Andolana originals

ಕೋಟೆ: ೩ ದಿನಗಳಿಂದ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತೋಟಗಾರಿಕೆ ಬೆಳೆಗಳಿಗೆ ಅನುಕೂಲ

ಧಾರಾಕಾರ ಮಳೆಯಿಂದ ಶುಂಠಿ, ತೊಗರಿ ಬೆಳೆಗೆ ಹಾನಿ

ಮಂಜು ಕೋಟೆ

ಎಚ್.ಡಿ.ಕೋಟೆ: ಫೆಂಗಲ್ ಚಂಡಮಾರುತದ ಪರಿಣಾಮ ೨-೩ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ತಾಲ್ಲೂಕಿನಲ್ಲಿ ರೈತರು ಬೆಳೆದಿದ್ದ ಶುಂಠಿ ತೊಗರಿ, ಭತ್ತದ ಬೆಳೆಗೆ ಹಾನಿಯಾಗಿದೆ.

ಇನ್ನೊಂದು ಕಡೆ ತೋಟಗಾರಿಕೆ ಬೆಳೆಗಳು ಮತ್ತು ಹುರುಳಿ, ರಾಗಿ ಇನ್ನಿತರ ಬೆಳೆಗಳಿಗೆ ಅನುಕೂಲವಾಗಿದೆ.

ಭಾನುವಾರ ರಾತ್ರಿಯಿಂದ ಶುರುವಾದ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತಲ್ಲದೆ, ರೈತರು ಬೆಳೆದಿದ್ದ ಶುಂಠಿ, ತೊಗರಿ, ಭತ್ತದ ಬೆಳೆಗಳಿಗೆ ಹಾನಿಯಾಗಿದೆ. ಕಳೆದ ವರ್ಷ ಶುಂಠಿ ಬೆಳೆಗೆ ಬಂಪರ್ ಬೆಲೆ ಸಿಕ್ಕಿದ್ದರಿಂದ ಈ ವರ್ಷ ತಾಲ್ಲೂಕಿನ ಅನೇಕ ರೈತರು ಶುಂಠಿ ಬೆಳೆಯನ್ನು ಸಾಲ ಮಾಡಿ ಬೆಳೆದಿದ್ದರು. ಈ ಬಾರಿ ಶುಂಠಿ ಬೆಳೆ ಫಲವತ್ತಾಗಿ ಬಂದಿದ್ದರೂ ದಾಖಲೆ ಮಟ್ಟದಲ್ಲಿ ಶುಂಠಿ ದರ ಇಳಿಮುಖಗೊಂಡಿದೆ. ಇದರಿಂದ ಮುಂಬರುವ ದಿನಗಳಲ್ಲಿ ಬೆಲೆ ಏರಿಕೆ ಆಗುವ ನಿರೀಕ್ಷೆಯಲ್ಲಿ ಬೆಳೆಯನ್ನು ಹಾಗೆಯೇ ಬಿಟ್ಟುಕೊಂಡು ಕಾಯುತ್ತಿದ್ದರು. ಈ ನಡುವೆ ಫೆಂಗಲ್ ಸೈಕ್ಲೋನ್ ಮಳೆ ಸುರಿದಿದ್ದರಿಂದ ಬೆಳೆಗೆ ರೋಗ ಕಾಣಿಸಿಕೊಂಡು ಕೊಳೆಯುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ, ಅವರೆ, ತೊಗರಿ ಬೆಳೆಗಳಿಗೂ ತೊಂದರೆಯಾಗಿದೆ.

ಮಳೆ ಎಡೆಬಿಡದೆ ಸುರಿಯುತ್ತಿದ್ದುದರಿಂದ ಜನರು ಮನೆಯಿಂದ ಹೊರ ಬಾರದಂತಾಗಿತ್ತು. ಪಟ್ಟಣದ ಹೋಟೆಲ್‌ಗಳು, ಅಂಗಡಿಗಳಲ್ಲಿ ಗ್ರಾಹಕರು ಹೆಚ್ಚಾಗಿ ಕಂಡುಬರಲಿಲ್ಲ. ರಸ್ತೆಯಲ್ಲಿ ಜನಸಂಚಾರ ವಿರಳವಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಒಟ್ಟಾರೆ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.

ಸುತ್ತೂರು ಸುತ್ತಮುತ್ತ ಸತತ ಮಳೆಗೆ ನೆಲ ಕಚ್ಚಿದ ಭತ್ತದ ಬೆಳೆ

ಸುತ್ತೂರು: ಧಾರಾಕಾರ ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲ ಕಚ್ಚಿದೆ. ಸುತ್ತೂರು, ಹೊಸಕೋಟೆ, ಬಿಳುಗಲಿ, ಜೀಮಾರಳ್ಳಿ, ಮೂಡಳ್ಳಿ, ಆಲತ್ತೂರು, ಸಾಲುಂಡಿ, ಹರಿಹರಪುರ, ತಾಯೂರು ಮುಂತಾದ ಗ್ರಾಮಗಳಲ್ಲಿ ರೈತರು ಉತ್ತಮವಾಗಿ ಭತ್ತ ಬೆಳೆದಿದ್ದು, ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಕಟಾವಿಗೆ ಬಂದಿದ್ದ ಬೆಳೆಗಳು ನೀರಿನಲ್ಲಿ ಸಿಲುಕಿ ಸಂಪೂರ್ಣ ನೆಲಕಚ್ಚಿವೆ. ಕಳೆದ ವರ್ಷ ರೈತರು ಮಳೆ, ಬೆಳೆ ಇಲ್ಲದೆ ನಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮವಾಗಿ ಬಂದಿದ್ದ ಬೆಳೆ ಮಳೆಯಿಂದ ಹಾನಿಗೀಡಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ನಷ್ಟ ಹೊಂದಿದ ರೈತರಿಗೆ ಬೆಳೆ ಪರಿಹಾರ ಕೊಡಿಸಬೇಕೆಂದು ಈ ಭಾಗದ ರೈತ ಮುಖಂಡರಾದ ಸಾಲುಂಡಿ ಜಯಪ್ಪ, ಸುತ್ತೂರು ಲಿಂಗರಾಜು, ಲಕ್ಷ್ಮಣನಾಯಕ ಒತ್ತಾಯ ಮಾಡಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಳೆದ ೨ ದಿನಗಳಿಂದ ೫೫ ಮಿಲಿ ಮೀಟರ್ ಮಳೆಯಾಗಿದೆ. ಶುಂಠಿ, ಭತ್ತ, ತೊಗರಿ ಬೆಳೆಗಳಿಗೆ ಮಾತ್ರ ಸ್ವಲ್ಪ ಹಾನಿಯಾಗಿದ್ದು, ಇನ್ನುಳಿದ ಎಲ್ಲಾ ಬೆಳೆಗಳಿಗೂ ಈ ಮಳೆಯಿಂದ ಅನುಕೂಲವಾಗಿದೆ.

-ಜಯರಾಮಯ್ಯ, ತಾಲ್ಲೂಕು ಕೃಷಿ ನಿರ್ದೇಶಕರು.

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

11 mins ago

ಹನೂರು| ಭೈರನತ್ತ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…

31 mins ago

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

4 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

4 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

4 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

4 hours ago