Andolana originals

ಕೋಟೆ: ೩ ದಿನಗಳಿಂದ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತೋಟಗಾರಿಕೆ ಬೆಳೆಗಳಿಗೆ ಅನುಕೂಲ

ಧಾರಾಕಾರ ಮಳೆಯಿಂದ ಶುಂಠಿ, ತೊಗರಿ ಬೆಳೆಗೆ ಹಾನಿ

ಮಂಜು ಕೋಟೆ

ಎಚ್.ಡಿ.ಕೋಟೆ: ಫೆಂಗಲ್ ಚಂಡಮಾರುತದ ಪರಿಣಾಮ ೨-೩ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ತಾಲ್ಲೂಕಿನಲ್ಲಿ ರೈತರು ಬೆಳೆದಿದ್ದ ಶುಂಠಿ ತೊಗರಿ, ಭತ್ತದ ಬೆಳೆಗೆ ಹಾನಿಯಾಗಿದೆ.

ಇನ್ನೊಂದು ಕಡೆ ತೋಟಗಾರಿಕೆ ಬೆಳೆಗಳು ಮತ್ತು ಹುರುಳಿ, ರಾಗಿ ಇನ್ನಿತರ ಬೆಳೆಗಳಿಗೆ ಅನುಕೂಲವಾಗಿದೆ.

ಭಾನುವಾರ ರಾತ್ರಿಯಿಂದ ಶುರುವಾದ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತಲ್ಲದೆ, ರೈತರು ಬೆಳೆದಿದ್ದ ಶುಂಠಿ, ತೊಗರಿ, ಭತ್ತದ ಬೆಳೆಗಳಿಗೆ ಹಾನಿಯಾಗಿದೆ. ಕಳೆದ ವರ್ಷ ಶುಂಠಿ ಬೆಳೆಗೆ ಬಂಪರ್ ಬೆಲೆ ಸಿಕ್ಕಿದ್ದರಿಂದ ಈ ವರ್ಷ ತಾಲ್ಲೂಕಿನ ಅನೇಕ ರೈತರು ಶುಂಠಿ ಬೆಳೆಯನ್ನು ಸಾಲ ಮಾಡಿ ಬೆಳೆದಿದ್ದರು. ಈ ಬಾರಿ ಶುಂಠಿ ಬೆಳೆ ಫಲವತ್ತಾಗಿ ಬಂದಿದ್ದರೂ ದಾಖಲೆ ಮಟ್ಟದಲ್ಲಿ ಶುಂಠಿ ದರ ಇಳಿಮುಖಗೊಂಡಿದೆ. ಇದರಿಂದ ಮುಂಬರುವ ದಿನಗಳಲ್ಲಿ ಬೆಲೆ ಏರಿಕೆ ಆಗುವ ನಿರೀಕ್ಷೆಯಲ್ಲಿ ಬೆಳೆಯನ್ನು ಹಾಗೆಯೇ ಬಿಟ್ಟುಕೊಂಡು ಕಾಯುತ್ತಿದ್ದರು. ಈ ನಡುವೆ ಫೆಂಗಲ್ ಸೈಕ್ಲೋನ್ ಮಳೆ ಸುರಿದಿದ್ದರಿಂದ ಬೆಳೆಗೆ ರೋಗ ಕಾಣಿಸಿಕೊಂಡು ಕೊಳೆಯುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ, ಅವರೆ, ತೊಗರಿ ಬೆಳೆಗಳಿಗೂ ತೊಂದರೆಯಾಗಿದೆ.

ಮಳೆ ಎಡೆಬಿಡದೆ ಸುರಿಯುತ್ತಿದ್ದುದರಿಂದ ಜನರು ಮನೆಯಿಂದ ಹೊರ ಬಾರದಂತಾಗಿತ್ತು. ಪಟ್ಟಣದ ಹೋಟೆಲ್‌ಗಳು, ಅಂಗಡಿಗಳಲ್ಲಿ ಗ್ರಾಹಕರು ಹೆಚ್ಚಾಗಿ ಕಂಡುಬರಲಿಲ್ಲ. ರಸ್ತೆಯಲ್ಲಿ ಜನಸಂಚಾರ ವಿರಳವಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಒಟ್ಟಾರೆ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.

ಸುತ್ತೂರು ಸುತ್ತಮುತ್ತ ಸತತ ಮಳೆಗೆ ನೆಲ ಕಚ್ಚಿದ ಭತ್ತದ ಬೆಳೆ

ಸುತ್ತೂರು: ಧಾರಾಕಾರ ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲ ಕಚ್ಚಿದೆ. ಸುತ್ತೂರು, ಹೊಸಕೋಟೆ, ಬಿಳುಗಲಿ, ಜೀಮಾರಳ್ಳಿ, ಮೂಡಳ್ಳಿ, ಆಲತ್ತೂರು, ಸಾಲುಂಡಿ, ಹರಿಹರಪುರ, ತಾಯೂರು ಮುಂತಾದ ಗ್ರಾಮಗಳಲ್ಲಿ ರೈತರು ಉತ್ತಮವಾಗಿ ಭತ್ತ ಬೆಳೆದಿದ್ದು, ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಕಟಾವಿಗೆ ಬಂದಿದ್ದ ಬೆಳೆಗಳು ನೀರಿನಲ್ಲಿ ಸಿಲುಕಿ ಸಂಪೂರ್ಣ ನೆಲಕಚ್ಚಿವೆ. ಕಳೆದ ವರ್ಷ ರೈತರು ಮಳೆ, ಬೆಳೆ ಇಲ್ಲದೆ ನಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮವಾಗಿ ಬಂದಿದ್ದ ಬೆಳೆ ಮಳೆಯಿಂದ ಹಾನಿಗೀಡಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ನಷ್ಟ ಹೊಂದಿದ ರೈತರಿಗೆ ಬೆಳೆ ಪರಿಹಾರ ಕೊಡಿಸಬೇಕೆಂದು ಈ ಭಾಗದ ರೈತ ಮುಖಂಡರಾದ ಸಾಲುಂಡಿ ಜಯಪ್ಪ, ಸುತ್ತೂರು ಲಿಂಗರಾಜು, ಲಕ್ಷ್ಮಣನಾಯಕ ಒತ್ತಾಯ ಮಾಡಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಳೆದ ೨ ದಿನಗಳಿಂದ ೫೫ ಮಿಲಿ ಮೀಟರ್ ಮಳೆಯಾಗಿದೆ. ಶುಂಠಿ, ಭತ್ತ, ತೊಗರಿ ಬೆಳೆಗಳಿಗೆ ಮಾತ್ರ ಸ್ವಲ್ಪ ಹಾನಿಯಾಗಿದ್ದು, ಇನ್ನುಳಿದ ಎಲ್ಲಾ ಬೆಳೆಗಳಿಗೂ ಈ ಮಳೆಯಿಂದ ಅನುಕೂಲವಾಗಿದೆ.

-ಜಯರಾಮಯ್ಯ, ತಾಲ್ಲೂಕು ಕೃಷಿ ನಿರ್ದೇಶಕರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

19 mins ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

1 hour ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

2 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 hours ago