Andolana originals

ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ರೈತರ ಆಗ್ರಹ

ವಡಕೆಹಳ್ಳ ಗ್ರಾಮದಲ್ಲಿ ಅಹೋರಾತ್ರಿ ಧರಣಿ

ಹನೂರು: ಕಾವೇರಿ ನದಿಯಿಂದ ಏತ ನೀರಾವರಿ ಯೋಜನೆಯ ಮೂಲಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ವಡಕೆಹಳ್ಳ ಗ್ರಾಮದಲ್ಲಿ ಆಹೋರಾತ್ರಿ ಧರಣಿ ಆರಂಭಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ಸಂಯುಕ್ತಾಶ್ರಯದಲ್ಲಿಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಧರಣಿಯಲ್ಲಿದಂಟಲ್ಲಿ, ಕೂರಟ್ಟಿ ಹೊಸೂರು, ಶೆಟ್ಟಳ್ಳಿ , ಮಾರ್ಟಳ್ಳಿ ಗ್ರಾಮಗಳ ನೂರಾರು ರೈತರು ಪಾಲ್ಗೊಂಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಶೈಲೇಂದ್ರ ಮಾತನಾಡಿ, ರಾಮಾಪುರ ಹೋಬಳಿ ವ್ಯಾಪ್ತಿಯ ಹಲವು ಗ್ರಾಮ ಪಂಚಾಯಿತಿಗಳಲ್ಲಿಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಏತ ನೀರಾವರಿ ಮೂಲಕ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ಬೈಕ್ ರ‍್ಯಾಲಿ ಹೋರಾಟ ಮಾಡಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ಕಾವೇರಿ ಜಲ ಮಂಡಳಿಯು ಕುಡಿಯುವ ನೀರು ಮತ್ತು ಸಣ್ಣ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ೬೩.೮೩ ಟಿಎಂಸಿ ನೀರು ಬಳಸಲು ಸೂಚಿಸಿದ್ದರೂ ಈ ಭಾಗದ ಜನರಿಗೆ ನೀರಿನ ಸೌಲಭ್ಯ ಒದಗಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

೨೦೦೯ರಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ರೈತ ಸಂಘದಿಂದ ಜಿಲ್ಲೆಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕೆಂದು ನಡೆದ ಹೋರಾಟಕ್ಕೆ ಗೆಲುವು ಸಿಕ್ಕಿ ೧೫ ವರ್ಷಗಳು ಕಳೆದರೂ ಹನೂರು ಭಾಗಕ್ಕೆ ನೀರನ್ನು ಒದಗಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳುರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಅಂತರ್ಜಲ ಮಟ್ಟ ಕುಸಿದಿರುವುದರಿಂದ ಇಲ್ಲಿನ ನಿವಾಸಿಗಳು ಗ್ರಾಮಗಳನ್ನು ತೊರೆದು ಪಕ್ಕದ ರಾಜ್ಯಗಳಿಗೆವಲಸೆ ಹೋಗುತ್ತಿದ್ದಾರೆ. ಆದ್ದರಿಂದ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಐದು ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ಎಂ.ಆರ್.ಮಂಜುನಾಥ್ ನೀಡಿ ಪ್ರತಿಭಟನಾಕಾರರ ಮನವಿಯನ್ನು ಆಲಿಸಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ ಜನರಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಿಸುವ ಮೂಲಕ ರೈತರ ವ್ಯವಸಾಯಕ್ಕೆ ಅನುಕೂಲವಾಗಲಿದೆ ಎಂದರು. ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಗುಂಡಾಲ್ ಜಲಾಶಯದ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ೫೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಮಗಾರಿಗೆ ಕೆಲವೇ ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಮಾರ್ಟಳ್ಳಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದ ರಾಜ್ ಸೇರಿ ದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರು, ಮಹಿಳಾ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

56 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

2 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

2 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

3 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

3 hours ago