Andolana originals

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್ ಜೋನ್ ವ್ಯಾಪ್ತಿಗೆ ಸೇರಿದ ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನಿರಂತರವಾಗಿ ಹುಲಿ, ಚಿರತೆಗಳುಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸುತ್ತಿದ್ದು, ಇದರಿಂದಾಗಿ ರೈತರು ಜಮೀನುಗಳಿಗೆ ತೆರಳಿ ಕೃಷಿ ಚಟುವಟಿಕೆಗಳನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ.

ಹನಗೋಡು, ಕಾಮಗೌಡನಹಳ್ಳಿ, ಬಿ.ಆರ್. ಕಾವಲು, ಶಿಂಡೇನಹಳ್ಳಿ, ಅಬ್ಬೂರು, ಗುರುಪುರ, ಕಲ್ಲಹಳ್ಳಿ, ನಾಗಮಂಗಲ, ಹಿಂಡಗೂಡ್ಲು, ದಾಸನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ೩-೪ಹುಲಿ, ಚಿರತೆಗಳ ಓಡಾಟ ಕಂಡುಬಂದಿದೆ. ಇದರಿಂದಾಗಿ ಸಂಜೆಯಾಗುತ್ತಿದ್ದಂತೆ ಜನರು ಮನೆ ಸೇರುವಂತಾಗಿದೆ.

ಹನಗೋಡು ಅಕ್ಕ ಪಕ್ಕದ ಗ್ರಾಮಗಳು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಣಸೂರು ವಲಯಕ್ಕೆ ಸೇರುತ್ತವೆ. ಪ್ರತಿ ವರ್ಷ ಮುಂಗಾರು ಅವಧಿಯಲ್ಲಿ ಶುಂಠಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ಇಲ್ಲಿನ ರೈತರು ಬೆಳೆಯುತ್ತಾರೆ. ಲಿ ಹಾಗೂ ಇತರ ಕಾಡುಪ್ರಾಣಿಗಳ ಹಾವಳಿಯಿಂದ ಆತಂಕಗೊಂಡಿರುವ ರೈತರು ಜಮೀನುಗಳನ್ನು ಬೀಳು ಬಿಟ್ಟಿದ್ದಾರೆ. ಕೆಲವರು ಮಾತ್ರ ರಾಗಿ ಬಿತ್ತನೆ ಮಾಡಿದ್ದಾರೆ. ಸಂಜೆ ೫ ಗಂಟೆಯ ಒಳಗಾಗಿ ಮನೆ ಸೇರಬೇಕಾದ ಪರಿಸ್ಥಿತಿ ಇದೆ ಎಂದು ಸ್ಥಳೀಯ ನಿವಾಸಿ ಶಿವಣ್ಣ ತಿಳಿಸಿದರು.

ಈ ಭಾಗದಲ್ಲಿ ಹಂದಿ ಮತ್ತು ಜಿಂಕೆಗಳ ಕಾಟವೂ ವ್ಯಾಪಕವಾಗಿದೆ. ವನ್ಯಪ್ರಾಣಿಗಳಿಂದಆಗುತ್ತಿರುವ ಸಮಸ್ಯೆಗಳನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎನ್ನುವುದು ರೈತರ ಅಳಲು. ರೈತರು ಒತ್ತಾಯಿಸಿದಾಗ ಕಾಟಾಚಾರಕ್ಕೆ ವಾಹನಗಳಲ್ಲಿ ಒಂದೆರಡು ಸುತ್ತು ಹಾಕಿ ಹೋಗುತ್ತಾರೆ. ನಂತರ ಇವರ ಸುಳಿವೇ ಇರುವುದಿಲ್ಲ. ಜಮೀನಿನಲ್ಲಿ ಹುಲಿ, ಚಿರತೆ ಹೆಜ್ಜೆ ಗುರುತು ಕಂಡುಬಂದಿರುವುದರಿಂದ ಎಲ್ಲಿ ಅಡಗಿ ಕುಳಿತಿರುತ್ತವೆಯೋ ಎಂಬ ಭಯದಲ್ಲೇ ಓಡಾಡಬೇಕಿದೆ.

ಜಾನುವಾರುಗಳ ಮೇಲೂ ದಾಳಿ ಮಾಡಿವೆ. ಈ ಭಯದಿಂದ ಜಾನುವಾರುಗಳನ್ನು ಕೂಡ ಮೇಯಿಸಲು ಆಗುತ್ತಿಲ್ಲ. ಮನೆಯ ಬಳಿಯೇ ಕಟ್ಟಿ ಸಾಕಬೇಕಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ರಾತ್ರಿ ಸಮಯದಲ್ಲಿ ಇಲಾಖೆಯ ಸಿಬ್ಬಂದಿ ಗಸ್ತು ತಿರುಗಿ ಪ್ರಾಣಿಗಳನ್ನು ಸೆರೆ ಹಿಡಿದು ಜನರ ಆತಂಕ ದೂರ ಮಾಡಬೇಕು ಎಂದು ಶಿವಣ್ಣ ಒತ್ತಾಯಿಸಿದರು.

” ಹನಗೋಡು ಭಾಗದಲ್ಲಿ ಕಾಡು ಪ್ರಾಣಿಗಳಿಂದ ಸಮಸ್ಯೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಡ್ರೋನ್ ಮೂಲಕ ಹುಲಿಗಳ ಚಲನ ವಲನ ತಿಳಿದುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ.”

– ಸೀಮಾ, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕಿ

” ಈಗಾಗಲೇ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಅರಣ್ಯ ಸಚಿವರ ಗಮನಕ್ಕೆ ತಂದು ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಸದ್ಯದಲ್ಲೇ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುತ್ತೇನೆ ಎಂದು ತಿಳಿಸಿದ್ದಾರೆ. ನಾನು ಅಧಿವೇಶನದಲ್ಲಿ ಭಾಗವಹಿಸಿರುವುದರಿಂದ ಬಂದ ನಂತರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರೈತರ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಪಡುತ್ತೇನೆ.:

-ಜಿ.ಡಿ.ಹರೀಶ್‌ಗೌಡ, ಶಾಸಕ

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

1 hour ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

14 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

15 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

15 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

15 hours ago