Andolana originals

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್

ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP

ಕೆ.ಆರ್.ನಗರ : ಮನೆಯ ಮಗಳು ಚೊಚ್ಚಲ ಗರ್ಭಿಣಿಯಾದರೆ ಮನೆಯ ಮಂದಿಯಲ್ಲಿ ಎಲ್ಲಿಲ್ಲದ ಸಂಭ್ರಮ, ಸಡಗರ ಕಂಡುಬರುತ್ತದೆ. ಅದೇ ರೀತಿಯಲ್ಲಿ ಇಲ್ಲಿ ರೈತ ಮಹಿಳೆಯೊಬ್ಬರು ತಮ್ಮ ಚೊಚ್ಚಲ, ತುಂಬಿದ ಗರ್ಭಿಣಿಯ ಹಸುವಿನ ಸೀಮಂತವನ್ನು ಶಾಸ್ತ್ರೋಕ್ತವಾಗಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಪಟ್ಟಣದ ಹೊರವಲಯದ ಕೆಂಪನಕೊಪ್ಪಲು ಗ್ರಾಮದ ರೈತ ಮಹಿಳೆ ರೇಣುಕಾ ಕೃಷ್ಣೇಗೌಡ ಅವರು ತಮ್ಮ ಮನೆಯಲ್ಲಿಯೇ ಹುಟ್ಟಿದ ಕರುವನ್ನು ಬಹಳ ಪ್ರೀತಿ ಪಟ್ಟು ಸಾಕಿದ್ದರು. ಅದು ದೊಡ್ಡದಾಗಿ ಬೆಳೆದು ಚೊಚ್ಚಲ ಗರ್ಭ ಧರಿಸಿದ್ದು ಗ್ರಾಮದ ಮುತ್ತೈದೆಯರನ್ನು ಕರೆಸಿ ಪ್ರೀತಿಯ ಹಸುವಿನ ಸೀಮಂತ ಶಾಸ್ತ್ರ ಮಾಡಿ ಸಂಭ್ರಮ ಆಚರಣೆ ಮಾಡಿರುವುದು ಈಗ ಮನೆ ಮಾತಾಗಿದೆ.

ರೈತ ಮಹಿಳೆ ರೇಣುಕಾ ಕೃಷ್ಣೇಗೌಡ ಅವರು ತಮ್ಮ ಪ್ರೀತಿ ಪಾತ್ರವಾದ ಹಸುವಿಗೆ ಒಂಬತ್ತು ತಿಂಗಳು ತುಂಬಿದ್ದು ಸೀಮಂತ ಮಾಡಲು ಅಕ್ಕಪಕ್ಕದ ಮನೆಯವರಿಗೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿ ಸೀಮಂತ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಮನೆಯ ಮುಂದೆ ಶಾಮಿಯಾನ ಹಾಕಿಸಿ ಎಲ್ಲರೂ ಮನೆಯ ಮಗಳು ಗರ್ಭಿಣಿಯಾದಾಗ ನಡೆಸುವ ಸೀಮಂತ ಕಾರ್ಯದಂತೆಯೇ ಹಸುವಿಗೆ ರೇಷ್ಮೆ ಸೀರೆ, ಹಸಿರುಬಳೆ ತೊಡಿಸಿ, ಕೊರಳಿಗೆ ಹೂ ಮಾಲೆ ಹಾಕಿ, ಕಾಲಿಗೆ ಗೆಜ್ಜೆ ಕಟ್ಟಿ ಶೃಂಗಾರ ಮಾಡಿದ ಬಳಿಕ ಐದು ಬಗೆಯ ಸಿಹಿ ತಿಂಡಿಗಳು, ಐದು ಬಗೆಯ ಹಣ್ಣುಗಳನ್ನು ನೀಡಿ, ಆರತಿ ಬೆಳಗಲಾಯಿತು.

ಊರಿನ ಮುತ್ತೈದೆಯರಾದ ಪವಿತ್ರ, ಮಂಜುಳ, ಮಮತ, ಶಾಲಿನಿ, ರಶ್ಮಿ ಮಹೇಶ್ ಅವರುಗಳನ್ನು ಕರೆಸಿ ಶಾಸ್ತ್ರೋಕ್ತ ವಾಗಿ ಸೀಮಂತ ಮಾಡಿದರು. ಹಸುವಿಗೆ ತಮ್ಮ ಮನೆಯ ಮಗಳಂತೆ ಸೀಮಂತ ಕಾರ್ಯ ಮಾಡಿ ಗ್ರಾಮಸ್ಥರಿಗೆ ಸಿಹಿ ಊಟ ಹಾಕಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಅನೇಕ ಮಹಿಳೆಯರು, ಗ್ರಾಮದ ಮಂದಿ ಭಾಗವಹಿಸಿ ಗರ್ಭಿಣಿ ಹಸುವಿಗೆ ಹಾರೈಸಿದ್ದಾರೆ.

” ಹಸುವಿಗೆ ಕಾಮಧೇನು ಅನ್ನುವ ಮಾತು ಇದೆ. ಇತ್ತೀಚಿನ ದಿನಗಳಲ್ಲಿ ಹಾಲು ಹಿಂಡಿ ಹಣ ಮಾಡಿಕೊಳ್ಳುವ ಜನರೇ ಹೆಚ್ಚು. ಆದರೆ ಈ ರೈತ ಮಹಿಳೆ ರೇಣುಕಾ ಅವರು ತಮ್ಮ ಹಸುವಿನ ಸೀಮಂತ ಮಾಡಿ, ಈ ಸಮಾಜಕ್ಕೆ ಮೂಕ ಪ್ರಾಣಿಗಳಿಗೂ ಭಾವನೆಗಳು ಇವೆ ಎಂದು ತೋರಿಸಿಕೊಟ್ಟಿದ್ದಾರೆ.”

-ಮಮತ ಜಗದೀಶ್, ಗ್ರಾ.ಪಂ. ಮಾಜಿ ಸದಸ್ಯೆ, ಕೆಂಪನಕೊಪ್ಪಲು ಗ್ರಾಮ

ಆಂದೋಲನ ಡೆಸ್ಕ್

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

17 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

1 hour ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago