Andolana originals

ಕಾಡುಹಂದಿಗಳ ಕಾಟದಿಂದ ಬೇಸತ್ತ ರೈತರು

ಹೊಸೂರು ಸುತ್ತಮುತ್ತ ಭತ್ತದ ಪೈರುಗಳನ್ನು ತಿಂದುಹಾಕುತ್ತಿರುವ ಕಾಡುಹಂದಿಗಳು, ನವಿಲುಗಳಿಂದಲೂ ಬೆಳೆ ನಾಶ 

ಹೊಸೂರು: ವನ್ಯ ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ರೈತರು ಪರಿತಪಿಸುವುದು ಒಂದೆಡೆಯಾದರೆ ಇತ್ತ ಕಾಡು ಹಂದಿಗಳ ಕಾಟದಿಂದ ಭತ್ತದ ನಾಡಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸುತ್ತಮುತ್ತ ಹಾರಂಗಿ ಅಚ್ಚುಕಟ್ಟು ರೈತರ ಜಮೀನುಗಳಿಗೆ ಕಾಡು ಹಂದಿಗಳು ಮತ್ತು ನವಿಲುಗಳು ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿದ್ದು, ಸಾಲ ಮಾಡಿ ಬೆಳೆದ ಬೆಳೆ ಕೈ ಸೇರುವ ಮುನ್ನವೇ ಕಾಡು ಪ್ರಾಣಿಗಳ ದಾಳಿಯಿಂದ ಹಾಳಾಗುತ್ತಿದೆ.

ಈ ಹಿಂದೆ ಕೇವಲ ರಾಗಿ, ಜೋಳ, ಅಲಸಂದೆ, ಕಬ್ಬು ಬೆಳೆಗಳಿಗೆ ಮಾರಕವಾಗಿದ್ದ ಕಾಡುಹಂದಿಗಳು ಈ ಬಾರಿ ಭತ್ತದ ಬೆಳೆಯನ್ನು ಹಾಳು ಮಾಡುತ್ತಿದ್ದು ಭತ್ತದ ಪೈರುಗಳನ್ನು ಕತ್ತರಿಸಿ ಹಾಕುತ್ತಿವೆ. ಭತ್ತದ ಪೈರನ್ನು ಕಾಡುಹಂದಿಗಳು ಗುಂಪು ಗುಂಪಾಗಿ ದಾಳಿ ಮಾಡಿ ತಿನ್ನುವ ಪರಿಣಾಮ ರಾತ್ರಿಯಿಡೀ ರೈತರು ಭತ್ತದ ಗದ್ದೆಗಳ ಬಳಿ ಕಾವಲು ಕಾಯುವಂತಾಗಿದೆ.

ಇದನ್ನು ಓದಿ:‘ಒಕ್ಕಲಿಗರ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ’

ನವಿಲುಗಳ ಕಾಟ : ಕಾಡು ಹಂದಿಗಳ ಹಾವಳಿಯಿಂದ ಬೆಳೆ ಕಾಪಾಡಿಕೊಂಡರೆ ಭತ್ತದ ಪೈರು ತೆನೆ ಒಡೆದ ನಂತರ ನವಿಲುಗಳ ಕಾಟ ಹೆಚ್ಚುತ್ತಿದ್ದು, ಭತ್ತವನ್ನು ತೆನೆಯಿಂದ ತಿನ್ನುತ್ತಿವೆ. ಅವರೆ, ತೊಗರಿ, ಮುಸುಕಿನ ಜೋಳ, ರಾಗಿ ಯಾವುದೇ ಬೆಳೆ ಹಾಕಿದರೂ ಅವುಗಳನ್ನು ಮೊಳಕೆಯಲ್ಲೇ ತಿನ್ನುತ್ತಿದ್ದು ಬೆಳೆಯ ರಕ್ಷಣೆಯೇ ರೈತರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅರಣ್ಯ ಇಲಾಖೆ ಕಾಡುಹಂದಿಗಳು, ನವಿಲುಗಳ ಹಾವಳಿಗೆ ಕಡಿವಾಣ ಹಾಕಬೇಕೆಂಬ ಆಗ್ರಹ ರೈತರಿಂದ ಕೇಳಿಬಂದಿದೆ.

” ಕಾಡು ಹಂದಿಗಳು, ನವಿಲುಗಳು ಮತ್ತು ಚಿರತೆಗಳು ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಇದ್ದು ಅವುಗಳ ನಿಯಂತ್ರಣ ಸಾಧ್ಯವಿಲ್ಲ. ರೈತರು ಆದಷ್ಟು ಜಾಗೃತವಾಗಿ ತಮ್ಮ ಬೆಳ ಕಾಪಾಡಿಕೊಳ್ಳಲೇಬೇಕು. ಬೆಳೆ ಹಾನಿಯಾಗಿದ್ದರೆ ಇಲಾಖೆಗೆ ಅರ್ಜಿ ಸಲ್ಲಿಸಿದರೆ, ಪರಿಹಾರ ದೊರಕಿಸಿಕೊಡಲಾಗುವುದು.”

-ಹರಿಪ್ರಸಾದ್, ವಲಯ ಅರಣ್ಯ ಅಧಿಕಾರಿ, ಕೆ.ಆರ್.ನಗರ

” ಕಾಡು ಹಂದಿಗಳು ಭತ್ತದ ಪೈರನ್ನು ತಿಂದುಹಾಕುತ್ತಿವೆ.ಇದರಿಂದ ಕಷ್ಟಪಟ್ಟು ಬೆಳೆದ ಬೆಳೆ ನಾಶವಾಗುತ್ತಿದೆ. ರಾತ್ರಿಯಿಡೀ ಪಟಾಕಿ ಸಿಡಿಸಿ ಶಬ್ದ ಮಾಡಿ ಅವುಗಳನ್ನು ಓಡಿಸುವುದೇ ಸವಾಲಾಗಿದೆ.”

-ರಾಮೇಗೌಡ, ರೈತ, ಹೊಸೂರು

-ಆನಂದ್ ಹೊಸೂರು

ಆಂದೋಲನ ಡೆಸ್ಕ್

Recent Posts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

24 seconds ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago