Andolana originals

ಕುಟುಂಬದವರಿಂದ ಕುಟುಂಬದ ಗಣತಿ!

ಎಸ್.ಎಸ್.ಭಟ್

ಗಣತಿಗೆ ತೆರಳುವ ಶಿಕ್ಷಕರಿಗೆ ಕುಟುಂಬದವರ ಸಾಥ್ 

ನಂಜನಗೂಡು: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೆತ್ತಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವ ಒತ್ತಡಕ್ಕೆಸಿಲುಕಿರುವ ಶಿಕ್ಷಕರು ಸಮೀಕ್ಷೆ ಮಾಡಲು ತಮ್ಮ ಕುಟುಂಬದವರ ನೆರವು ಪಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಹಲವು ಮಹಿಳಾ ಗಣತಿದಾರರು ತಮ್ಮ ಇಡೀ ಕುಟುಂಬವನ್ನೇ ಗಣತಿ ಕಾರ್ಯಕ್ಕೆ ಬಳಸಲಾರಂಭಿಸಿದ್ದಾರೆ. ಹೀಗಾಗಿ ಈಗ ಗಣತಿ ಶಿಕ್ಷಕರೊಂದಿಗೆ ಅವರ ಪದವೀಧರ ಮಕ್ಕಳು, ಮೊಮ್ಮಕ್ಕಳು, ಹಳೆಯ ಶಿಷ್ಯರು ಕೂಡ ಗಣತಿ ಮಾಡುವಂತಾಗಿದೆ.

ಗಣತಿ ಮಾಡಲು ಮನೆಗೆ ಹೋಗಿ ಅವರಿಂದ ೬೦ ಪ್ರಶ್ನೆಗಳಿಗೆ ಉತ್ತರ ಪಡೆದು ಅದನ್ನು ಅಪ್‌ಲೋಡ್ ಮಾಡುವ ವೇಳೆಗೆ ಕೈಕೊಡುವ ಸರ್ವರ್‌ನಿಂದಾಗಿ ದಿನಕ್ಕೆ ೧೦ ಮನೆ ಗಣತಿ ಮಾಡುವುದಿರಲಿ, ದಿನಕ್ಕೆ ಒಂದು ಮನೆಯನ್ನು ಪೂರ್ಣಗೊಳಿಸುವುದೂ ಕಷ್ಟವಾಗ ತೊಡಗಿದೆ. ನಿಗದಿತ ಅವಧಿಯಲ್ಲಿ ಗಣತಿ ಮುಗಿಸುವುದು ಹೇಗೆ ಎಂಬ ಭಯ ಶಿಕ್ಷಕರನ್ನು ಕಾಡತೊಡಗಿದೆ.

ಅಮಾನತ್ತಿನ ಆತಂಕದಿಂದಲೆ ಗಣತಿ ಆರಂಭಿಸಿರುವ ತಾಲ್ಲೂಕಿನ ಶಿಕ್ಷರೊಬ್ಬರಿಗೆ ಅವರ ಪದವೀಧರ ಮಕ್ಕಳು ಸಾಥ್ ನೀಡುತ್ತಿದ್ದು, ಬೆಳಿಗ್ಗೆ ೭ ಗಂಟೆಗೆ ಮನೆಯಿಂದ ಹೊರಡುವ ಈ ಕುಟುಂಬ ಗಣತಿ ಮುಗಿಸಿ ಮನೆಗೆ ತೆರಳುವಷ್ಟರಲ್ಲಿ ಸಂಜೆಯಾಗಿರುತ್ತದೆ. ಮತ್ತೊಬ್ಬ ಶಿಕ್ಷಕಿ ತನ್ನ ಹಳೆಯ ಶಿಷ್ಯರ ನೆರವು ಪಡೆದರೆ ಮತ್ತೊಂದು ಕಡೆ ಪತಿ ಪತ್ನಿಯ ಪರದಾಟ ನೋಡಲಾಗದೆ ಗಣತಿಗೆ ಇಳಿದಿದ್ದಾರೆ.

ಈ ಮಧ್ಯ ೩ ಜನರಿರುವ ಒಂದು ಮನೆಗೆ ಗಣತಿಗೆ ಹೋದರೆ, ಅಲ್ಲಿ ೩ ಆಹಾರ ಪಡಿತರ ಚೀಟಿಗಳು ಎದುರಾಗಿದ್ದು, ಮೂವರೂ ಬೇರೆ ಬೇರೆ ಕುಟುಂಬ ಎನ್ನುವುದನ್ನು ಕೇಳಿ ಗಣತಿದಾರರು ಮೂರ್ಛೆ ಬೀಳುವುದೊಂದೇ ಬಾಕಿಯಾಗಿದೆ. ವಿದ್ಯುತ್ ಮೀಟರ್ ಎಷ್ಟಿದೆ ಎಂದರೆ ಇರುವುದೊಂದೆ. ಮೀಟರ್‌ಗೆ ಬಣ್ಣ ಬಳಿಯಲಾಗಿದ್ದು, ವಿದ್ಯುತ್ ಬಿಲ್ ಕಾಣೆಯಾಗಿದೆ ಎಂಬ ಸಿದ್ಧ ಉತ್ತರ ಎದುರಾದಾಗ ಕಕ್ಕಾ ಬಿಕ್ಕಿಯಾಗುವ ಸಂಗತಿ ಶಿಕ್ಷಕರದ್ದಾಗಿದೆ. ಇಂತಹ ಸಂಗತಿಗಳೇ ಅನೇಕ ಮನೆಗಳಲ್ಲಿ ಕಂಡುಬರುತ್ತಿದೆ ಎನ್ನುತ್ತಾರೆ ಶಿಕ್ಷಕರು.

ಪ್ರಾಥಮಿಕ ಶಿಕ್ಷಕರಿಗೆ ಗಣತಿ ಮಾಡುವುದು ಕಡ್ಡಾಯ ಎಂದು ಸರ್ಕಾರ ಫಾರ್ಮಾನು ಹೊರಡಿಸಿದ್ದರೂ ತಾಲ್ಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಾಳ್ಯಾರೂ ಗಣತಿ ಕಾರ್ಯದಲ್ಲಿ ಭಾಗಿಯಾಗದೇ ಇರುವ ಅಚ್ಚರಿಯ ಸಂಗತಿಯೂ ಬೆಳಕಿಗೆ ಬಂದಿದೆ.

ಹೀಗಿರುವಾಗ ಅ.೧೨ರೊಳಗೆ ನಿಗದಿತ ಅವಧಿಯಲ್ಲಿ ಸಮೀಕ್ಷೆಯನ್ನು ಮುಗಿಸುವ ಬಗೆ ಹೇಗೆ ಎಂಬುದು ಪ್ರತಿಯೊಬ್ಬ ಗಣತಿದಾರ ಶಿಕ್ಷಕರ ಅಳಲಾಗಿದೆ. ಜತೆಗೆ ಎರಡನೇ ಹಂತದಲ್ಲಿ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರಿಗೆ ಯಾವುದೇ ತರಬೇತಿಯೂ ಇಲ್ಲವಾಗಿದೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

6 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

8 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

10 hours ago