Andolana originals

ಚುಂಚನಕಟ್ಟೆ ಹೋಬಳಿಯ ರೈತರಿಗೆ ಭತ್ತದ ಇಳುವರಿ ಕುಂಠಿತ ಭೀತಿ

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ

ಆನಂದ್ ಹೊಸೂರು

ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹಲವಾರು ರೈತರ ಜಮೀನುಗಳಲ್ಲಿ ಕಂಡುಬರುತ್ತಿರುವ ದೃಶ್ಯ.

ಭತ್ತದ ಫಸಲು ಕಟಾವಿಗೆ ಬಂದಿದ್ದು ಕೂಲಿ ಕಾರ್ಮಿಕರ ಕೊರತೆಯಿಂದ ಕಟಾವಾ ಗಬೇಕಿರುವ ಬೆಳೆ ಜಮೀನುಗಳಲ್ಲೇ ಉದುರುವಂತೆ ಆಗಿದ್ದು ಇಳುವರಿ ಕುಂಠಿತ ವಾಗುವ ಭೀತಿ ರೈತರಿಗೆ ಎದುರಾಗಿದೆ.

ಹಿಂದೆ ಭತ್ತದ ಬೆಳೆ ಲಾಭದಾಯಕ ಬೆಳೆಯಾಗಿತ್ತು. ಆದರೆ ಯಂತ್ರೋಪಕರಣ ಗಳು ದಾಂಗುಡಿ ಇಟ್ಟು ಬಿತ್ತನೆ ಬೀಜ, ಉಳುಮೆ, ಗದ್ದೆ ಹದ ಮಾಡಲು ಟ್ರಾಕ್ಟರ್ ಗಳನ್ನೇ ಅವಲಂಬಿಸಿದ ಕಾರಣ ಭತ್ತ ನಾಟಿ ಮಾಡುವ ವೇಳೆಗೆ ಕಡಿಮೆ ಎಂದರೂ ೨೫ ಸಾವಿರದಿಂದ ೨೮ ಸಾವಿರ ರೂ. ವರೆಗೆ ವೆಚ್ಚ ತಗುಲುತ್ತಿರುವುದು ಭತ್ತದ ಕೃಷಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಅಲ್ಲದೆ ಇದೀಗ ಕಟಾವು ಮಾಡಲು ಕೂಲಿ ದರ ಈ ಹಿಂದೆ ೩ರಿಂದ ೪ ಸಾವಿರ ರೂ. ಗಳಿದ್ದುದು ಈಗ ೧೦ ಸಾವಿರ ರೂ. ಗಳನ್ನು ತಲುಪಿದೆ. ಕಟಾವಾದ ಹುಲ್ಲಿನಿಂದ ಭತ್ತ ಬೇರ್ಪಡಿಸಲು ಯಂತ್ರದ ಮಾಲೀಕರಿಗೆ ಎಕರೆಗೆ ೪ರಿಂದ ೫ ಚೀಲ ಭತ್ತ ನೀಡಲಾಗುತ್ತಿದ್ದು, ನಂತರ ಒಣಹುಲ್ಲು ಕಟ್ಟಲು ಒಂದು ಕಂತೆಗೆ ೧೦ ರೂ. ಗಳಂತೆ ಹಣ ನೀಡಬೇಕಿದ್ದು ಕಟಾವಿಗೆ ೨೦,೦೦೦ ರೂ. , ನಾಟಿ ಕಾರ್ಯಕ್ಕೆ ೨೫,೦೦೦ ರೂ. ಸೇರಿ ಒಟ್ಟು ೪೫,೦೦೦ ರೂ. ಗಳಷ್ಟು ಖರ್ಚು ಮಾಡಿ ರೈತರಿಗೆ ಉಳಿಯುವುದಾದರೂ ಏನು ಎಂಬುದು ರೈತರ ಪ್ರಶ್ನೆಯಾಗಿದೆ.

ಒಂದು ಎಕರೆ ಭತ್ತ ಬೆಳೆಯಲು ೫೦ ಸಾವಿರ ರೂ. ಖರ್ಚಾಗುತ್ತಿದ್ದು ಅಷ್ಟೇ ಪ್ರಮಾಣದ ಹಣ ಮಾರಾಟದಿಂದ ಬರುತ್ತಿದೆ. ಸರ್ಕಾರ ಭತ್ತಕ್ಕೆ ಕನಿಷ್ಠ ೪ ಸಾವಿರ ರೂ. ಬೆಂಬಲ ಬೆಲೆ ನೀಡಿದರೆ ಉತ್ತಮ. –ಡಿ. ಸಿ. ರಾಮೇಗೌಡ, ಕೃಷಿಕ ಸಮಾಜದ ನಿರ್ದೇಶಕ, ದೊಡ್ಡ ಕೊಪ್ಪಲು

 

ಆಂದೋಲನ ಡೆಸ್ಕ್

Recent Posts

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

35 mins ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

59 mins ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

2 hours ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

3 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

6 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

6 hours ago