Andolana originals

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ

ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ

ಎಚ್.ಡಿ.ಕೋಟೆ: ಮಾರುಕಟ್ಟೆ ಬಂದ್ ಆಗಲಿದೆ ಎಂಬ ಆತಂಕದಿಂದ ನೂರಾರು ರೈತರು ತಾವು ಬೆಳೆದಿರುವ ಹೊಗೆಸೊಪ್ಪಿನ ಸಾವಿರಾರು ಬೇಲ್ಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹರಸಾಹಸಪಡುತ್ತಿದ್ದಾರೆ. ಪಟ್ಟಣ ಸಮೀಪದ ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿನ ಅಧಿಕಾರಿಗಳು ಇನ್ನು ಎರಡು ದಿನಗಳು ಮಾತ್ರ ಮಾರಾಟ ಕೇಂದ್ರ ತೆರೆದಿರುತ್ತದೆ.

ಆನಂತರ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಕೋಟೆ, ನಂಜನಗೂಡು, ಗುಂಡ್ಲುಪೇಟೆ, ಹುಣಸೂರು ಈ ಭಾಗದ ಹೊಗೆಸೊಪ್ಪು ರೈತರಿಗೆ ವಿಚಾರ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಮವಾರ ನೂರಾರು ರೈತರು ಟ್ರಾಕ್ಟರ್, ಲಾರಿ, ಟೆಂಪೋಗಳ ಮೂಲಕ ಎರಡೂವರೆ ಸಾವಿರಕ್ಕೂ ಹೆಚ್ಚು ಹೊಗೆಸೊಪ್ಪು ಬೇಲ್ಗಳನ್ನು ಮಾರಾಟ ಮಾಡಲು ಹರಾಜು ಮಾರುಕಟ್ಟೆಗೆ ತಂದಿದ್ದರು. ನಂತರ ರೈತರಿಗೆ ಸೂಕ್ತ ಸ್ಥಳಗಳಲ್ಲಿ ಬೇಲ್‌ಗಳನ್ನು ಇಡಲು ಸಾಧ್ಯವಾಗದೆ ನರಕ ಯಾತನೆ ಪಡುವ ಪರಿಸ್ಥಿತಿಎದುರಾಗಿ, ಎಲ್ಲೆಂದರಲ್ಲಿ ಬೇಲ್‌ಗಳು ಬೀದಿಪಾಲಾಗಿ ಬಿದ್ದಿದ್ದವು. ಮಾರಾಟಕ್ಕೆ ತಂದಿರುವ ಹೊಗೆಸೊಪ್ಪಿಗೆ ಮಾರುಕಟ್ಟೆ ಯಲ್ಲಿ ಉತ್ತಮ ಬೆಲೆ ನೀಡದೆ

ಕೆಲವೊಂದನ್ನು ವಾಪಸ್ ಮಾಡುತ್ತಿದ್ದರೆ, ಮತ್ತೆ ಕೆಲವನ್ನು ಮತ್ತಷ್ಟು ಕಡಿಮೆ ಬೆಲೆಗೆ ಕೆಲ ದಲ್ಲಾಳಿಗಳು ಮತ್ತು ವ್ಯಾಪಾರಸ್ಥರು ಪಡೆದುಕೊಳ್ಳುತ್ತಿದ್ದುದು ಕಂಡುಬಂದಿತು.

ರೈತರು ತಂದಿರುವ ಹೊಗೆಸೊಪ್ಪಿನ ಬೇಲ್‌ಗಳು ಸಂಪೂರ್ಣ ಮಾರಾಟ ವಾಗಬೇಕಾದರೆ ಇನ್ನೂ ಎರಡು ಮೂರು ದಿನಗಳು ಬೇಕಾಗಿವೆ. ಜತೆಗೆ ಇನ್ನಷ್ಟು ರೈತರು ಹೊಗೆಸೊಪ್ಪನ್ನು ಮಾರುಕಟ್ಟೆಗೆ ತರುತ್ತಿದ್ದಾರೆ. ವಾಹನ ಗಳಲ್ಲಿ ತಂದು ಎಲ್ಲೆಂದರಲ್ಲಿ ಹೊಗೆ ಸೊಪ್ಪಿನ ಬೇಲ್ಗಳು ಸಂಗ್ರಹ ಇಟ್ಟಿರುವುದರಿಂದ ಮಳೆ ಬಂದರೆ ಕೋಟ್ಯಂತರ ರೂ. ಬೆಲೆ ಬಾಳುವ ಹೊಗೆಸೊಪ್ಪು ನೀರು ಪಾಲಾಗಲಿದೆ. ಆಗ ರೈತರು ಸಂಪೂರ್ಣವಾಗಿ ಬೀದಿಗೆ ಬೀಳಲಿದ್ದಾರೆ.

ಇಷ್ಟೊಂದು ಸಮಸ್ಯೆಗಳು ಎದುರಾಗಿದ್ದರೂ ಸಂಘ ಸಂಸ್ಥೆಯವರಾಗಲಿ, ರೈತ ಮುಖಂಡರಾಗಲಿ, ಜನಪ್ರತಿನಿಧಿಗಳಾಗಲಿ ರೈತರಿಗೆ ಸ್ಪಂದಿಸದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಾರಿ ಹೊಗೆಸೊಪ್ಪು ಬೆಳೆದ ರೈತರು ಮಾರಾಟ ಮಾಡಲು ಹಾಗೂ ಸೂಕ್ತ ಬೆಲೆ ಇಲ್ಲದೆ ಕಳೆದ ಮೂರು ತಿಂಗಳಿನಿಂದ ಪಡುತ್ತಿರುವ ಕಷ್ಟ ಹೇಳತೀರದಾಗಿದೆ. ಇನ್ನು ಮುಂದಾದರೂ ಸೂಕ್ತವಾದ ಬೆಲೆ ಕೊಡಿಸುವಲ್ಲಿ ಸಂಬಂಧಪಟ್ಟವರು ಮುಂದಾಗಬೇಕಿದೆ.

” ಎರಡು ದಿನಗಳಲ್ಲಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿತ್ತು. ಎಲೆಹುಂಡಿ ಆದರೆ, ರೈತರು ಹೆಚ್ಚಿನ ಪ್ರಮಾಣದಲ್ಲಿ ತಂಬಾಕು ಬೇಲ್‌ಗಳನ್ನು ತರುತ್ತಿದ್ದಾರೆ. ಸೋಮವಾರ ಒಂದೇ ದಿನ ೩ ಸಾವಿರ ಬೇಲ್‌ಗಳನ್ನು ತಂದಿದ್ದಾರೆ. ಇದೇ ಎರಡು ದಿನಗಳ ಕಾಲ ಮಾರಾಟ ಮಾಡುವಷ್ಟಿದೆ. ಮತ್ತಷ್ಟು ಬೇಲ್‌ಗಳನ್ನು ತರುವ ಸಾಧ್ಯತೆ ಇದೆ. ಹಾಗಾಗಿ ಶನಿವಾರದವರೆಗೂ ಮಾರುಕಟ್ಟೆ ಮುಂದುವರಿಸಲು ತೀರ್ಮಾನಿಸಲಾಗಿದೆ. ತಂಬಾಕು ತಂದಿರುವ ರೈತರಿಗೆ ಮಳೆಯಿಂದ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.”

-ವಿಜಯಕುಮಾರ್, ಅಧಿಕ್ಷಕ, ತಂಬಾಕು ಮಂಡಳಿ ಹರಾಜು ಮಾರುಕಟ್ಟೆ 

” ಅಧಿಕಾರಿಗಳು ನೀಡಿದ ಸೂಚನೆ ಮೇರೆಗೆ ನಾವು ಹೊಗೆಸೊಪ್ಪನ್ನು ಮಾರಾಟ ಮಾಡಲು ಮಾರುಕಟ್ಟೆಗೆ ತಂದಿದ್ದೇವೆ. ಒಟ್ಟಿಗೆ ಎಲ್ಲ ರೈತರು ತಂದಿದ್ದರಿಂದ ಇಲ್ಲಿ ಅವ್ಯವಸ್ಥೆ ಉಂಟಾಗಿದೆ. ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಇನ್ನು ಕೆಲ ದಿನಗಳ ಕಾಲ ಮಾರುಕಟ್ಟೆ ನಡೆಸಲು ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ.”

-ವೆಂಕಟೇಗೌಡ, ಹೊಗೆಸೊಪ್ಪು ರೈತ, ಎಲೆಹುಂಡಿ

 

 

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

5 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

5 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

14 hours ago