Andolana originals

ಉತ್ಪಾದನಾ ವೆಚ್ಚ ಹೆಚ್ಚಾದರೂ ಶುಂಠಿ ಕೃಷಿಗೆ ರೈತರ ಉತ್ಸಾಹ

ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯ ಚುರುಕು ; ಲಾಣದ ನಿರೀಕ್ಷೆಯಲ್ಲಿ ರೈತರು

ದಾ.ರಾ ಮಹೇಶ್‌

ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗದಿದ್ದರೂ ಶುಂಠಿ ಬಿತ್ತನೆ ಕಾರ್ಯವು ಹನಗೋಡು ಭಾಗದಲ್ಲಿ ಭರದಿಂದ ಸಾಗಿದ್ದು, ರೈತರು ಉತ್ಸಾಹದಿಂದ ಶುಂಠಿ ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ.

ಕಳೆದ ವರ್ಷ ಹಸಿ ಶುಂಠಿಗೆ ಉತ್ತಮ ಬೆಲೆ ಸಿಗಲಿಲ್ಲ. ಒಂದೂವರೆ ಸಾವಿರ ರೂ. ಗಳಿಗೆ ಮಾರಾಟವಾಯಿತು. ಹಾಕಿದ ಬಂಡವಾಳವೂ ಸಿಗಲಿಲ್ಲ. ಲಕ್ಷಾಂತರ ರೂ. ಕಳೆದುಕೊಂಡರೂ ರೈತರ ಉತ್ಸಾಹ ಕಡಿಮೆ ಆಗಿಲ್ಲ. ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯಲ್ಲಿ ಈ ವರ್ಷ ಶುಂಠಿ ಕೃಷಿಯು ಚುರುಕುಗೊಂಡಿದೆ.

ಈ ಭಾಗದಲ್ಲಿ ಹೊಗೆಸೊಪ್ಪು ಪ್ರಮುಖ ವಾಣಿಜ್ಯ ಬೆಳೆ ಎನಿಸಿಕೊಂಡಿದ್ದರೂ ಶುಂಠಿ ಬೆಳೆ ಯುವ ಕೃಷಿ ಭೂಮಿಯೂ ವಿಸ್ತಾರಗೊಳ್ಳುತ್ತಿದೆ. ಉತ್ತಮ ಇಳುವರಿಯ ದೃಷ್ಟಿಯಿಂದ ಫೆಬ್ರುವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಶುಂಠಿ ಬಿತ್ತನೆ ಮಾಡುವುದು ಸಾಮಾನ್ಯ. ಈಗಾಗಲೇ ಶುಂಠಿ ನಾಟಿ ಕಾರ್ಯ ಕೊನೆಗೊಳ್ಳುತ್ತಿದೆ.

ಉತ್ತಮ ಲಾಭ ಗಳಿಸುವ ನಿರೀಕ್ಷೆಯಲ್ಲಿ ಉತ್ಸಾಹದಿಂದಲೇ ಚಟುವಟಿಕೆ ಆರಂಭಿಸಿರುವ ಬೆಳೆಗಾರರಿಗೆ ಪಿವಿಸಿ ಪೈಪ್‌ಗಳ ಬೆಲೆ, ಕೋಳಿ ಗೊಬ್ಬರ, ಬಿತ್ತನೆ ಬೀಜದ ಬೆಲೆ ಮತ್ತು ಕೂಲಿಯಲ್ಲಿನ ಹೆಚ್ಚಳವು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

೨೦೨೪ರ ಜನವರಿಯಲ್ಲಿ ಹಸಿಶುಂಠಿ ಬೆಲೆಯು ಪ್ರತಿ ೬೦ ಕೆ. ಜಿ. ಯ ಚೀಲಕ್ಕೆ ೨ ಸಾವಿರ ರೂ. ಗಳಿಂದ ೨,೨೦೦ ರೂ. ಗಳಿಗೆ ಮಾರಾಟವಾಗಿತ್ತು. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಈ ಬೆಲೆ ೧,೨೦೦ ಸಾವಿರ ರೂ. ಗೆ ಕುಸಿತವಾಗಿತ್ತು.

ಕೋಳಿ ಗೊಬ್ಬರ ದುಬಾರಿ: ಶುಂಠಿ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯುವಲ್ಲಿ ಕೋಳಿ ಗೊಬ್ಬರಕ್ಕೆ ರೈತರು ಮಹತ್ವ ನೀಡುತ್ತಿರುವುದರಿಂದ ಈ ಬಾರಿ ಕೋಳಿ ಗೊಬ್ಬರದ ಬೆಲೆಯೂ ದುಬಾರಿಯಾಗಿದೆ. ಟನ್‌ಗೆ ೨,೫೦೦ ರೂ. ನಿಂದ ೩,೦೦೦ ಸಾವಿರ ರೂ. ಗೆ ಸಿಗುತ್ತಿದ್ದ ಕೋಳಿ ಗೊಬ್ಬರ ಈ ವರ್ಷ ೩,೦೦೦ ರೂ. ಗಳಿಂದ ೩,೫೦೦ ರೂ. ಗೆ ಏರಿಕೆಯಾಗಿದೆ.

ತಮಿಳುನಾಡಿನಿಂದ ಪ್ರತಿದಿನ ಹನಗೋಡಿಗೆ ೧೦ ರಿಂದ ೧೫ ಲಾರಿಗಳು ಕೋಳಿಗೊಬ್ಬರ ಹೊತ್ತು ತರುತ್ತಿದ್ದರೂ ಬೇಡಿಕೆ ತಗ್ಗಿಲ್ಲ.

ಒಟ್ಟಾರೆ ಉತ್ಪಾದನಾ ವೆಚ್ಚ ಕಳೆದ ಬಾರಿಗಿಂತ ಹೆಚ್ಚಾಗಿದ್ದರೂ ರೈತರು ಶುಂಠಿ ಕೃಷಿಯಲ್ಲಿ ತೊಡಗಿಸಿಕೊಂಡು ಲಾಭದತ್ತ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯ ಚುರುಕು; ಲಾಭದ ನಿರೀಕ್ಷೆಯಲ್ಲಿ ರೈತರು ಒಂದು ಎಕರೆ ಪ್ರದೇಶದಲ್ಲಿ ಶುಂಠಿ ಬೆಳೆಯಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ೨ ಲಕ್ಷ ರೂ. ಗಳಿಗಿಂತ ಹೆಚ್ಚು ಖರ್ಚಾಗುತ್ತಿದೆ. ದರ ಉತ್ತಮವಾಗಿ ದೊರೆತಲ್ಲಿ ಲಾಭವಾಗುತ್ತದೆ. -ರಾಜೇಗೌಡ, ಶುಂಠಿ ಬೆಳೆಗಾರ

ಹುಣಸೂರು ತಾಲ್ಲೂಕಿನಲ್ಲಿ ಕಳೆದ ವರ್ಷ ೧,೩೦೦ ಹೆಕ್ಟೇರ್ ಪ್ರದೇಶದಲ್ಲಿ ಶುಂಠಿ ಬೆಳೆದಿದ್ದು ಈ ವರ್ಷ ೧,೫೦೦ ಹೆಕ್ಟೇರ್ ದಾಟುವ ಸಾಧ್ಯತೆಯಿದೆ. –ನಾಗರಾಜ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago