Andolana originals

ಚುಂಚನಕಟ್ಟೆ ಹೋಬಳಿಯ ರೈತರಿಗೆ ಭತ್ತದ ಇಳುವರಿ ಕುಂಠಿತ ಭೀತಿ

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ

ಆನಂದ್ ಹೊಸೂರು

ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹಲವಾರು ರೈತರ ಜಮೀನುಗಳಲ್ಲಿ ಕಂಡುಬರುತ್ತಿರುವ ದೃಶ್ಯ.

ಭತ್ತದ ಫಸಲು ಕಟಾವಿಗೆ ಬಂದಿದ್ದು ಕೂಲಿ ಕಾರ್ಮಿಕರ ಕೊರತೆಯಿಂದ ಕಟಾವಾ ಗಬೇಕಿರುವ ಬೆಳೆ ಜಮೀನುಗಳಲ್ಲೇ ಉದುರುವಂತೆ ಆಗಿದ್ದು ಇಳುವರಿ ಕುಂಠಿತ ವಾಗುವ ಭೀತಿ ರೈತರಿಗೆ ಎದುರಾಗಿದೆ.

ಹಿಂದೆ ಭತ್ತದ ಬೆಳೆ ಲಾಭದಾಯಕ ಬೆಳೆಯಾಗಿತ್ತು. ಆದರೆ ಯಂತ್ರೋಪಕರಣ ಗಳು ದಾಂಗುಡಿ ಇಟ್ಟು ಬಿತ್ತನೆ ಬೀಜ, ಉಳುಮೆ, ಗದ್ದೆ ಹದ ಮಾಡಲು ಟ್ರಾಕ್ಟರ್ ಗಳನ್ನೇ ಅವಲಂಬಿಸಿದ ಕಾರಣ ಭತ್ತ ನಾಟಿ ಮಾಡುವ ವೇಳೆಗೆ ಕಡಿಮೆ ಎಂದರೂ ೨೫ ಸಾವಿರದಿಂದ ೨೮ ಸಾವಿರ ರೂ. ವರೆಗೆ ವೆಚ್ಚ ತಗುಲುತ್ತಿರುವುದು ಭತ್ತದ ಕೃಷಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಅಲ್ಲದೆ ಇದೀಗ ಕಟಾವು ಮಾಡಲು ಕೂಲಿ ದರ ಈ ಹಿಂದೆ ೩ರಿಂದ ೪ ಸಾವಿರ ರೂ. ಗಳಿದ್ದುದು ಈಗ ೧೦ ಸಾವಿರ ರೂ. ಗಳನ್ನು ತಲುಪಿದೆ. ಕಟಾವಾದ ಹುಲ್ಲಿನಿಂದ ಭತ್ತ ಬೇರ್ಪಡಿಸಲು ಯಂತ್ರದ ಮಾಲೀಕರಿಗೆ ಎಕರೆಗೆ ೪ರಿಂದ ೫ ಚೀಲ ಭತ್ತ ನೀಡಲಾಗುತ್ತಿದ್ದು, ನಂತರ ಒಣಹುಲ್ಲು ಕಟ್ಟಲು ಒಂದು ಕಂತೆಗೆ ೧೦ ರೂ. ಗಳಂತೆ ಹಣ ನೀಡಬೇಕಿದ್ದು ಕಟಾವಿಗೆ ೨೦,೦೦೦ ರೂ. , ನಾಟಿ ಕಾರ್ಯಕ್ಕೆ ೨೫,೦೦೦ ರೂ. ಸೇರಿ ಒಟ್ಟು ೪೫,೦೦೦ ರೂ. ಗಳಷ್ಟು ಖರ್ಚು ಮಾಡಿ ರೈತರಿಗೆ ಉಳಿಯುವುದಾದರೂ ಏನು ಎಂಬುದು ರೈತರ ಪ್ರಶ್ನೆಯಾಗಿದೆ.

ಒಂದು ಎಕರೆ ಭತ್ತ ಬೆಳೆಯಲು ೫೦ ಸಾವಿರ ರೂ. ಖರ್ಚಾಗುತ್ತಿದ್ದು ಅಷ್ಟೇ ಪ್ರಮಾಣದ ಹಣ ಮಾರಾಟದಿಂದ ಬರುತ್ತಿದೆ. ಸರ್ಕಾರ ಭತ್ತಕ್ಕೆ ಕನಿಷ್ಠ ೪ ಸಾವಿರ ರೂ. ಬೆಂಬಲ ಬೆಲೆ ನೀಡಿದರೆ ಉತ್ತಮ. –ಡಿ. ಸಿ. ರಾಮೇಗೌಡ, ಕೃಷಿಕ ಸಮಾಜದ ನಿರ್ದೇಶಕ, ದೊಡ್ಡ ಕೊಪ್ಪಲು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago