Andolana originals

ಚುಂಚನಕಟ್ಟೆ ಹೋಬಳಿಯ ರೈತರಿಗೆ ಭತ್ತದ ಇಳುವರಿ ಕುಂಠಿತ ಭೀತಿ

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ

ಆನಂದ್ ಹೊಸೂರು

ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹಲವಾರು ರೈತರ ಜಮೀನುಗಳಲ್ಲಿ ಕಂಡುಬರುತ್ತಿರುವ ದೃಶ್ಯ.

ಭತ್ತದ ಫಸಲು ಕಟಾವಿಗೆ ಬಂದಿದ್ದು ಕೂಲಿ ಕಾರ್ಮಿಕರ ಕೊರತೆಯಿಂದ ಕಟಾವಾ ಗಬೇಕಿರುವ ಬೆಳೆ ಜಮೀನುಗಳಲ್ಲೇ ಉದುರುವಂತೆ ಆಗಿದ್ದು ಇಳುವರಿ ಕುಂಠಿತ ವಾಗುವ ಭೀತಿ ರೈತರಿಗೆ ಎದುರಾಗಿದೆ.

ಹಿಂದೆ ಭತ್ತದ ಬೆಳೆ ಲಾಭದಾಯಕ ಬೆಳೆಯಾಗಿತ್ತು. ಆದರೆ ಯಂತ್ರೋಪಕರಣ ಗಳು ದಾಂಗುಡಿ ಇಟ್ಟು ಬಿತ್ತನೆ ಬೀಜ, ಉಳುಮೆ, ಗದ್ದೆ ಹದ ಮಾಡಲು ಟ್ರಾಕ್ಟರ್ ಗಳನ್ನೇ ಅವಲಂಬಿಸಿದ ಕಾರಣ ಭತ್ತ ನಾಟಿ ಮಾಡುವ ವೇಳೆಗೆ ಕಡಿಮೆ ಎಂದರೂ ೨೫ ಸಾವಿರದಿಂದ ೨೮ ಸಾವಿರ ರೂ. ವರೆಗೆ ವೆಚ್ಚ ತಗುಲುತ್ತಿರುವುದು ಭತ್ತದ ಕೃಷಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಅಲ್ಲದೆ ಇದೀಗ ಕಟಾವು ಮಾಡಲು ಕೂಲಿ ದರ ಈ ಹಿಂದೆ ೩ರಿಂದ ೪ ಸಾವಿರ ರೂ. ಗಳಿದ್ದುದು ಈಗ ೧೦ ಸಾವಿರ ರೂ. ಗಳನ್ನು ತಲುಪಿದೆ. ಕಟಾವಾದ ಹುಲ್ಲಿನಿಂದ ಭತ್ತ ಬೇರ್ಪಡಿಸಲು ಯಂತ್ರದ ಮಾಲೀಕರಿಗೆ ಎಕರೆಗೆ ೪ರಿಂದ ೫ ಚೀಲ ಭತ್ತ ನೀಡಲಾಗುತ್ತಿದ್ದು, ನಂತರ ಒಣಹುಲ್ಲು ಕಟ್ಟಲು ಒಂದು ಕಂತೆಗೆ ೧೦ ರೂ. ಗಳಂತೆ ಹಣ ನೀಡಬೇಕಿದ್ದು ಕಟಾವಿಗೆ ೨೦,೦೦೦ ರೂ. , ನಾಟಿ ಕಾರ್ಯಕ್ಕೆ ೨೫,೦೦೦ ರೂ. ಸೇರಿ ಒಟ್ಟು ೪೫,೦೦೦ ರೂ. ಗಳಷ್ಟು ಖರ್ಚು ಮಾಡಿ ರೈತರಿಗೆ ಉಳಿಯುವುದಾದರೂ ಏನು ಎಂಬುದು ರೈತರ ಪ್ರಶ್ನೆಯಾಗಿದೆ.

ಒಂದು ಎಕರೆ ಭತ್ತ ಬೆಳೆಯಲು ೫೦ ಸಾವಿರ ರೂ. ಖರ್ಚಾಗುತ್ತಿದ್ದು ಅಷ್ಟೇ ಪ್ರಮಾಣದ ಹಣ ಮಾರಾಟದಿಂದ ಬರುತ್ತಿದೆ. ಸರ್ಕಾರ ಭತ್ತಕ್ಕೆ ಕನಿಷ್ಠ ೪ ಸಾವಿರ ರೂ. ಬೆಂಬಲ ಬೆಲೆ ನೀಡಿದರೆ ಉತ್ತಮ. –ಡಿ. ಸಿ. ರಾಮೇಗೌಡ, ಕೃಷಿಕ ಸಮಾಜದ ನಿರ್ದೇಶಕ, ದೊಡ್ಡ ಕೊಪ್ಪಲು

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

8 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago