Andolana originals

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ

ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ

ಎಚ್.ಡಿ.ಕೋಟೆ: ಮಾರುಕಟ್ಟೆ ಬಂದ್ ಆಗಲಿದೆ ಎಂಬ ಆತಂಕದಿಂದ ನೂರಾರು ರೈತರು ತಾವು ಬೆಳೆದಿರುವ ಹೊಗೆಸೊಪ್ಪಿನ ಸಾವಿರಾರು ಬೇಲ್ಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹರಸಾಹಸಪಡುತ್ತಿದ್ದಾರೆ. ಪಟ್ಟಣ ಸಮೀಪದ ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿನ ಅಧಿಕಾರಿಗಳು ಇನ್ನು ಎರಡು ದಿನಗಳು ಮಾತ್ರ ಮಾರಾಟ ಕೇಂದ್ರ ತೆರೆದಿರುತ್ತದೆ.

ಆನಂತರ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಕೋಟೆ, ನಂಜನಗೂಡು, ಗುಂಡ್ಲುಪೇಟೆ, ಹುಣಸೂರು ಈ ಭಾಗದ ಹೊಗೆಸೊಪ್ಪು ರೈತರಿಗೆ ವಿಚಾರ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಮವಾರ ನೂರಾರು ರೈತರು ಟ್ರಾಕ್ಟರ್, ಲಾರಿ, ಟೆಂಪೋಗಳ ಮೂಲಕ ಎರಡೂವರೆ ಸಾವಿರಕ್ಕೂ ಹೆಚ್ಚು ಹೊಗೆಸೊಪ್ಪು ಬೇಲ್ಗಳನ್ನು ಮಾರಾಟ ಮಾಡಲು ಹರಾಜು ಮಾರುಕಟ್ಟೆಗೆ ತಂದಿದ್ದರು. ನಂತರ ರೈತರಿಗೆ ಸೂಕ್ತ ಸ್ಥಳಗಳಲ್ಲಿ ಬೇಲ್‌ಗಳನ್ನು ಇಡಲು ಸಾಧ್ಯವಾಗದೆ ನರಕ ಯಾತನೆ ಪಡುವ ಪರಿಸ್ಥಿತಿಎದುರಾಗಿ, ಎಲ್ಲೆಂದರಲ್ಲಿ ಬೇಲ್‌ಗಳು ಬೀದಿಪಾಲಾಗಿ ಬಿದ್ದಿದ್ದವು. ಮಾರಾಟಕ್ಕೆ ತಂದಿರುವ ಹೊಗೆಸೊಪ್ಪಿಗೆ ಮಾರುಕಟ್ಟೆ ಯಲ್ಲಿ ಉತ್ತಮ ಬೆಲೆ ನೀಡದೆ

ಕೆಲವೊಂದನ್ನು ವಾಪಸ್ ಮಾಡುತ್ತಿದ್ದರೆ, ಮತ್ತೆ ಕೆಲವನ್ನು ಮತ್ತಷ್ಟು ಕಡಿಮೆ ಬೆಲೆಗೆ ಕೆಲ ದಲ್ಲಾಳಿಗಳು ಮತ್ತು ವ್ಯಾಪಾರಸ್ಥರು ಪಡೆದುಕೊಳ್ಳುತ್ತಿದ್ದುದು ಕಂಡುಬಂದಿತು.

ರೈತರು ತಂದಿರುವ ಹೊಗೆಸೊಪ್ಪಿನ ಬೇಲ್‌ಗಳು ಸಂಪೂರ್ಣ ಮಾರಾಟ ವಾಗಬೇಕಾದರೆ ಇನ್ನೂ ಎರಡು ಮೂರು ದಿನಗಳು ಬೇಕಾಗಿವೆ. ಜತೆಗೆ ಇನ್ನಷ್ಟು ರೈತರು ಹೊಗೆಸೊಪ್ಪನ್ನು ಮಾರುಕಟ್ಟೆಗೆ ತರುತ್ತಿದ್ದಾರೆ. ವಾಹನ ಗಳಲ್ಲಿ ತಂದು ಎಲ್ಲೆಂದರಲ್ಲಿ ಹೊಗೆ ಸೊಪ್ಪಿನ ಬೇಲ್ಗಳು ಸಂಗ್ರಹ ಇಟ್ಟಿರುವುದರಿಂದ ಮಳೆ ಬಂದರೆ ಕೋಟ್ಯಂತರ ರೂ. ಬೆಲೆ ಬಾಳುವ ಹೊಗೆಸೊಪ್ಪು ನೀರು ಪಾಲಾಗಲಿದೆ. ಆಗ ರೈತರು ಸಂಪೂರ್ಣವಾಗಿ ಬೀದಿಗೆ ಬೀಳಲಿದ್ದಾರೆ.

ಇಷ್ಟೊಂದು ಸಮಸ್ಯೆಗಳು ಎದುರಾಗಿದ್ದರೂ ಸಂಘ ಸಂಸ್ಥೆಯವರಾಗಲಿ, ರೈತ ಮುಖಂಡರಾಗಲಿ, ಜನಪ್ರತಿನಿಧಿಗಳಾಗಲಿ ರೈತರಿಗೆ ಸ್ಪಂದಿಸದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಾರಿ ಹೊಗೆಸೊಪ್ಪು ಬೆಳೆದ ರೈತರು ಮಾರಾಟ ಮಾಡಲು ಹಾಗೂ ಸೂಕ್ತ ಬೆಲೆ ಇಲ್ಲದೆ ಕಳೆದ ಮೂರು ತಿಂಗಳಿನಿಂದ ಪಡುತ್ತಿರುವ ಕಷ್ಟ ಹೇಳತೀರದಾಗಿದೆ. ಇನ್ನು ಮುಂದಾದರೂ ಸೂಕ್ತವಾದ ಬೆಲೆ ಕೊಡಿಸುವಲ್ಲಿ ಸಂಬಂಧಪಟ್ಟವರು ಮುಂದಾಗಬೇಕಿದೆ.

” ಎರಡು ದಿನಗಳಲ್ಲಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿತ್ತು. ಎಲೆಹುಂಡಿ ಆದರೆ, ರೈತರು ಹೆಚ್ಚಿನ ಪ್ರಮಾಣದಲ್ಲಿ ತಂಬಾಕು ಬೇಲ್‌ಗಳನ್ನು ತರುತ್ತಿದ್ದಾರೆ. ಸೋಮವಾರ ಒಂದೇ ದಿನ ೩ ಸಾವಿರ ಬೇಲ್‌ಗಳನ್ನು ತಂದಿದ್ದಾರೆ. ಇದೇ ಎರಡು ದಿನಗಳ ಕಾಲ ಮಾರಾಟ ಮಾಡುವಷ್ಟಿದೆ. ಮತ್ತಷ್ಟು ಬೇಲ್‌ಗಳನ್ನು ತರುವ ಸಾಧ್ಯತೆ ಇದೆ. ಹಾಗಾಗಿ ಶನಿವಾರದವರೆಗೂ ಮಾರುಕಟ್ಟೆ ಮುಂದುವರಿಸಲು ತೀರ್ಮಾನಿಸಲಾಗಿದೆ. ತಂಬಾಕು ತಂದಿರುವ ರೈತರಿಗೆ ಮಳೆಯಿಂದ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.”

-ವಿಜಯಕುಮಾರ್, ಅಧಿಕ್ಷಕ, ತಂಬಾಕು ಮಂಡಳಿ ಹರಾಜು ಮಾರುಕಟ್ಟೆ 

” ಅಧಿಕಾರಿಗಳು ನೀಡಿದ ಸೂಚನೆ ಮೇರೆಗೆ ನಾವು ಹೊಗೆಸೊಪ್ಪನ್ನು ಮಾರಾಟ ಮಾಡಲು ಮಾರುಕಟ್ಟೆಗೆ ತಂದಿದ್ದೇವೆ. ಒಟ್ಟಿಗೆ ಎಲ್ಲ ರೈತರು ತಂದಿದ್ದರಿಂದ ಇಲ್ಲಿ ಅವ್ಯವಸ್ಥೆ ಉಂಟಾಗಿದೆ. ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಇನ್ನು ಕೆಲ ದಿನಗಳ ಕಾಲ ಮಾರುಕಟ್ಟೆ ನಡೆಸಲು ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ.”

-ವೆಂಕಟೇಗೌಡ, ಹೊಗೆಸೊಪ್ಪು ರೈತ, ಎಲೆಹುಂಡಿ

 

 

ಆಂದೋಲನ ಡೆಸ್ಕ್

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

22 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

52 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 hours ago