗಣತಿ!

ಎಸ್.ಎಸ್.ಭಟ್

ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್ 

ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು ಸಮೀಕ್ಷೆ ಮಾಡಲು ತಮ್ಮ ಕುಟುಂಬದವರ ನೆರವು ಪಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಹಲವು ಮಹಿಳಾ ಗಣತಿದಾರರು ತಮ್ಮ ಇಡೀ ಕುಟುಂಬವನ್ನೇ ಗಣತಿ ಕಾರ್ಯಕ್ಕೆ ಬಳಸಲಾರಂಭಿಸಿದ್ದಾರೆ. ಹೀಗಾಗಿ ಈಗ ಗಣತಿ ಶಿಕ್ಷಕರೊಂದಿಗೆ ಅವರ ಪದವೀಧರ ಮಕ್ಕಳು, ಮೊಮ್ಮಕ್ಕಳು, ಹಳೆಯ ಶಿಷ್ಯರು ಕೂಡ ಗಣತಿ ಮಾಡುವಂತಾಗಿದೆ.

ಗಣತಿ ಮಾಡಲು ಮನೆಗೆ ಹೋಗಿ ಅವರಿಂದ ೬೦ ಪ್ರಶ್ನೆಗಳಿಗೆ ಉತ್ತರ ಪಡೆದು ಅದನ್ನು ಅಪ್‌ಲೋಡ್ ಮಾಡುವ ವೇಳೆಗೆ ಕೈಕೊಡುವ ಸರ್ವರ್‌ನಿಂದಾಗಿ ದಿನಕ್ಕೆ ೧೦ ಮನೆ ಗಣತಿ ಮಾಡುವುದಿರಲಿ, ದಿನಕ್ಕೆ ಒಂದು ಮನೆಯನ್ನು ಪೂರ್ಣಗೊಳಿಸುವುದೂ ಕಷ್ಟವಾಗ ತೊಡಗಿದೆ. ನಿಗದಿತ ಅವಧಿಯಲ್ಲಿ ಗಣತಿ ಮುಗಿಸುವುದು ಹೇಗೆ ಎಂಬ ಭಯ ಶಿಕ್ಷಕರನ್ನು ಕಾಡತೊಡಗಿದೆ.

ಅಮಾನತ್ತಿನ ಆತಂಕದಿಂದಲೆ ಗಣತಿ ಆರಂಭಿಸಿರುವ ತಾಲ್ಲೂಕಿನ ಶಿಕ್ಷರೊಬ್ಬರಿಗೆ ಅವರ ಪದವೀಧರ ಮಕ್ಕಳು ಸಾಥ್ ನೀಡುತ್ತಿದ್ದು, ಬೆಳಿಗ್ಗೆ ೭ ಗಂಟೆಗೆ ಮನೆಯಿಂದ ಹೊರಡುವ ಈ ಕುಟುಂಬ ಗಣತಿ ಮುಗಿಸಿ ಮನೆಗೆ ತೆರಳುವಷ್ಟರಲ್ಲಿ ಸಂಜೆಯಾಗಿರುತ್ತದೆ. ಮತ್ತೊಬ್ಬ ಶಿಕ್ಷಕಿ ತನ್ನ ಹಳೆಯ ಶಿಷ್ಯರ ನೆರವು ಪಡೆದರೆ ಮತ್ತೊಂದು ಕಡೆ ಪತಿ ಪತ್ನಿಯ ಪರದಾಟ ನೋಡಲಾಗದೆ ಗಣತಿಗೆ ಇಳಿದಿದ್ದಾರೆ.

ಈ ಮಧ್ಯ ೩ ಜನರಿರುವ ಒಂದು ಮನೆಗೆ ಗಣತಿಗೆ ಹೋದರೆ, ಅಲ್ಲಿ ೩ ಆಹಾರ ಪಡಿತರ ಚೀಟಿಗಳು ಎದುರಾಗಿದ್ದು, ಮೂವರೂ ಬೇರೆ ಬೇರೆ ಕುಟುಂಬ ಎನ್ನುವುದನ್ನು ಕೇಳಿ ಗಣತಿದಾರರು ಮೂರ್ಛೆ ಬೀಳುವುದೊಂದೇ ಬಾಕಿಯಾಗಿದೆ. ವಿದ್ಯುತ್ ಮೀಟರ್ ಎಷ್ಟಿದೆ ಎಂದರೆ ಇರುವುದೊಂದೆ. ಮೀಟರ್‌ಗೆ ಬಣ್ಣ ಬಳಿಯಲಾಗಿದ್ದು, ವಿದ್ಯುತ್ ಬಿಲ್ ಕಾಣೆಯಾಗಿದೆ ಎಂಬ ಸಿದ್ಧ ಉತ್ತರ ಎದುರಾದಾಗ ಕಕ್ಕಾ ಬಿಕ್ಕಿಯಾಗುವ ಸಂಗತಿ ಶಿಕ್ಷಕರದ್ದಾಗಿದೆ. ಇಂತಹ ಸಂಗತಿಗಳೇ ಅನೇಕ ಮನೆಗಳಲ್ಲಿ ಕಂಡುಬರುತ್ತಿದೆ ಎನ್ನುತ್ತಾರೆ ಶಿಕ್ಷಕರು.

ಪ್ರಾಥಮಿಕ ಶಿಕ್ಷಕರಿಗೆ ಗಣತಿ ಮಾಡುವುದು ಕಡ್ಡಾಯ ಎಂದು ಸರ್ಕಾರ ಫಾರ್ಮಾನು ಹೊರಡಿಸಿದ್ದರೂ ತಾಲ್ಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಾಳ್ಯಾರೂ ಗಣತಿ ಕಾರ್ಯದಲ್ಲಿ ಭಾಗಿಯಾಗದೇ ಇರುವ ಅಚ್ಚರಿಯ ಸಂಗತಿಯೂ ಬೆಳಕಿಗೆ ಬಂದಿದೆ.

ಹೀಗಿರುವಾಗ ಅ.೧೨ರೊಳಗೆ ನಿಗದಿತ ಅವಧಿಯಲ್ಲಿ ಸಮೀಕ್ಷೆಯನ್ನು ಮುಗಿಸುವ ಬಗೆ ಹೇಗೆ ಎಂಬುದು ಪ್ರತಿಯೊಬ್ಬ ಗಣತಿದಾರ ಶಿಕ್ಷಕರ ಅಳಲಾಗಿದೆ. ಜತೆಗೆ ಎರಡನೇ ಹಂತದಲ್ಲಿ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರಿಗೆ ಯಾವುದೇ ತರಬೇತಿಯೂ ಇಲ್ಲವಾಗಿದೆ.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

14 mins ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

4 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

5 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

5 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

5 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

6 hours ago