ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು
ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೆ. ಆರ್. ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ನಾಲೆಗಳಿಗೆ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.
ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹಾರಂಗಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಕಾವೇರಿ ನದಿಗೆ ಬಿಡುತ್ತಿರುವುದರಿಂದ ಹಾಗೂ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಕೆ. ಆರ್. ಎಸ್. ಜಲಾಶಯ ಸದ್ಯದಲ್ಲೇ ಭರ್ತಿಯಾಗುವ ವಿಶ್ವಾಸ ಮೂಡಿಸಿದೆ.
ಕೊಡಗಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಇನ್ನೇನು ಹಾರಂಗಿ ಜಲಾಶಯ ಭರ್ತಿಯಾಗಲಿದೆ. ಹಾಗಾಗಿ ಹಾರಂಗಿ ಎಡದಂಡೆ ಮತ್ತು ಬಲದಂಡೆ ನಾಲೆಗಳು, ಕೆ. ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಬಳ್ಳೂರು ಅಣೆಕಟ್ಟೆಯಿಂದ ಚಾಮರಾಜ ಎಡ ಹಾಗೂ ಬಲದಂಡೆ ನಾಲೆಗಳಿಗೆ ಮತ್ತು ಶ್ರೀರಾಮ ಮತ್ತು ಮಿರ್ಲೆ ಶ್ರೇಣಿ ನಾಲೆಗಳಿಗೆ ನೀರು ಹರಿಸಬೇಕು ಎಂಬುದು ಈ ಭಾಗದ ರೈತ ಮುಖಂಡರ ಒತ್ತಾಯವಾಗಿದೆ.
ಜುಲೈ ಮೊದಲ ವಾರದಿಂದ ಭತ್ತದ ಬಿತ್ತನೆ ಕಾರ್ಯ ನಡೆಸಲು ಈಗಾಗಲೇ ರೈತರು ಸಜ್ಜಾಗಿದ್ದಾರೆ. ಆದರೆ ಸಕಾಲದಲ್ಲಿ ಬಿತ್ತನೆ ಬೀಜ ವಿತರಣೆಗೆ ಕೃಷಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.
ಕೊಡಗಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಕೆ. ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಿಗೆ ಸೇರಿದ ಚಾಮರಾಜ ಎಡದಂಡೆ ಮತ್ತು ಬಲದಂಡೆ ನಾಲೆಗಳು, ಶ್ರೀರಾಮ ನಾಲೆಗಳಿಗೆ ನೀರು ಹರಿಸಿ, ಮುಂದೆ ನೀರಿನ ಕೊರತೆ ಎದುರಾಗಿರುವ ಕೆರೆ-ಕಟ್ಟೆಗಳನ್ನು ತುಂಬಿಸಬೇಕು. – ಜೆ. ಎಂ. ಕುಮಾರ್, ಗೌರವಾಧ್ಯಕ್ಷ, ರಾಜ್ಯ ರೈತ ಪರ್ವ ಸಂಘ
ಭತ್ತದ ನಾಡಿನಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಬಾರಿ ಮುಂಗಾರು ಚೆನ್ನಾಗಿ ಆಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಈಗಲಾದರೂ ನೀರಾವರಿ ಅಽಕಾರಿಗಳ ಸಭೆ ನಡೆಸಿ ಜುಲೈ ಮೊದಲ ವಾರದಲ್ಲಿ ಭತ್ತ ಬೆಳೆಯಲು ನಾಲೆಗಳಿಗೆ ನೀರು ಹರಿಸಲು ಸರ್ಕಾರ ಹಾಗೂ ಶಾಸಕರು ಮುಂದಾಗಬೇಕು. – ಅರ್ಜುನಹಳ್ಳಿ ರಾಮಪ್ರಸಾದ್, ಅಧ್ಯಕ್ಷರು, ಯುವ ರೈತ ವೇದಿಕೆ
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…