Andolana originals

ಕೋಟೆ: ೩ ದಿನಗಳಿಂದ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತೋಟಗಾರಿಕೆ ಬೆಳೆಗಳಿಗೆ ಅನುಕೂಲ

ಧಾರಾಕಾರ ಮಳೆಯಿಂದ ಶುಂಠಿ, ತೊಗರಿ ಬೆಳೆಗೆ ಹಾನಿ

ಮಂಜು ಕೋಟೆ

ಎಚ್.ಡಿ.ಕೋಟೆ: ಫೆಂಗಲ್ ಚಂಡಮಾರುತದ ಪರಿಣಾಮ ೨-೩ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ತಾಲ್ಲೂಕಿನಲ್ಲಿ ರೈತರು ಬೆಳೆದಿದ್ದ ಶುಂಠಿ ತೊಗರಿ, ಭತ್ತದ ಬೆಳೆಗೆ ಹಾನಿಯಾಗಿದೆ.

ಇನ್ನೊಂದು ಕಡೆ ತೋಟಗಾರಿಕೆ ಬೆಳೆಗಳು ಮತ್ತು ಹುರುಳಿ, ರಾಗಿ ಇನ್ನಿತರ ಬೆಳೆಗಳಿಗೆ ಅನುಕೂಲವಾಗಿದೆ.

ಭಾನುವಾರ ರಾತ್ರಿಯಿಂದ ಶುರುವಾದ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತಲ್ಲದೆ, ರೈತರು ಬೆಳೆದಿದ್ದ ಶುಂಠಿ, ತೊಗರಿ, ಭತ್ತದ ಬೆಳೆಗಳಿಗೆ ಹಾನಿಯಾಗಿದೆ. ಕಳೆದ ವರ್ಷ ಶುಂಠಿ ಬೆಳೆಗೆ ಬಂಪರ್ ಬೆಲೆ ಸಿಕ್ಕಿದ್ದರಿಂದ ಈ ವರ್ಷ ತಾಲ್ಲೂಕಿನ ಅನೇಕ ರೈತರು ಶುಂಠಿ ಬೆಳೆಯನ್ನು ಸಾಲ ಮಾಡಿ ಬೆಳೆದಿದ್ದರು. ಈ ಬಾರಿ ಶುಂಠಿ ಬೆಳೆ ಫಲವತ್ತಾಗಿ ಬಂದಿದ್ದರೂ ದಾಖಲೆ ಮಟ್ಟದಲ್ಲಿ ಶುಂಠಿ ದರ ಇಳಿಮುಖಗೊಂಡಿದೆ. ಇದರಿಂದ ಮುಂಬರುವ ದಿನಗಳಲ್ಲಿ ಬೆಲೆ ಏರಿಕೆ ಆಗುವ ನಿರೀಕ್ಷೆಯಲ್ಲಿ ಬೆಳೆಯನ್ನು ಹಾಗೆಯೇ ಬಿಟ್ಟುಕೊಂಡು ಕಾಯುತ್ತಿದ್ದರು. ಈ ನಡುವೆ ಫೆಂಗಲ್ ಸೈಕ್ಲೋನ್ ಮಳೆ ಸುರಿದಿದ್ದರಿಂದ ಬೆಳೆಗೆ ರೋಗ ಕಾಣಿಸಿಕೊಂಡು ಕೊಳೆಯುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ, ಅವರೆ, ತೊಗರಿ ಬೆಳೆಗಳಿಗೂ ತೊಂದರೆಯಾಗಿದೆ.

ಮಳೆ ಎಡೆಬಿಡದೆ ಸುರಿಯುತ್ತಿದ್ದುದರಿಂದ ಜನರು ಮನೆಯಿಂದ ಹೊರ ಬಾರದಂತಾಗಿತ್ತು. ಪಟ್ಟಣದ ಹೋಟೆಲ್‌ಗಳು, ಅಂಗಡಿಗಳಲ್ಲಿ ಗ್ರಾಹಕರು ಹೆಚ್ಚಾಗಿ ಕಂಡುಬರಲಿಲ್ಲ. ರಸ್ತೆಯಲ್ಲಿ ಜನಸಂಚಾರ ವಿರಳವಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಒಟ್ಟಾರೆ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.

ಸುತ್ತೂರು ಸುತ್ತಮುತ್ತ ಸತತ ಮಳೆಗೆ ನೆಲ ಕಚ್ಚಿದ ಭತ್ತದ ಬೆಳೆ

ಸುತ್ತೂರು: ಧಾರಾಕಾರ ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲ ಕಚ್ಚಿದೆ. ಸುತ್ತೂರು, ಹೊಸಕೋಟೆ, ಬಿಳುಗಲಿ, ಜೀಮಾರಳ್ಳಿ, ಮೂಡಳ್ಳಿ, ಆಲತ್ತೂರು, ಸಾಲುಂಡಿ, ಹರಿಹರಪುರ, ತಾಯೂರು ಮುಂತಾದ ಗ್ರಾಮಗಳಲ್ಲಿ ರೈತರು ಉತ್ತಮವಾಗಿ ಭತ್ತ ಬೆಳೆದಿದ್ದು, ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಕಟಾವಿಗೆ ಬಂದಿದ್ದ ಬೆಳೆಗಳು ನೀರಿನಲ್ಲಿ ಸಿಲುಕಿ ಸಂಪೂರ್ಣ ನೆಲಕಚ್ಚಿವೆ. ಕಳೆದ ವರ್ಷ ರೈತರು ಮಳೆ, ಬೆಳೆ ಇಲ್ಲದೆ ನಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮವಾಗಿ ಬಂದಿದ್ದ ಬೆಳೆ ಮಳೆಯಿಂದ ಹಾನಿಗೀಡಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ನಷ್ಟ ಹೊಂದಿದ ರೈತರಿಗೆ ಬೆಳೆ ಪರಿಹಾರ ಕೊಡಿಸಬೇಕೆಂದು ಈ ಭಾಗದ ರೈತ ಮುಖಂಡರಾದ ಸಾಲುಂಡಿ ಜಯಪ್ಪ, ಸುತ್ತೂರು ಲಿಂಗರಾಜು, ಲಕ್ಷ್ಮಣನಾಯಕ ಒತ್ತಾಯ ಮಾಡಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಳೆದ ೨ ದಿನಗಳಿಂದ ೫೫ ಮಿಲಿ ಮೀಟರ್ ಮಳೆಯಾಗಿದೆ. ಶುಂಠಿ, ಭತ್ತ, ತೊಗರಿ ಬೆಳೆಗಳಿಗೆ ಮಾತ್ರ ಸ್ವಲ್ಪ ಹಾನಿಯಾಗಿದ್ದು, ಇನ್ನುಳಿದ ಎಲ್ಲಾ ಬೆಳೆಗಳಿಗೂ ಈ ಮಳೆಯಿಂದ ಅನುಕೂಲವಾಗಿದೆ.

-ಜಯರಾಮಯ್ಯ, ತಾಲ್ಲೂಕು ಕೃಷಿ ನಿರ್ದೇಶಕರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

8 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

12 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

13 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

13 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago