Andolana originals

ಚುಂಚನಕಟ್ಟೆ ಹೋಬಳಿಯ ರೈತರಿಗೆ ಭತ್ತದ ಇಳುವರಿ ಕುಂಠಿತ ಭೀತಿ

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ

ಆನಂದ್ ಹೊಸೂರು

ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹಲವಾರು ರೈತರ ಜಮೀನುಗಳಲ್ಲಿ ಕಂಡುಬರುತ್ತಿರುವ ದೃಶ್ಯ.

ಭತ್ತದ ಫಸಲು ಕಟಾವಿಗೆ ಬಂದಿದ್ದು ಕೂಲಿ ಕಾರ್ಮಿಕರ ಕೊರತೆಯಿಂದ ಕಟಾವಾ ಗಬೇಕಿರುವ ಬೆಳೆ ಜಮೀನುಗಳಲ್ಲೇ ಉದುರುವಂತೆ ಆಗಿದ್ದು ಇಳುವರಿ ಕುಂಠಿತ ವಾಗುವ ಭೀತಿ ರೈತರಿಗೆ ಎದುರಾಗಿದೆ.

ಹಿಂದೆ ಭತ್ತದ ಬೆಳೆ ಲಾಭದಾಯಕ ಬೆಳೆಯಾಗಿತ್ತು. ಆದರೆ ಯಂತ್ರೋಪಕರಣ ಗಳು ದಾಂಗುಡಿ ಇಟ್ಟು ಬಿತ್ತನೆ ಬೀಜ, ಉಳುಮೆ, ಗದ್ದೆ ಹದ ಮಾಡಲು ಟ್ರಾಕ್ಟರ್ ಗಳನ್ನೇ ಅವಲಂಬಿಸಿದ ಕಾರಣ ಭತ್ತ ನಾಟಿ ಮಾಡುವ ವೇಳೆಗೆ ಕಡಿಮೆ ಎಂದರೂ ೨೫ ಸಾವಿರದಿಂದ ೨೮ ಸಾವಿರ ರೂ. ವರೆಗೆ ವೆಚ್ಚ ತಗುಲುತ್ತಿರುವುದು ಭತ್ತದ ಕೃಷಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಅಲ್ಲದೆ ಇದೀಗ ಕಟಾವು ಮಾಡಲು ಕೂಲಿ ದರ ಈ ಹಿಂದೆ ೩ರಿಂದ ೪ ಸಾವಿರ ರೂ. ಗಳಿದ್ದುದು ಈಗ ೧೦ ಸಾವಿರ ರೂ. ಗಳನ್ನು ತಲುಪಿದೆ. ಕಟಾವಾದ ಹುಲ್ಲಿನಿಂದ ಭತ್ತ ಬೇರ್ಪಡಿಸಲು ಯಂತ್ರದ ಮಾಲೀಕರಿಗೆ ಎಕರೆಗೆ ೪ರಿಂದ ೫ ಚೀಲ ಭತ್ತ ನೀಡಲಾಗುತ್ತಿದ್ದು, ನಂತರ ಒಣಹುಲ್ಲು ಕಟ್ಟಲು ಒಂದು ಕಂತೆಗೆ ೧೦ ರೂ. ಗಳಂತೆ ಹಣ ನೀಡಬೇಕಿದ್ದು ಕಟಾವಿಗೆ ೨೦,೦೦೦ ರೂ. , ನಾಟಿ ಕಾರ್ಯಕ್ಕೆ ೨೫,೦೦೦ ರೂ. ಸೇರಿ ಒಟ್ಟು ೪೫,೦೦೦ ರೂ. ಗಳಷ್ಟು ಖರ್ಚು ಮಾಡಿ ರೈತರಿಗೆ ಉಳಿಯುವುದಾದರೂ ಏನು ಎಂಬುದು ರೈತರ ಪ್ರಶ್ನೆಯಾಗಿದೆ.

ಒಂದು ಎಕರೆ ಭತ್ತ ಬೆಳೆಯಲು ೫೦ ಸಾವಿರ ರೂ. ಖರ್ಚಾಗುತ್ತಿದ್ದು ಅಷ್ಟೇ ಪ್ರಮಾಣದ ಹಣ ಮಾರಾಟದಿಂದ ಬರುತ್ತಿದೆ. ಸರ್ಕಾರ ಭತ್ತಕ್ಕೆ ಕನಿಷ್ಠ ೪ ಸಾವಿರ ರೂ. ಬೆಂಬಲ ಬೆಲೆ ನೀಡಿದರೆ ಉತ್ತಮ. –ಡಿ. ಸಿ. ರಾಮೇಗೌಡ, ಕೃಷಿಕ ಸಮಾಜದ ನಿರ್ದೇಶಕ, ದೊಡ್ಡ ಕೊಪ್ಪಲು

 

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

2 mins ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

25 mins ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

55 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

1 hour ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

1 hour ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

1 hour ago