Andolana originals

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ

ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ ರೂ. ಲಾಭ ಗಳಿಸಿದ ಯುವ ರೈತ ಹೊನ್ನಾಪುರ ಶಶಿ ಗಮನ ಸೆಳೆದಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಪ್ರಗತಿಪರ ಯುವ ರೈತ ಶಶಿರವರು ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಗಿಡಗಳನ್ನು ನಾಟಿ ಮಾಡಿ ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಪಡೆದು ಒಂದೂವರೆ ಲಕ್ಷ ರೂ. ಲಾಭ ಗಳಿಸಿದ್ದಾರೆ.

ರೈತ ಹೊನ್ನಾಪುರ ಶಶಿ ಮಾತನಾಡಿ, ಹರೀಶ್‌ರವರ ಮಾರ್ಗದರ್ಶನದಲ್ಲಿ ಈ ವರ್ಷ ಮೊದಲನೇ ಬಾರಿಗೆ ೩೦ ಕುಂಟೆ ಜಾಗದಲ್ಲಿ ಮಲ್ಚಿಂಗ್ ಶೀಟ್ ಅಳವಡಿಸಿಕೊಂಡು ಹನಿ ನೀರಾವರಿ ಪದ್ಧತಿಯಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ೩ ಸಾವಿರ ಕಲ್ಲಂಗಡಿ ಗಿಡಗಳನ್ನು ನಾಟಿ ಮಾಡಿ ಕಲ್ಲಂಗಡಿ ಹಣ್ಣನ್ನು ಬೆಳೆದಿದ್ದೇನೆ. ಈ ಬೆಳೆಗೆ ರೋಗ ಕಡಿಮೆ ಇದೆ. ಉತ್ತಮ ಇಳುವರಿ ಬಂದಿದೆ. ಅಂಡಾಕಾರದ ಹಣ್ಣುಗಳಿದ್ದು ಕೆಂಪಾಗಿ, ತಿನ್ನಲು ಸಿಹಿಯಾಗಿದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದು ಮುಂಬೈ, ದಿಲ್ಲಿ, ಚೆನ್ನೈ, ಕೋಲ್ಕತಾ ನಗರಗಳಿಗೆ ಸಾಗಣೆ ಮಾಡಲಾಗುತ್ತದೆ ಎಂದರು.

ಮಂಟಿ ಬಿಳಗುಲಿಯ ಅಭಿಷೇಕ್ ಮಾತನಾಡಿದರು. ಪ್ರಗತಿಪರ ಯುವ ರೈತರಾದ ಶಶಿ ಸಹೋದರರನ್ನು ಕಲ್ಲಂಗಡಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ನೀಡಿ ಸನ್ಮಾನಿಸಲಾಯಿತು. ಸಮೃದ್ಧವಾಗಿ ಬಂದಿರುವ ಕಲ್ಲಂಗಡಿ ಹಣ್ಣಿನ ಬೆಳೆ ವೀಕ್ಷಣೆ ಮಾಡಲು ಹೊನ್ನಾಪುರ ಸುತ್ತಮುತ್ತಲಿನ ನೂರಾರು ರೈತರು ಆಗಮಿಸಿದ್ದರು. ರೈತರಾದ ಹೊನ್ನಪುರ ಶಿವಣ್ಣ, ಶಶಿ, ಆಂಜನೇಯ, ಪ್ರಕಾಶ್, ಪುಟ್ಟಸ್ವಾಮಿ, ಗಂಗನಕುಪ್ಪೆ ಯೋಗಣ್ಣ, ಅರುಣ್, ಅಡಗೂರು ರಾಜೇಶ್, ಹರೀಶ್, ಕಣಗಾಲ್ ಮಧು, ತಮ್ಮೇಗೌಡ, ಗಣೇಶ್, ಹೆಚ್.ಹೆಚ್.ಆಂಜನೇಯ, ವೆಂಕಟೇಶ್, ರವಿಕುಮಾರ್, ಉತ್ಪಲ ಕಂಪೆನಿಯ ಆರ್. ಎಸ್.ಎಂ.ಸತೀಶ್ ವಾಡೆ, ಟಿ.ಎಸ್.ಎಂ. ಹರೀಶ್, ಅಜಯ್, ನರ್ಸರಿ ಮಾಲೀಕರಾದ ಅಭಿ, ಸುನಿಲ್, ಪುನೀತ್, ನಾಗರಾಜ್, ವಿತರಕರಾದ ಕುಬೇರ್, ವೆಂಕಟೇಶ್, ಸೋಮಣ್ಣ, ಲೋಹಿತ್, ಸ್ವಾಮಿ, ನೂರಾರು ರೈತರು ಹಾಜರಿದ್ದರು.

” ಒಂದು ಹಣ್ಣು ಐದರಿಂದ ಆರು ಕೆಜಿ ತೂಕವಿದೆ. ೬೦ ಸಾವಿರ ರೂ. ಖರ್ಚು ಮಾಡಿದ್ದೇವೆ ೨೦ ಟನ್ ಹಣ್ಣನ್ನು ನಿರೀಕ್ಷೆ ಮಾಡಿದ್ದೇವೆ. ಪ್ರಸ್ತುತಮಾರುಕಟ್ಟೆ ದರ ಪ್ರತಿ ಕೆಜಿಗೆ ೧೦ ರೂ. ಇದ್ದು, ೨ ಲಕ್ಷ ರೂ. ಸಿಗಲಿದೆ. ಖರ್ಚು ಕಳೆದು ೧.೪೦ ಲಕ್ಷ ರೂ. ಲಾಭ ಬರುವ ನಿರೀಕ್ಷೆಯಲ್ಲಿದ್ದೇನೆ.”

-ಹೊನ್ನಾಪುರ ಶಶಿ, ರೈತ 

 

 

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

16 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

18 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

20 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

20 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

21 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

21 hours ago