ಕೋಟೆ: ರೈತ ಸಂಘದ ಎರಡು ಬಣಗಳಿಂದ ಪ್ರತ್ಯೇಕವಾಗಿ ನಡೆದ ರೈತ ದಿನಾಚರಣೆ
ಮಂಜು ಕೋಟೆ
ಹೆಚ್.ಡಿ.ಕೋಟೆ: ರೈತ ಸಂಘಗಳ ವತಿಯಿಂದ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ರೈತರು ಸಡಗರದಿಂದ ಪಾಲ್ಗೊಂಡಿದ್ದರಿಂದ ತಾಲ್ಲೂಕಿನಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು.
ತಾಲ್ಲೂಕಿನಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿ ವಾಸಿಸುತ್ತಿದ್ದು, ಕೃಷಿಯನ್ನೇ ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ, ರೈತರಿಗೆ ದಿನದಿಂದ ದಿನಕ್ಕೆ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಇಂಥ ಸಂದರ್ಭದಲ್ಲಿ ರೈತ ಸಂಘಟನೆಗಳು ವಿಶ್ವ ರೈತ ದಿನಾಚರಣೆ ಅಂಗವಾಗಿ ನಡೆಸಿದ ರೈತರ ಹಬ್ಬದ ಕಾರ್ಯಕ್ರಮ ತಾಲ್ಲೂಕಿನಲ್ಲಿ ರೈತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.
ಕರ್ನಾಟಕ ರಾಜ್ಯ ರೈತ ಪರ್ವ ಮತ್ತು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದದವರು ಪೈಪೋಟಿಯ ಮೂಲಕ ರೈತರ ಹಬ್ಬವನ್ನು ಪಟ್ಟಣದಲ್ಲಿ ಪ್ರತ್ಯೇಕವಾಗಿ ಆಯೋಜಿಸಿದ್ದರು.
ಎರಡೂ ರೈತ ಸಂಘಗಳ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್ ಮತ್ತು ಚಂದನ್ ಗೌಡ ಸಮ್ಮುಖದಲ್ಲಿ ತಾಲ್ಲೂಕಿನ ಉಸ್ತುವಾರಿ ಗಳಾದ ವೈ. ಎಲ್. ನವೀನ್ ಕುಮಾರ್, ಹರೀಶ್ ಗೌಡ, ಕುಮಾರ ಹಾಗೂ ಹೈರಿಗೆ ಉಮೇಶ್, ಮಾದೇಗೌಡ, ಲೋಕೇಶ್, ಸತೀಶ್ ನೇತೃತ್ವದಲ್ಲಿ ಅಂಬೇಡ್ಕರ್ ಭವನ ಮತ್ತು ತಾರಕ ಫಂಕ್ಷನ್ ಹಾಲ್ ಮುಂಭಾಗ ದಲ್ಲಿ ಎರಡೂ ಸಂಘಟನೆಯವರು ಪ್ರತ್ಯೇಕವಾಗಿ ರೈತರ ಹಬ್ಬವನ್ನು ನಡೆಸಿದರು.
ಮೆರವಣಿಗೆಯಲ್ಲಿ ಕಲಾತಂಡಗಳು, ಹಳ್ಳಿಕಾರ್ ತಳಿಗಳ ಎತ್ತುಗಳ ಪ್ರದರ್ಶನ, ರೈತರಿಗೆ ಸನ್ಮಾನ, ವಿಚಾರಗೋಷ್ಠಿ, ಅರಿವು ಕಾರ್ಯಕ್ರಮ ಮುಂತಾದವುಗಳನ್ನು ಅರ್ಥಪೂರ್ಣವಾಗಿ ನಡೆಸಿದರು.
ತಾಲ್ಲೂಕಿನಲ್ಲಿ ರೈತ ಸಂಘಗಳ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಪ್ರತ್ಯೇಕವಾಗಿ ಕಾರ್ಯಕ್ರಮ ನಡೆದಿರುವುದು ಇದೇ ಪ್ರಪ್ರಥಮವಾಗಿದೆ. ತಾಲ್ಲೂಕಿನಲ್ಲಿ ಇರುವ ರೈತರ ಸಮಸ್ಯೆಗಳನ್ನು, ಕಷ್ಟಗಳನ್ನು, ಅವರ ಕೆಲಸ ಕಾರ್ಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರೈತ ಸಂಘಟನೆಗಳು ಮತ್ತು ಮುಖಂಡರು ಮುಂದಾದರೆ ರೈತ ಕುಟುಂಬಗಳಿಗೆ ನೆರವಾಗಲಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…