Andolana originals

ಅಂಗಡಿಗಳಲ್ಲಿ ಬಿತ್ತನೆ ಮುಸಕಿನ ಜೋಳ ಸಿಗದೆ ರೈತರ ಪರದಾಟ

ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ ದೊರೆಯದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ.

ತಾಲ್ಲೂಕಿನಲ್ಲಿ ಕಬಿನಿ, ತಾರಕ, ಹೆಬ್ಬಾಳ, ನುಗು ಈ ನಾಲ್ಕು ಜಲಾಶಗಳಿದ್ದರೂ ಈ ಭಾಗದ ರೈತರ ಜಮೀನುಗಳಿಗೆ ಜಲಾಶಯಗಳ ನೀರಿಗಿಂತ ಮಳೆಯೇ ಹೆಚ್ಚು ಆಸರೆಯಾಗಿದೆ. ಸುಮಾರು ೧. ೩೦ ಲಕ್ಷ ಎಕರೆ ಜಮೀನುಗಳಲ್ಲಿ ರೈತರು ಪ್ರತಿ ಸಾಲಿನ ಏಪ್ರಿಲ್‌ನಲ್ಲಿ ಮುಂಗಾರಿನ ಪ್ರಾರಂಭದಲ್ಲಿ ವಿವಿಧ ಬೆಳೆಗಳ ಬಿತ್ತನೆ ಕಾರ್ಯ ಕೈಗೊಳ್ಳುತ್ತಾರೆ. ಆರ್ಥಿಕ ಬೆಳೆಯಾದ ಮುಸುಕಿನ ಜೋಳ, ಹತ್ತಿ, ರಾಗಿ, ಇನ್ನಿತರ ಬೆಳೆಗಳಿಗೆ ಮೊದಲನೇ ಆದ್ಯತೆ ನೀಡುತ್ತಾರೆ.

ಕಳೆದ ಎರಡು ವರ್ಷಗಳಿಂದ ಕ್ಷೇತ್ರದ ರೈತರು ೬೦,೦೦೦ ಎಕರೆ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುತ್ತಿದ್ದಾರೆ. ಹತ್ತಿ ಬೆಳೆಗೆ ಉತ್ತಮ ಬೆಲೆ ದೊರೆಯದೆ, ಕಾರ್ಮಿಕರ ಸಮಸ್ಯೆ ಎದುರಾಗಿದ್ದರಿಂದ ಮುಸುಕಿನ ಜೋಳ ಬೆಳೆಯಲು ರೈತರು ಉತ್ಸಾಹ ತೋರಿಸುತ್ತಿದ್ದಾರೆ.

ಈಗಾಗಲೇ ಕ್ಷೇತ್ರದಲ್ಲಿ ಮಳೆಯ ವಾತಾವರಣ ಕಾಣಿಸುತ್ತಿದ್ದು, ರೈತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡುವ ಸಲುವಾಗಿ ಮಾರಾಟ ಅಂಗಡಿಗೆ ಬಿತ್ತನೆ ಬೀಜ ಖರೀದಿಸಲು ಹೋದರೆ ಬಿತ್ತನೆ ಮುಸುಕಿನ ಜೋಳದ ಮಾರಾಟವನ್ನು ಸ್ಥಗಿತಗೊಳಿಸಿರುವುದನ್ನು ಕಂಡು ಆತಂಕಗೊಂಡಿದ್ದಾರೆ.

ಕಳೆದ ಸಾಲಿನಲ್ಲಿ ರೈತರು ಮುಸುಕಿನ ಜೋಳ ಬಿತ್ತನೆ ಮಾಡಿ ಬೆಳೆ ಬಂದ ಸಂದರ್ಭದಲ್ಲಿ ಬಿಳಿ ಸುಳಿ ರೋಗ ಕಾಣಿಸಿಕೊಂಡು, ವಿವಿಧ ಬಗೆಯ ಔಷಧಿ ಸಿಂಪಡಿಸಿದರೂ ರೋಗ ನಿಯಂತ್ರಣವಾಗದೆ ಬೆಳೆ ನಾಶವಾಗಿತ್ತು. ಇದರಿಂದ ರೈತರು ಕಂಗಾಲಾಗಿದ್ದರು.

ರೋಗವನ್ನು ನಿಯಂತ್ರಿಸುವ ಸಲುವಾಗಿ ವಿವಿಧ ಕಂಪೆನಿಗಳ ಬಿತ್ತನೆ ಬೀಜಗಳಲ್ಲಿ ಮೆಟಲಾಕ್ಸಿಲ್-ಎಂ ೪% + ಮ್ಯಾಂಕೊಝೆಬ್ ೬೪% ಔಷಧಿಗಳು ಮಿಶ್ರಣಗೊಂಡ ನಂತರವೇ ಬಿತ್ತನೆ ಬೀಜ ಮಾರಾಟ ಮಾಡಬೇಕೆಂದು ಕೃಷಿ ಇಲಾಖೆಯ ಅಽಕಾರಿಗಳು ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ಅಂಗಡಿಗಳಿಗೆ ಬಂದಿದ್ದ ಔಷಧಿ ಮಿಶ್ರಿತವಲ್ಲದ ಬೀಜಗಳ ಮಾರಾಟವನ್ನು ಸ್ಥಗಿತಗೊಳಿಸಿದ್ದಾರೆ.

ಕಂಪೆನಿಯವರು ಕೃಷಿ ಇಲಾಖೆಯ ನಿರ್ದೇಶನದಂತೆ ಔಷಧಿ ಮಿಶ್ರಿತ ಬಿತ್ತನೆ ಬೀಜವನ್ನು ಇನ್ನೂ ಸರಬರಾಜು ಮಾಡದಿರುವುದರಿಂದ ರೈತರು ಬಿತ್ತನೆ ಬೀಜಕ್ಕಾಗಿ ಅಂಗಡಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ.

 

ಆಂದೋಲನ ಡೆಸ್ಕ್

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

6 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

6 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

6 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

6 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

7 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

7 hours ago