Andolana originals

ಖರೀದಿ ಕೇಂದ್ರಗಳತ್ತ ಮುಖ ಮಾಡದ ಅನ್ನದಾತರು

ಬಿ.ಟಿ.ಮೋಹನ್ ಕುಮಾರ್

ರಾಗಿ ಪೂರೈಸಲು ರೈತರ ನಿರಾಸಕ್ತಿ 

ರೈತರು ಬೆಳೆದ ಭತ್ತ, ರಾಗಿ ದಲ್ಲಾಳಿಗಳ ಪಾಲು

ಮಂಡ್ಯ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಜಿಲ್ಲೆಯಲ್ಲಿ ಖರೀದಿ ಕೇಂದ್ರ ತೆರೆಯಬೇಕೆಂದು ಸರಣಿ ಹೋರಾಟಗಳೇ ನಡೆದಿದ್ದವು. ಆದರೆ, ರೈತರು ಬೆಂಬಲ ಬೆಲೆ ಯೋಜನೆಯಡಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈವರೆಗೆ ಒಂದು ಕಿಲೋ ಭತ್ತ ಕೂಡ ಖರೀದಿ ಕೇಂದ್ರಗಳಿಗೆ ಪೂರೈಕ ಯಾಗಿಲ್ಲ. ರಾಗಿ ಪೂರೈಕೆಯಲ್ಲೂ ಸಾಕಷ್ಟು ಕುಸಿತ ಕಂಡಿದೆ.

ಜಿಲ್ಲೆಯಲ್ಲಿ ೩೪ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಿದರೂ ಖರೀದಿ ಪ್ರಕ್ರಿಯೆ ವಿಳಂಬವಾಗಿತ್ತು. ೨೦೨೪-೨೫ನೇ ಸಾಲಿನಲ್ಲಿ ಜಿಲೆ ಯಲ್ಲಿ ೧೫೯೧ ರೈತರು ೪೬,೬೦೭ ಕ್ವಿಂಟಾಲ್ ಭತ್ತ ಪೂರೈಸುವುದಾಗಿ ನೋಂದಣಿ ಮಾಡಿಸಿದ್ದರು.

ಆದರೆ, ಒಂದು ಕಿಲೋ ಭತ್ತವೂ ಪೂರೈಕೆಯಾಗಿಲ್ಲ. ಹಾಗೆಯೇ ೧೭,೭೫೧ ರೈತರು ೨,೬೪,೪೩೧ ಕ್ವಿಂಟಾಲ್ ರಾಗಿ ಪೂರೈಕೆಗೆ ನೋಂದಾಯಿಸಿಕೊಂಡಿದ ರು. ಆದರೆ, ಏ.೨ರವರೆಗೆ ಕೇವಲ ೨೧೭೭ ರೈತರಿಂದ ೩೨,೮೭೮.೫೦ ಕ್ವಿಂಟಾಲ್ ರಾಗಿ ಮಾತ್ರ ಪೂರೈಕೆಯಾಗಿದೆ.

ಜಿಲ್ಲೆಯಲ್ಲಿ ಸಾಮಾನ್ಯವಾಗಿ ಈ ಹಿಂದೆ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಖರೀದಿ ಕೇಂದ್ರಗಳು ಆರಂಭವಾಗುತ್ತಿದ್ದವು. ಆದರೆ,  ೨-೩ ವರ್ಷಗಳಿಂದ ಜನವರಿ,ಫೆಬ್ರವರಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ.  ೨೦೨೪ರಲ್ಲೂ ಫೆಬ್ರವರಿ ಮಧ್ಯಭಾಗದಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿತ್ತು.

ಈ ವರ್ಷ ಮಾರ್ಚ್‌ನಿಂದ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಸರ್ಕಾರದ ಪ್ರಕಟಣೆಯಂತೆ ಜನವರಿ ೧ರಿಂದಲೇ ಖರೀದಿ ಕೇಂದ್ರಗಳು ಆರಂಭಗೊಳ್ಳಬೇಕಿತ್ತು. ಆದರೆ, ಕೆಲ ದಿನಗಳ ಬಳಿಕ (ಫೆ.೧೫ರಿಂದ) ಆರಂಭಿಸುವುದಾಗಿ ಸರ್ಕಾರ ಮರು ಪ್ರಕಟಣೆ ಹೊರಡಿಸಿತ್ತು.  ಆದಾಗ್ಯೂ ಫೆಬ್ರವರಿ ಕಡೆಯ ವಾರ ಖರೀದಿ ಕೇಂದ್ರಗಳನ್ನು ತೆರೆಯಲಾಯಿತಾದರೂ ಕೇವಲ ಭತ್ತವನ್ನು ಮಾತ್ರ ಸ್ವೀಕರಿಸಲಾಯಿತು. ರಾಗಿ ಖರೀದಿಗೆ ಅವಧಿ ವಿಸ್ತರಣೆ ಮಾಡಿದ್ದರೂ ರೈತರು ಆಸಕ್ತಿ ತೋರುತ್ತಿಲ್ಲ.

ಬಣಗುಟ್ಟುತ್ತಿರುವ ಧಾನ್ಯ ಖರೀದಿ ಕೇಂದ್ರ: ಭತ್ತ, ರಾಗಿ ಕಟಾವು ಮತ್ತು ಒಕ್ಕಣೆ ಆರಂಭವಾಗುವುದಕ್ಕೂ ಮುನ್ನವೇ ಖರೀದಿ ಕೇಂದ್ರಗಳನ್ನು ತೆರೆದರೆ ಮಾರುಕಟ್ಟೆಯಲ್ಲಿ ಪೈಪೋಟಿ ಇರುತ್ತದೆ. ಹೀಗಾಗಿ ಬೆಲೆ ಎಲ್ಲಿ ಹೆಚ್ಚಾಗಿ ಸಿಗುತ್ತದೆಯೋ   ಅಲ್ಲಿಗೆ ರೈತರು ಧಾನ್ಯ ಪೂರೈಸುತ್ತಾರೆ. ಆದರೆ, ಈ ವರ್ಷ ಖರೀದಿ ಕೇಂದ್ರ ತೆರೆಯುವುದು ೩-೪ ತಿಂಗಳು ವಿಳಂಬವಾದ ಕಾರಣ ರೈತರು ದಲ್ಲಾಳಿಗಳಿಗೆ ಮಾರಾಟ ಮಾಡಿದ್ದಾರೆ.

ಹಿಂದಿನಂತೆ ಈಗ ಧಾನ್ಯಗಳನ್ನು ಸಂಗ್ರಹಿಸಿಟ್ಟುಕೊಳ್ಳಲು ರೈತರ ಬಳಿ ಸ್ಥಳಾವಕಾಶವಿಲ್ಲ. ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಲ್ಲೂ  ಹಿಂದೆ ಇದ್ದ  ಕಣಜ, ಗೂಡೆ ಮತ್ತು ಗುಡಾಣಗಳು ಈಗ ಮಾಯವಾಗಿವೆ.  ಹೀಗಾಗಿ ಮನೆಗೆ ಅಗತ್ಯವಿರುವಷ್ಟು ಪ್ರಮಾಣದ ಭತ್ತ, ರಾಗಿಯನ್ನು ಮಾತ್ರ ಇಟ್ಟುಕೊಂಡು ಉಳಿದದ್ದನ್ನು ಜಮೀನಿನಲ್ಲೇ ರೈತರು ದಲ್ಲಾಳಿಗಳಿಗೆ ಮಾರಾಟ ಮಾಡಿದ್ದಾರೆ. ಖರೀದಿ ಕೇಂದ್ರಕ್ಕೆ ಭತ್ತ ಪೂರೈಸುವುದಾದರೆ ಸಾಗಣೆ ವೆಚ್ಚ,  ಕಾರ್ಮಿಕರ ಕೂಲಿ, ಚೀಲಕ್ಕೆ ಹಣ ನೀಡಬೇಕು. ಜೊತೆಗೆ, ಭತ್ತ ಪೂರೈಸಿ ಹಣಕ್ಕಾಗಿ  ತಿಂಗಳುಗಟ್ಟಲೆ ಕಾಯಬೇಕು.

ಆದರೆ, ದಲ್ಲಾಳಿಗಳಿಗೆ ನೀಡಿದರೆ ಇದ್ಯಾವ ವೆಚ್ಚದ ಹೊರೆಯೂ ಇರುವುದಿಲ್ಲ.  ಸಮಯವೂ ಉಳಿತಾಯವಾಗುತ್ತದೆ. ಭತ್ತ ಕೊಟ್ಟ ಮೂರ್ನಾಲ್ಕು  ದಿನಗಳಲ್ಲಿ ದಲ್ಲಾಳಿಗಳು ಹಣವನ್ನು ಪಾವತಿಸುತ್ತಾರೆ.  ಹೀಗಾಗಿ ರೈತರು ಬೆಳೆದ ಭತ್ತ, ರಾಗಿ ದಲ್ಲಾಳಿಗಳ ಪಾಲಾಗಿದೆ.

” ಡಿಸೆಂಬರ್ ತಿಂಗಳಲ್ಲೇ ಖರೀದಿ ಕೇಂದ್ರ ತೆರೆದರೆ ಉತ್ತಮ ಭತ್ತದ ಕೂಯ್ಲು ಡಿಸೆಂಬರ್ ತಿಂಗಳಿನಿಂದಲೇ ಆರಂಭವಾಗುತ್ತದೆ.  ಆಗಲೇ ಖರೀದಿ ಕೇಂದ್ರ ತೆರೆದರೆ ರೈತರು ಸರಬರಾಜು ಮಾಡುತ್ತಾರೆ.  ಸರ್ಕಾರ ಖರೀದಿ ಕೇಂದ್ರ ತೆರೆಯುವುದನ್ನು ವಿಳಂಬ ಮಾಡಿದ್ದರಿಂದಾಗಿ ದಲ್ಲಾಳಿಗಳಿಗೆ ನೀಡಿದ್ದಾರೆ. ದಲ್ಲಾಳಿಗಳು ಸಹ ಸರ್ಕಾರ ನಿಗದಿ ಮಾಡಿದ್ದ ಬೆಂಬಲ ಬೆಲೆಯನ್ನೇ ನೀಡಿ ಕೊಳ್ಳುವುದರಿಂದ ಹಾಗೂ ಸ್ಥಳದಲ್ಲೇ ಹಣ ನೀಡುವುದರಿಂದ ರೈತರಿಗೆ ಬಹಳ ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಖರೀದಿ ಕೇಂದ್ರಕ್ಕೆ ಭತ್ತವನ್ನು ಸರಬರಾಜು ಮಾಡದೆ ದಲ್ಲಾಳಿಗಳಿಗೇ ನೀಡಿದ್ದಾರೆ” .

 – ಕೆ.ಸಿ. ಮಂಜುನಾಥ್, ರೈತ, ಕಲ್ಲಹಳ್ಳಿ

” ಧಾನ್ಯ ಖರೀದಿ ಪ್ರಕ್ರಿಯೆ ಆರಂಭಕ್ಕೆ ಪೂರಕವಾದ ಸಾಫ್ಟ್‌ವೇರ್ ಪರಿಷ್ಕರಣೆ ಆಗುವುದು ಸಾಕಷ್ಟು ವಿಳಂಬವಾಯಿತು. ಹೀಗಾಗಿ ಪ್ರಕ್ರಿಯೆಯೂ ತಡವಾಗಿದೆ. ೨೦೨೪ರ ಡಿಸೆಂಬರ್ ಮೊದಲ ವಾರವೇ ಭತ್ತ ಮತ್ತು ರಾಗಿ ಖರೀದಿಸುವ ಸಂಬಂಧ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ ೩,೫೦೦-೩,೬೦೦ ರೂ. ಇದೆ. ಆದರೆ, ನಮ್ಮಲ್ಲಿ ೪,೨೯೦ ರೂ. ನೀಡಲಾಗುತ್ತಿದೆ. ಆದರೂ ಖರೀದಿ ಕೇಂದ್ರಗಳಿಗೆ ರೈತರು ರಾಗಿ ತಂದು ಕೊಡುವ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ರಾಗಿ ಪೂರೈಸುವಂತೆ ಕರಪತ್ರ ವಿತರಣೆ ಮತ್ತು ಪ್ರಚಾರ ಕಾರ್ಯ ಮಾಡಲಾಗುತ್ತಿದ್ದು, ಖರೀದಿ ಕೇಂದ್ರದತ್ತ ರೈತರು ಬರುತ್ತಿದ್ದಾರೆ.”

– ಎಂ.ಪಿ. ಕೃಷ್ಣಕುಮಾರ್, ಜಂಟಿ ನಿರ್ದೇಶಕರು, ಆಹಾರ ಇಲಾಖೆ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

7 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

7 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

7 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

7 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

7 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago