Andolana originals

ಚುಂಚನಕಟ್ಟೆ ಹೋಬಳಿಯ ರೈತರಿಗೆ ಭತ್ತದ ಇಳುವರಿ ಕುಂಠಿತ ಭೀತಿ

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ

ಆನಂದ್ ಹೊಸೂರು

ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಹಲವಾರು ರೈತರ ಜಮೀನುಗಳಲ್ಲಿ ಕಂಡುಬರುತ್ತಿರುವ ದೃಶ್ಯ.

ಭತ್ತದ ಫಸಲು ಕಟಾವಿಗೆ ಬಂದಿದ್ದು ಕೂಲಿ ಕಾರ್ಮಿಕರ ಕೊರತೆಯಿಂದ ಕಟಾವಾ ಗಬೇಕಿರುವ ಬೆಳೆ ಜಮೀನುಗಳಲ್ಲೇ ಉದುರುವಂತೆ ಆಗಿದ್ದು ಇಳುವರಿ ಕುಂಠಿತ ವಾಗುವ ಭೀತಿ ರೈತರಿಗೆ ಎದುರಾಗಿದೆ.

ಹಿಂದೆ ಭತ್ತದ ಬೆಳೆ ಲಾಭದಾಯಕ ಬೆಳೆಯಾಗಿತ್ತು. ಆದರೆ ಯಂತ್ರೋಪಕರಣ ಗಳು ದಾಂಗುಡಿ ಇಟ್ಟು ಬಿತ್ತನೆ ಬೀಜ, ಉಳುಮೆ, ಗದ್ದೆ ಹದ ಮಾಡಲು ಟ್ರಾಕ್ಟರ್ ಗಳನ್ನೇ ಅವಲಂಬಿಸಿದ ಕಾರಣ ಭತ್ತ ನಾಟಿ ಮಾಡುವ ವೇಳೆಗೆ ಕಡಿಮೆ ಎಂದರೂ ೨೫ ಸಾವಿರದಿಂದ ೨೮ ಸಾವಿರ ರೂ. ವರೆಗೆ ವೆಚ್ಚ ತಗುಲುತ್ತಿರುವುದು ಭತ್ತದ ಕೃಷಿಕರಿಗೆ ಹೊರೆಯಾಗಿ ಪರಿಣಮಿಸಿದೆ.

ಅಲ್ಲದೆ ಇದೀಗ ಕಟಾವು ಮಾಡಲು ಕೂಲಿ ದರ ಈ ಹಿಂದೆ ೩ರಿಂದ ೪ ಸಾವಿರ ರೂ. ಗಳಿದ್ದುದು ಈಗ ೧೦ ಸಾವಿರ ರೂ. ಗಳನ್ನು ತಲುಪಿದೆ. ಕಟಾವಾದ ಹುಲ್ಲಿನಿಂದ ಭತ್ತ ಬೇರ್ಪಡಿಸಲು ಯಂತ್ರದ ಮಾಲೀಕರಿಗೆ ಎಕರೆಗೆ ೪ರಿಂದ ೫ ಚೀಲ ಭತ್ತ ನೀಡಲಾಗುತ್ತಿದ್ದು, ನಂತರ ಒಣಹುಲ್ಲು ಕಟ್ಟಲು ಒಂದು ಕಂತೆಗೆ ೧೦ ರೂ. ಗಳಂತೆ ಹಣ ನೀಡಬೇಕಿದ್ದು ಕಟಾವಿಗೆ ೨೦,೦೦೦ ರೂ. , ನಾಟಿ ಕಾರ್ಯಕ್ಕೆ ೨೫,೦೦೦ ರೂ. ಸೇರಿ ಒಟ್ಟು ೪೫,೦೦೦ ರೂ. ಗಳಷ್ಟು ಖರ್ಚು ಮಾಡಿ ರೈತರಿಗೆ ಉಳಿಯುವುದಾದರೂ ಏನು ಎಂಬುದು ರೈತರ ಪ್ರಶ್ನೆಯಾಗಿದೆ.

ಒಂದು ಎಕರೆ ಭತ್ತ ಬೆಳೆಯಲು ೫೦ ಸಾವಿರ ರೂ. ಖರ್ಚಾಗುತ್ತಿದ್ದು ಅಷ್ಟೇ ಪ್ರಮಾಣದ ಹಣ ಮಾರಾಟದಿಂದ ಬರುತ್ತಿದೆ. ಸರ್ಕಾರ ಭತ್ತಕ್ಕೆ ಕನಿಷ್ಠ ೪ ಸಾವಿರ ರೂ. ಬೆಂಬಲ ಬೆಲೆ ನೀಡಿದರೆ ಉತ್ತಮ. –ಡಿ. ಸಿ. ರಾಮೇಗೌಡ, ಕೃಷಿಕ ಸಮಾಜದ ನಿರ್ದೇಶಕ, ದೊಡ್ಡ ಕೊಪ್ಪಲು

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

2 seconds ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

7 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

15 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

21 mins ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

26 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

34 mins ago