Andolana originals

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್

ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP

ಕೆ.ಆರ್.ನಗರ : ಮನೆಯ ಮಗಳು ಚೊಚ್ಚಲ ಗರ್ಭಿಣಿಯಾದರೆ ಮನೆಯ ಮಂದಿಯಲ್ಲಿ ಎಲ್ಲಿಲ್ಲದ ಸಂಭ್ರಮ, ಸಡಗರ ಕಂಡುಬರುತ್ತದೆ. ಅದೇ ರೀತಿಯಲ್ಲಿ ಇಲ್ಲಿ ರೈತ ಮಹಿಳೆಯೊಬ್ಬರು ತಮ್ಮ ಚೊಚ್ಚಲ, ತುಂಬಿದ ಗರ್ಭಿಣಿಯ ಹಸುವಿನ ಸೀಮಂತವನ್ನು ಶಾಸ್ತ್ರೋಕ್ತವಾಗಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಪಟ್ಟಣದ ಹೊರವಲಯದ ಕೆಂಪನಕೊಪ್ಪಲು ಗ್ರಾಮದ ರೈತ ಮಹಿಳೆ ರೇಣುಕಾ ಕೃಷ್ಣೇಗೌಡ ಅವರು ತಮ್ಮ ಮನೆಯಲ್ಲಿಯೇ ಹುಟ್ಟಿದ ಕರುವನ್ನು ಬಹಳ ಪ್ರೀತಿ ಪಟ್ಟು ಸಾಕಿದ್ದರು. ಅದು ದೊಡ್ಡದಾಗಿ ಬೆಳೆದು ಚೊಚ್ಚಲ ಗರ್ಭ ಧರಿಸಿದ್ದು ಗ್ರಾಮದ ಮುತ್ತೈದೆಯರನ್ನು ಕರೆಸಿ ಪ್ರೀತಿಯ ಹಸುವಿನ ಸೀಮಂತ ಶಾಸ್ತ್ರ ಮಾಡಿ ಸಂಭ್ರಮ ಆಚರಣೆ ಮಾಡಿರುವುದು ಈಗ ಮನೆ ಮಾತಾಗಿದೆ.

ರೈತ ಮಹಿಳೆ ರೇಣುಕಾ ಕೃಷ್ಣೇಗೌಡ ಅವರು ತಮ್ಮ ಪ್ರೀತಿ ಪಾತ್ರವಾದ ಹಸುವಿಗೆ ಒಂಬತ್ತು ತಿಂಗಳು ತುಂಬಿದ್ದು ಸೀಮಂತ ಮಾಡಲು ಅಕ್ಕಪಕ್ಕದ ಮನೆಯವರಿಗೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿ ಸೀಮಂತ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಮನೆಯ ಮುಂದೆ ಶಾಮಿಯಾನ ಹಾಕಿಸಿ ಎಲ್ಲರೂ ಮನೆಯ ಮಗಳು ಗರ್ಭಿಣಿಯಾದಾಗ ನಡೆಸುವ ಸೀಮಂತ ಕಾರ್ಯದಂತೆಯೇ ಹಸುವಿಗೆ ರೇಷ್ಮೆ ಸೀರೆ, ಹಸಿರುಬಳೆ ತೊಡಿಸಿ, ಕೊರಳಿಗೆ ಹೂ ಮಾಲೆ ಹಾಕಿ, ಕಾಲಿಗೆ ಗೆಜ್ಜೆ ಕಟ್ಟಿ ಶೃಂಗಾರ ಮಾಡಿದ ಬಳಿಕ ಐದು ಬಗೆಯ ಸಿಹಿ ತಿಂಡಿಗಳು, ಐದು ಬಗೆಯ ಹಣ್ಣುಗಳನ್ನು ನೀಡಿ, ಆರತಿ ಬೆಳಗಲಾಯಿತು.

ಊರಿನ ಮುತ್ತೈದೆಯರಾದ ಪವಿತ್ರ, ಮಂಜುಳ, ಮಮತ, ಶಾಲಿನಿ, ರಶ್ಮಿ ಮಹೇಶ್ ಅವರುಗಳನ್ನು ಕರೆಸಿ ಶಾಸ್ತ್ರೋಕ್ತ ವಾಗಿ ಸೀಮಂತ ಮಾಡಿದರು. ಹಸುವಿಗೆ ತಮ್ಮ ಮನೆಯ ಮಗಳಂತೆ ಸೀಮಂತ ಕಾರ್ಯ ಮಾಡಿ ಗ್ರಾಮಸ್ಥರಿಗೆ ಸಿಹಿ ಊಟ ಹಾಕಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಅನೇಕ ಮಹಿಳೆಯರು, ಗ್ರಾಮದ ಮಂದಿ ಭಾಗವಹಿಸಿ ಗರ್ಭಿಣಿ ಹಸುವಿಗೆ ಹಾರೈಸಿದ್ದಾರೆ.

” ಹಸುವಿಗೆ ಕಾಮಧೇನು ಅನ್ನುವ ಮಾತು ಇದೆ. ಇತ್ತೀಚಿನ ದಿನಗಳಲ್ಲಿ ಹಾಲು ಹಿಂಡಿ ಹಣ ಮಾಡಿಕೊಳ್ಳುವ ಜನರೇ ಹೆಚ್ಚು. ಆದರೆ ಈ ರೈತ ಮಹಿಳೆ ರೇಣುಕಾ ಅವರು ತಮ್ಮ ಹಸುವಿನ ಸೀಮಂತ ಮಾಡಿ, ಈ ಸಮಾಜಕ್ಕೆ ಮೂಕ ಪ್ರಾಣಿಗಳಿಗೂ ಭಾವನೆಗಳು ಇವೆ ಎಂದು ತೋರಿಸಿಕೊಟ್ಟಿದ್ದಾರೆ.”

-ಮಮತ ಜಗದೀಶ್, ಗ್ರಾ.ಪಂ. ಮಾಜಿ ಸದಸ್ಯೆ, ಕೆಂಪನಕೊಪ್ಪಲು ಗ್ರಾಮ

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

6 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

6 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago